AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lumpy Skin Disease: ರಾಸುಗಳನ್ನು ಚರ್ಮಗಂಟು ಕಾಯಿಲೆಯಿಂದ ಈ ಲಸಿಕೆ ಕಾಪಾಡಬಲ್ಲದು

ದೇಶೀಯ ಲಸಿಕೆಗಳ ಬಳಕೆಯಿಂದ ಚರ್ಮಗಂಟು ರೋಗವನ್ನು ನೂರಕ್ಕೆ ನೂರರಷ್ಟು ತಡೆಗಟ್ಟಲು ಸಾಧ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

Lumpy Skin Disease: ರಾಸುಗಳನ್ನು ಚರ್ಮಗಂಟು ಕಾಯಿಲೆಯಿಂದ ಈ ಲಸಿಕೆ ಕಾಪಾಡಬಲ್ಲದು
ಚರ್ಮಗಂಟು ರೋಗ ಬಾಧಿತ ಹಸು (ಸಂಗ್ರಹ ಚಿತ್ರ)Image Credit source: PTI
TV9 Web
| Edited By: |

Updated on:Jan 17, 2023 | 3:00 PM

Share

ಬೆಂಗಳೂರು: ಚರ್ಮಗಂಟು ಕಾಯಿಲೆಯು ಕರ್ನಾಟಕದಲ್ಲಿಯೂ ರಾಸುಗಳನ್ನು ತೀವ್ರವಾಗಿ ಕಾಡುತ್ತಿದೆ. 2020ರಿಂದೀಚೆಗೆ ಸುಮಾರು 2 ಲಕ್ಷ ರಾಸುಗಳು ಈ ಕಾಯಿಲೆಯಿಂದ ಸಾವನ್ನಪ್ಪಿವೆ. ಈ ಕಾಯಿಲೆಯನ್ನು ಭಾರತೀಯ ಕೃಷಿ ಸಂಶೋಧನಾ ಪ್ರತಿಷ್ಠಾನ (Indian Council for Agricultural Research – ICAR), ಪಶುಆರೋಗ್ಯ ಸಂಶೋಧನಾ ಸಂಸ್ಥೆ (Indian Veterinary Research Institute – IVRI), ಗೊರಸು ಪ್ರಾಣಿಗಳ ಸಂಶೋಧನಾ ಸಂಸ್ಥೆ (National Research Centre on Equines – NRCE) ಅಭಿವೃದ್ಧಿಪಡಿಸಿರುವ ಲಸಿಕೆಯಿಂದ ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಪಶುಸಾಂಕ್ರಾಮಿಕ ರೋಗ ನಿಯಂತ್ರಣ ಕೇಂದ್ರದ ನಿರ್ದೇಶಕ ಡಾ ಬಿ.ಆರ್.ಗುಲಾಟಿ, ದೇಶೀಯ ಲಸಿಕೆಗಳ ಬಳಕೆಯಿಂದ ಚರ್ಮಗಂಟು ರೋಗವನ್ನು ನೂರಕ್ಕೆ ನೂರರಷ್ಟು ತಡೆಗಟ್ಟಲು ಸಾಧ್ಯವಿದೆ. ಕರ್ನಾಟಕದ ಮಾಲೂರು ಮತ್ತು ಗುಜರಾತ್​ನ ಅಹಮದಾಬಾದ್​ನಲ್ಲಿರುವ ಔಷಧ ತಯಾರಿಕಾ ಕಂಪನಿಗಳು ಈ ಲಸಿಕೆಗಳ ಉತ್ಪಾದನೆಗಾಗಿ ಒಪ್ಪಂದ ಮಾಡಿಕೊಂಡಿವೆ. ಮಾಲೂರಿನ ಬಯೊವೆಟ್ ಕಂಪನಿಯು ಪ್ರಾಯೋಗಿಕ ಲಸಿಕೆಗಳನ್ನೂ ಒದಗಿಸಿದೆ. ಪಶು ಆರೋಗ್ಯ ಕೇಂದ್ರದ ಅನುಮೋದನೆಯ ನಂತರ ಈ ಲಸಿಕೆಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.

ಕುರಿ ಮತ್ತು ಮೇಕೆಗಳನ್ನು ಬಾಧಿಸುವ ವರ್ಗಕ್ಕೆ ಚರ್ಮಗಂಟು ಹರಡುವ ಎಲ್​ಎಸ್​ಡಿ ವೈರಸ್ ಸಹ ಸೇರುತ್ತದೆ. ಮೇಕೆಗೆ ಕೊಡುವ ಲಸಿಕೆಯನ್ನು ಹಸುಗಳಿಗೂ ಕೊಡುವ ಮೂಲಕ ಚರ್ಮಗಂಟು ರೋಗ ತಡೆಗೆ ಪ್ರಯತ್ನಿಸಲಾಗುತ್ತಿದೆ. ಆದರೆ ಈ ಲಸಿಕೆಯು ರೋಗದ ಸಾಧ್ಯತೆಯನ್ನು ಶೇ 70ರಿಂದ 80ರಷ್ಟು ಮಾತ್ರವೇ ಕಡಿಮೆ ಮಾಡುತ್ತಿತ್ತು. ಇದೀಗ ಹಸುಗಳಿಗೆ ಪ್ರತ್ಯೇಕ ಲಸಿಕೆ ತಯಾರಾಗಿರುವುದು ರೋಗ ನಿಯಂತ್ರಣದ ಅವಕಾಶವನ್ನು ಹೆಚ್ಚಿಸಿದೆ.

ಕರ್ನಾಟಕದಲ್ಲಿ ಈವರೆಗೆ 3 ಲಕ್ಷಕ್ಕೂ ಹೆಚ್ಚು ಚರ್ಮಗಂಟು ಕಾಯಿಲೆ ಪ್ರಕರಣಗಳು ವರದಿಯಾಗಿವೆ. 27,000 ರಾಸುಗಳು ಸಾವನ್ನಪ್ಪಿವೆ. ಈ ಕಾಯಿಲೆ ಮನುಷ್ಯರಿಗೆ ಬರುವುದಿಲ್ಲ. ಆದರೆ ಇಂಥ ಹಸುಗಳಿಂದ ಕರೆದ ಹಾಲನ್ನು ಸೇವಿಸುವ ಮೊದಲು ಚೆನ್ನಾಗಿ ಕುದಿಸಬೇಕು ಎಂದು ಪಶುವೈದ್ಯರು ಸಲಹೆ ಮಾಡುತ್ತಾರೆ.

ಇದನ್ನೂ ಓದಿ: ಚರ್ಮಗಂಟು ರೋಗ: ಹಾಸನದ ಐತಿಹಾಸಿಕ ಬೂಕನಬೆಟ್ಟದ ರಂಗನಾಥ ಸ್ವಾಮಿ ರಾಸುಗಳ ಜಾತ್ರಾ ಮಹೋತ್ಸವ ರದ್ದು

ಚರ್ಮಗಂಟು ಕಾಯಿಲೆಯ ಬಗ್ಗೆ ಮತ್ತಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Tue, 17 January 23

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ