Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರುಬಿಸಿಲಿಗೆ ಬಳಲಿದ ಗಣಿನಾಡು ಬಳ್ಳಾರಿ.. ಡಿ ಹೈಡ್ರೇಷನ್​ನಿಂದ ನವಜಾತ ಶಿಶುಗಳು ಅಸ್ವಸ್ಥ

ಗಣಿನಾಡು ಬಳ್ಳಾರಿಯಲ್ಲಿ ಕೆಂಡದಂತ ಬಿಸಿಲು. ಸೂರ್ಯನ ಪ್ರತಾಪಕ್ಕೆ ಜನ ಹೈರಾಣಾಗಿದ್ದಾರೆ. ಭಾರಿ ಬಿಸಿಲಿನಿಂದಾಗಿ ನವಜಾತ ಶಿಶುಗಳು ಮಕ್ಕಳು ಬಸವಳಿದಿದ್ದಾರೆ. ಇದೇ ಕಾರಣಕ್ಕೆ ನವಜಾತ ಶಿಶುಗಳಲ್ಲಿ ಡೀಹೈಡ್ರೇಷನ್ ಉಂಟಾಗ್ತಿದೆ.

ಬಿರುಬಿಸಿಲಿಗೆ ಬಳಲಿದ ಗಣಿನಾಡು ಬಳ್ಳಾರಿ.. ಡಿ ಹೈಡ್ರೇಷನ್​ನಿಂದ ನವಜಾತ ಶಿಶುಗಳು ಅಸ್ವಸ್ಥ
ಡಿ ಹೈಡ್ರೇಷನ್​ನಿಂದ ನವಜಾತ ಶಿಶುಗಳು ಅಸ್ವಸ್ಥ
Follow us
ಆಯೇಷಾ ಬಾನು
|

Updated on: Apr 13, 2021 | 8:48 AM

ಗಣಿನಾಡು ಬಳ್ಳಾರಿಯಲ್ಲಿ ಈಗಾಗಲೇ 40 ಡಿಗ್ರಿಗೂ ಹೆಚ್ಚು ಉಷ್ಣಾಂಶ ದಾಖಲಾಗುತ್ತಿದೆ. ಬಿರು ಬಿಸಿಲಿನಿಂದಾಗಿ ಭೂಮಿ ಕಾದ ಕಬ್ಬಿಣವಾಗಿದೆ. ಹೀಗಾಗಿಯೇ ಬಿಸಿಲಿನ ಎಫೆಕ್ಟ್ ನವಜಾತ ಶಿಶುಗಳ ಮೇಲೆ ಹಾಗೂ ಚಿಕ್ಕಚಿಕ್ಕ ಮಕ್ಕಳ ಮೇಲೆ ಆಗುತ್ತಿದೆ. ಪೋಷಕರು ಸಾಕಷ್ಟು ಮುಂಜಾಗ್ರತೆ ವಹಿಸಿದ್ರೂ ಬಿಸಿಲಿನಿಂದ ಶಿಶುಗಳನ್ನು ರಕ್ಷಣೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಬಳ್ಳಾರಿಯಲ್ಲಿ ಭಾರಿ ಬಿಸಿಲಿನ ಪರಿಣಾಮ ನವಜಾತ ಶಿಶುಗಳು ನಿರ್ಜಲೀಕರಣ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಾಹಿತಿ ಪ್ರಕಾರ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ನಿತ್ಯ 6ರಿಂದ 7 ಶಿಶುಗಳು ಬಿಸಿಲಿನ ಸಮಸ್ಯೆಯಿಂದ ಚಿಕಿತ್ಸೆಗೋಸ್ಕರ ದಾಖಲಾಗುತ್ತಿದ್ದಾರಂತೆ. ವಿಮ್ಸ್​ನ ನವಜಾತ ಶಿಶುಗಳ ಸ್ಪೇಷಲ್ ಕೇರ್ ಘಟಕದಲ್ಲಿ ನವಜಾತ ಶಿಶುಗಳಿಗೆ ಸಮರ್ಪಕ ಚಿಕಿತ್ಸೆ ನೀಡಲಾಗುತ್ತಿದೆ. 20 ದಿನದಲ್ಲಿ 70 ಕ್ಕೂ ಹೆಚ್ಚು ನವಜಾತ ಶಿಶುಗಳಿಗೆ ಚಿಕಿತ್ಸೆ ನೀಡಲಾಗಿದೆ. ಬಿಸಿಲಿನ ಪ್ರಮಾಣ ಜಾಸ್ತಿಯಾಗಿದ್ದರಿಂದ ಇನ್ನಷ್ಟು ಶಿಶುಗಳು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನು ಮಕ್ಕಳಲ್ಲಿ ಈ ರೀತಿ ಸಮಸ್ಯೆ ಎದುರಾಗಿರುವುದು ಬಳ್ಳಾರಿ ಜಿಲ್ಲೆಯ ಪೋಷಕರಲ್ಲಿ ಆತಂಕ ಮೂಡಿಸಿದೆ. ಬಿಸಿಲು ಮತ್ತಷ್ಟು ಹೆಚ್ಚಾದರೆ ಪರಿಸ್ಥಿತಿ ಏನಪ್ಪಾ ಅನ್ನೋ ಭಯವೂ ಪೋಷಕರನ್ನ ಕಾಡುತ್ತಿದೆ. ಮಕ್ಕಳು ಮಾತ್ರವಲ್ಲ ವೃದ್ಧರಿಗೂ ಬಿಸಿಲಿನಿಂದ ನಾನಾ ಸಮಸ್ಯೆ ಎದುರಾಗುತ್ತಿವೆ. ಒಟ್ನಲ್ಲಿ ಬೇಸಿಗೆ ಮುಗಿಯುವ ತನಕ ಜನರು ಒಂದಷ್ಟು ಅಲರ್ಟ್ ಆಗಿದ್ರೆ ಒಳ್ಳೆಯದು. ಇಲ್ಲವಾದ್ರೆ ಮತ್ತಷ್ಟು ಸಮಸ್ಯೆ ಎದುರಾಗುವ ಅಪಾಯ ಇದೆ.

Dehydration in Babies

ವಿಮ್ಸ್​ನ ನವಜಾತ ಶಿಶುಗಳ ಸ್ಪೇಷಲ್ ಕೇರ್ ಘಟಕ

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟಕ್ಕೆ ಸಜ್ಜಾಗಿಯೇ ಹುಟ್ಟಿದ ಶಿಶು; ಅಮ್ಮ ಪಡೆದ ವ್ಯಾಕ್ಸಿನ್​ನಿಂದ ಶಕ್ತಿ ಪಡೆದ ಅಮೆರಿಕದ ಮೊದಲ ಮಗು ಇದು..

(Newly Born Babies Facing Dehydration Problems Due to Heavy Summer in Bellary)

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ