AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year 2021 ನಂದಿ ಗಿರಿಧಾಮದ ಸುತ್ತಮುತ್ತ ಪೊಲೀಸರ ಭದ್ರ ಕೋಟೆ.. ಪಾರ್ಟಿ ಸೆಲಬ್ರೇಷನ್​ಗೆ ಛಾನ್ಸೇ ಇಲ್ಲ!

ಪ್ರವಾಸಿ ತಾಣಗಳಲ್ಲಿ, ಅದರ ಸುತ್ತಮುತ್ತ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿರೋ ಪೊಲೀಸರು, ಚಿಕ್ಕಬಳ್ಳಾಪುರದ ನಂದಿಗಿರಿಧಾಮದಲ್ಲಿ ನ್ಯೂ ಇಯರ್ ಸೆಲೆಬ್ರೇಷನ್​ಗೆ ಬ್ರೇಕ್ ಹಾಕಿದ್ದಾರೆ. ಬೆಂಗಳೂರಿನಲ್ಲಿ ನ್ಯೂ ಇಯರ್ ಸೆಲೆಬ್ರೇಷನ್‌ಗೆ ಟಫ್ ರೂಲ್ಸ್ ಮಾಡಲಾಗಿದೆ.

New Year 2021 ನಂದಿ ಗಿರಿಧಾಮದ ಸುತ್ತಮುತ್ತ ಪೊಲೀಸರ ಭದ್ರ ಕೋಟೆ.. ಪಾರ್ಟಿ ಸೆಲಬ್ರೇಷನ್​ಗೆ ಛಾನ್ಸೇ ಇಲ್ಲ!
ನಂದಿ ಬೆಟ್ಟದ ರಮಣೀಯ ದೃಶ್ಯ
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on:Dec 30, 2020 | 12:02 PM

Share

ಚಿಕ್ಕಬಳ್ಳಾಪುರ: ನ್ಯೂ ಇಯರ್ ಸೆಲೆಬ್ರೇಷನ್​ಗೆ ಸಖತ್ ಸ್ಟಾಟ್ ಅಂತ ನೀವು ಗಾಡಿ ಹತ್ಕೊಂಡು ನಂದಿ ಬೆಟ್ಟದ ಕಡೆ ಹೋದ್ರೆ, ನಿಮ್ಗೆ ನಿರಾಸೆಯಾಗಲಿದೆ. ಅಷ್ಟೇ ಅಲ್ಲ ಅಲ್ಲಿನ ಅಕ್ಕಪಕ್ಕದ ಹೋಟೆಲ್‌, ಪಬ್‌ಗಳಲ್ಲೂ ಪಾರ್ಟಿ ಮಾಡೋಕೆ ಚಾನ್ಸೇ ಇಲ್ಲ.

ನಂದಿಗಿರಿಧಾಮದ ಸುತ್ತಮುತ್ತ ನ್ಯೂ ಇಯರ್ ಸೆಲೆಬ್ರೇಷನ್​ಗೆ ಬ್ರೇಕ್..!  ಪ್ರವಾಸಿ ತಾಣಗಳಲ್ಲಿ, ಅದರ ಸುತ್ತಮುತ್ತ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿರೋ ಪೊಲೀಸರು, ಚಿಕ್ಕಬಳ್ಳಾಪುರದ ನಂದಿಗಿರಿಧಾಮದಲ್ಲಿ ನ್ಯೂ ಇಯರ್ ಸೆಲೆಬ್ರೇಷನ್​ಗೆ ಬ್ರೇಕ್ ಹಾಕಿದ್ದಾರೆ.

ಬೆಂಗಳೂರಿನಲ್ಲಿ ನ್ಯೂ ಇಯರ್ ಸೆಲೆಬ್ರೇಷನ್‌ಗೆ ಟಫ್ ರೂಲ್ಸ್ ಮಾಡಲಾಗಿದೆ. ಹೀಗಾಗಿ ರಾಜಧಾನಿಯ ಯುವಕ ಯುವತಿಯರು ನಂದಿ ಗಿರಿಧಾಮದ ಕಡೆ ಆಗಮಿಸಿ, ಗಿರಿಧಾಮದ ಸುತ್ತಮುತ್ತಲಿರುವ ಹೋಟೆಲ್, ಪಬ್, ಡಾಬಾ, ಹೋಂ ಸ್ಟೇ, ರೇಸಾರ್ಟಗಳಲ್ಲಿ ಭರ್ಜರಿ ಪಾರ್ಟಿ ಮಾಡುವ ಸಾಧ್ಯತೆಯಿದೆ.

ಹೀಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಪೊಲೀಸರು ಸಭೆ ನಡೆಸಿದ್ದಾರೆ. ನಂದಿ ಗಿರಿಧಾಮದ ಬಳಿ ಖಾಸಗಿ ಹೋಟಲ್​ವೊಂದರಲ್ಲಿ ಸಭೆ ನಡೆಸಿ ಹೋಟೆಲ್, ಪಬ್, ಡಾಬಾ, ಹೋಂ ಸ್ಟೇ, ರೇಸಾರ್ಟ್ ಮಾಲಿಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ನಂದಿ ಗಿರಿಧಾಮದ ಸುತ್ತಮುತ್ತ ಇರುವ ಹೋಟೆಲ್, ಪಬ್, ಡಾಬಾ,  ಹೋಂ ಸ್ಟೇ, ರೇಸಾರ್ಟ್​ಗಳು 5 ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರುತ್ತವೆ. ದೊಡ್ಡಬಳ್ಳಾಪುರ, ವಿಶ್ವನಾಥಪುರ, ವಿಜಯಪುರ, ದೇವನಹಳ್ಳಿ, ನಂದಿ ಹಿಲ್ಸ್ ಪೊಲೀಸ್ ಸ್ಟೇಷನ್​ಗೆ ಸೇರುತ್ತವೆ. ಇದ್ರಿಂದ ಐದು ಠಾಣೆಗಳ ಪೊಲೀಸ್ ಅಧಿಕಾರಿಗಳು, ಹಿರಿಯ ಅಧಿಕಾರಿಗಳು ಸಭೆ ಸೇರಿ ಹೊಸ ವರ್ಷಾಚರಣೆಯ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧಾರ ಮಾಡಿದ್ರು.

ಬೆಂಗಳೂರಿನ ಸುತ್ತಮುತ್ತಲ ಪ್ರವಾಸಿಗರು ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರಕ್ಕೆ ಲಗ್ಗೆ ಇಡೋದು ಕಾಮನ್ ಆಗಿತ್ತು. ಆದ್ರೆ ಈ ಸಲ ಕೊರೊನಾ ಅಟ್ಟಹಾಸ ಮೆರೆಯುತ್ತಿರುವುದರಿಂದ ಗಿರಿಧಾಮದಲ್ಲಿ ಪ್ರವಾಸಿಗರ ಆಟಾಟೋಪಗಳಿಗೆ ಬ್ರೇಕ್ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ.

ಈ ಬಾರಿ ಹೊಸವರ್ಷ ಆಚರಣೆಗೆ ನಂದಿಬೆಟ್ಟಕ್ಕೆ ಹೋಗೋ ಹಾಗಿಲ್ಲ..; ಪ್ರವೇಶ ಇರೋದಿಲ್ಲ !

Published On - 12:01 pm, Wed, 30 December 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ