AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ದೈಹಿಕ ಸಂಪರ್ಕಕ್ಕೆ ತಿರುಗಿ ಮಗು ಜನನ: ಅಪ್ರಾಪ್ತೆಗೆ ಹುಟ್ಟಿದ ಶಿಶು ಕಸದ ಬುಟ್ಟಿಗೆ..!

ರಾಜಧಾನಿ ಬೆಂಗಳೂರಿನಲ್ಲಿ ಅಪ್ರಾಪ್ತೆ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದೆ, ಪ್ರೀತಿ ಮಾಡಿ, ಆ ಪ್ರೀತಿ ದೈಹಿಕ ಸಂಪರ್ಕಕ್ಕೆ ತಿರುಗಿದ್ದು, ಇದೀಗ ಅಪ್ರಾಪ್ತೆಗೆ ಮಗು ಜನಿಸಿದೆ. ಆದ್ರೆ, ಬಾಳಿ ಬದುಕಬೇಕಾಗಿದ್ದ ಶಿಶುವನ್ನು ತಿಪ್ಪೆಗೆ ಎಸದಿದ್ದಾರೆ. ಹದಿಹರೆಯದ ವಯಸ್ಸಿನಲ್ಲಿ ಅಪ್ರಾಪ್ತ ಇಬ್ಬರು ಪ್ರೀತಿಯಲ್ಲಿ ಬಿದ್ದು ಪುಟ್ಟ ಕಂದಮ್ಮನನ್ನೇ ಬಲಿಕೊಟ್ಟಿದ್ದಾರೆ. ಅಚ್ಚರಿ ಏನೆಂದರೆ ಸ್ನೇಹಿತರೇ ಸೇರಿಕೊಂಡು ಡೆಲಿವರಿ ಮಾಡಿರೋ ಬಗ್ಗೆ ಗೊತ್ತಾಗಿದೆ.

ಪ್ರೀತಿ ದೈಹಿಕ ಸಂಪರ್ಕಕ್ಕೆ ತಿರುಗಿ ಮಗು ಜನನ: ಅಪ್ರಾಪ್ತೆಗೆ ಹುಟ್ಟಿದ ಶಿಶು ಕಸದ ಬುಟ್ಟಿಗೆ..!
Baby In Garbage
Shivaprasad B
| Edited By: |

Updated on: Apr 20, 2025 | 10:36 AM

Share

ಬೆಂಗಳೂರು, (ಏಪ್ರಿಲ್ 18): ರಾಜಧಾನಿ ಬೆಂಗಳೂರಿನಲ್ಲೊಂದು (Bengaluru) ಕರುಣಾಜನಕ ಘಟನೆ ನಡೆದಿದೆ. ಹದಿಹರೆಯದ ಇಬ್ಬರು ಪ್ರೀತಿ (Love) ಮಾಡಿ, ಆ ಪ್ರೀತಿ ದೈಹಿಕ ಸಂಪರ್ಕಕ್ಕೆ ತಿರುಗಿ ಇದೀಗ ಇಬ್ಬರಿಗೊಂದು ಮಗುವಾಗಿದೆ. ಆದ್ರೆ, ಬಾಳಿ ಬದುಕಬೇಕಾಗಿದ್ದ ಶಿಶು ತಿಪ್ಪೆಯಲ್ಲಿ ಬಿದ್ದಿದೆ. ಹೌದು…ಹದಿಹರೆಯದ ವಯಸ್ಸಿನಲ್ಲಿ ಅಪ್ರಾಪ್ತ ಇಬ್ಬರು ಪ್ರೀತಿಯಲ್ಲಿ ಬಿದ್ದು ಪುಟ್ಟ ಕಂದಮ್ಮನನ್ನೇ ಬಲಿಕೊಟ್ಟಿದ್ದಾರೆ. ಅಚ್ಚರಿ ಏನೆಂದರೆ ಸ್ನೇಹಿತರೇ ಸೇರಿಕೊಂಡು ಡೆಲಿವರಿ ಮಾಡಿರುವ ಬಗ್ಗೆ ಗೊತ್ತಾಗಿದೆ. ಬೆಂಗಳೂರಿನ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಅಂದು 2ನೇ ತಾರೀಖು ಮಂಗಳವಾರ ರಾತ್ರಿ ಎಂಟು ಗಂಟೆ ಸಮಯ. ಯಲಹಂಕದ ಗಾಂಧಿನಗರ ಏರಿಯಾದಲ್ಲಿ ಸೈಕಲ್ ನಲ್ಲಿ ಬಂದಿದ್ದ ವ್ಯಕ್ತಿ ಕಸದ ರಾಶಿಯಲ್ಲಿ ಕವರ್ ಬಿಸಾಕಿ ಹೋಗಿದ್ದ. ಮನೆ ಹತ್ತಿರದಲ್ಲೇ ವಾಸವಿರುವ ವೃದ್ಧನ ಕೈಯಲ್ಲಿ ಈ ಕಸ ಬಿಸಾಡಿ ಎಂದು ಯುವತಿ ಶಿಶುವಿದ್ದ ಕವರ್ ಅನ್ನು ಕೊಟ್ಟಿದ್ದಾಳೆ. ಆಗ ವೃದ್ಧ ಅದರ ಅರಿವಿಲ್ಲದೇ ಆ ಕವರ್​ ಅನ್ನು ಎತ್ತಿ ಕಸದ ಬುಟ್ಟಿಗೆ ಹಾಕಿ ಹೋಗಿದ್ದಾರೆ. ಬಳಿಕ ಪೌರಕಾರ್ಮಿಕರು ಬೆಳಗ್ಗೆ ಕಸ ಸ್ವಚ್ಛ ಮಾಡುವಾಗ ಶಿಶುವಿನ ಶವ ಕಂಡು ಶಾಕ್ ಆಗಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆ ಕೂಡಲೇ ಪೊಲೀಸರಿಂದ ತನಿಖೆ ಶುರು ಮಾಡಿ ಸುತ್ತಮುತ್ತಲ ಸಿಸಿಟಿವಿ ಸರ್ಚ್ ಮಾಡಿಸಿದ್ದಾರೆ. ಆಗ ಪೊಲೀಸರಿಗೆ CCTVಯಲ್ಲಿ ಸೈಕಲ್​ನಲ್ಲಿ ವೃದ್ಧನ ಗುರುತು ಪತ್ತೆಯಾಗಿದೆ. ಆಗ ಕವರ್​ನಲ್ಲಿದ್ದ ಶಿಶುವಿನ ಶವ ಎಸೆದ ವೃದ್ಧನನ್ನು ಪೊಲೀಸರು ಬೆನ್ನಟ್ಟಿ ಹಿಡಿದು ವಿಚಾರಣೆ ನಡೆಸಿದಾಗ.ಅಪ್ರಾಪ್ತರ ಲವ್​ ಸ್ಟೋರಿ, ಶಿಶು ಸಾವಿನ ಸತ್ಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲೋರ್ವ ವಿಕೃತ ಕಾಮುಕ: ಮಹಿಳೆಯರಿಗೆ ಖಾಸಗಿ ಅಂಗ ತೋರಿಸುವುದೇ ಈತನ ಕಾಯಕ

ಕೊನೆಗೆ ಆತನನ್ನ ಕರೆತಂದು ವಿಚಾರಣೆ ಮಾಡಿದಾಗ ತಾನು ಎಸೆದ ಕವರ್ ನಲ್ಲಿ ಹಸುಗೂಸು ಇದೆ ಅನ್ನೋದೇ ಗೊತ್ತಿಲ್ಲ..ಆ ಕವರ್ ಓರ್ವ ಯುವತಿ ಕಸವಿದ್ದು ಎಸೆಯಿರಿ ಎಂದು ಕೊಟ್ಟಿದ್ದಾಗಿ ಆತ ಬಾಯ್ಬಿಟ್ಟಿದ್ದಾನೆ. ಕೊನೆಗೆ ಮೃತಪಟ್ಟಿದ್ದ ಹಸುಗೂಸು ಎಂದಾಗ ವೃದ್ದನೇ ಪಶ್ಚಾತ್ತಾಪ ಪಟ್ಟಿದ್ದ. ಪೊಲೀಸರು ವೃದ್ಧನ ಮಾಹಿತಿ ಪಡೆದು ನೇರವಾಗಿ ಯುವತಿ ಮನೆಗೆ ಹೋಗಿದ್ದಾರೆ. ವಿಚಾರಣೆ ವೇಳೆ ಆಗ ಯುವತಿ ಹುಡುಗನ ಜೊತೆಗಿನ ಲವ್ ಸ್ಟೋರಿ ಬಿಚ್ಚಿಟ್ಟಿದ್ದಾಳೆ. ಹೀಗೆ ಸ್ನೇಹಿತರೇ ಸೇರಿಕೊಂಡು ಮಾಡಿರುವ ಡೆಲಿವರಿ ಯಡವಟ್ಟಿನಿಂದ ನವಜಾತ ಶಿಶು ಉಸಿರುಗಟ್ಟಿ ಸಾವನ್ನಪ್ಪಿದೆ. ಇದು ಯಾರಿಗೂ ಗೊತ್ತಾಗಬಾರದು ಎಂದು ಮಗುವಿನ ಶವವನ್ನ ಕವರ್​ನಲ್ಲಿಟ್ಟು ಕಸ ಎಂದು ವೃದ್ಧನ ಕೊಟ್ಟಿರುವುದಾಗಿ ಪೊಲೀಸರ ಮುಂದೆ ಯುವತಿ ಬಾಯ್ಬಿಟ್ಟಿದ್ದಾಳೆ. ಸದ್ಯ ಕೇಸ್ ದಾಖಲಿಸಿಕೊಂಡಿರುವ ಯಲಹಂಕ ಪೊಲೀಸರು ಯುವಕನ ಅರೆಸ್ಟ್ ಮಾಡಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ
Image
ಪ್ರಿಯಕರನನ್ನು ಮನೆಗೆ ಕರೆಸಿ ಗುಪ್ತಾಂಗ ಕತ್ತರಿಸಿದ ಪ್ರೇಯಸಿ
Image
ಹೆಣ್ಣುಮಗುವಿಗೆ ಜನ್ಮಕೊಟ್ಟಿದ್ದಕ್ಕೆ ಪತ್ನಿಗೆ ಚಿತ್ರಹಿಂಸೆ
Image
ಆಗಾಗ ಅಜ್ಜಿ ಮನೆಗೆ ಬರುತ್ತಿದ್ದವ ಯುವತಿಯನ್ನೇ ಪಟಾಯಿಸಿ ಮದ್ವೆಯಾದ!
Image
ಅಕ್ರಮ ಸಂಬಂಧ ಮುಚ್ಚಿಟ್ಟುಕೊಳ್ಳಲು ಹುಟ್ಟಿದ ಕೂಸು ತಿಪ್ಪೆಗೆ: ಇಬ್ಬರ ಬಂಧನ

ಯುವತಿಯನ್ನ ವಿಚಾರಣೆ ಮಾಡಿದಾಗ ಹುಡುಗನ ಜೊತೆಗಿನ ಲವ್ ಸ್ಟೋರಿ ರಿವೀಲ್ ಆಗಿದೆ. ಯುವತಿ, ಯುವಕನ ಪ್ರೀತಿ ಫಲದಿಂದಲೇ ನವಜಾತ ಶಿಶು ಹುಟ್ಟಿತ್ತು. ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಯುವತಿಯನ್ನ ಯುವಕ ಗರ್ಭಿಣಿ ಮಾಡ್ಬಿಟ್ಟಿದ್ದ. ಅಚ್ಚರಿ ಅಂದ್ರೆ ಒಂಬತ್ತು ತಿಂಗಳ ನಂತರ ಅಕ್ಕಪಕ್ಕದ ಮಹಿಳೆಯರೇ ಸೇರಿ ಮನೆಯಲ್ಲೇ ಡಿಲೆವರಿ ಮಾಡಿದ್ದರಂತೆ. ಸಂಬಂಧಿಕರಿಗೆ ಸತ್ಯ ಗೊತ್ತಾಗಬಾರದು ಎಂದು ರಹಸ್ಯವಾಗಿ ಮನೆಯಲ್ಲೇ ಡಿಲಿವರಿ ಮಾಡಿದ್ದು, ಡಿಲೆವರಿ ಯಡವಟ್ಟಿನಿಂದ ಉಸಿರುಗಟ್ಟಿ ಶಿಶು ಸಾವನ್ನಪ್ಪಿದೆ. ಬಳಿಕ ಮಗುವಿನ ಶವವನ್ನ ಪ್ಲಾಸ್ಟಿಕ್ ಕವರ್​ನಲ್ಲಿ ಹಾಕಿ ವೃದ್ಧನ ಕೈಗೆ ಕಸವೆಂದು ಹೇಳಿ ಕೊಟ್ಟಿದ್ದಾಳೆ. ಆಗ ಏನೂ ತಿಳಿಯದ ಅಜ್ಜ ಸೈಕಲ್ ನಲ್ಲಿ ಬಂದು ಕವರ್ ಎಸೆದು ಹೋಗಿದ್ದ.

ಇನ್ನು ಪ್ರೀತಿ ಕಹಾನಿ ರಿವೀಲ್ ಬಳಿಕ ಯುವಕನನ್ನ ಪತ್ತೆ ಮಾಡಿದ ಪೊಲೀಸ್ರು ಅಪ್ರಾಪ್ತ ಯುವತಿಯ ಸಲುಗೆ ಹೊಂದಿದ್ದ ಹಿನ್ನಲೆ ಪೋಕ್ಸೋ ಕೇಸ್ ದಾಖಲಿಸಿ ಬಂಧಿಸಿದ್ದಾರೆ..ಈ ನಡುವೆ ಯುವತಿಗೆ ಸಹಕರಿಸಿದ್ದವರ ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ