AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರುಬಿಸಿಲಿಗೆ ಬಳಲಿದ ಗಣಿನಾಡು ಬಳ್ಳಾರಿ.. ಡಿ ಹೈಡ್ರೇಷನ್​ನಿಂದ ನವಜಾತ ಶಿಶುಗಳು ಅಸ್ವಸ್ಥ

ಗಣಿನಾಡು ಬಳ್ಳಾರಿಯಲ್ಲಿ ಕೆಂಡದಂತ ಬಿಸಿಲು. ಸೂರ್ಯನ ಪ್ರತಾಪಕ್ಕೆ ಜನ ಹೈರಾಣಾಗಿದ್ದಾರೆ. ಭಾರಿ ಬಿಸಿಲಿನಿಂದಾಗಿ ನವಜಾತ ಶಿಶುಗಳು ಮಕ್ಕಳು ಬಸವಳಿದಿದ್ದಾರೆ. ಇದೇ ಕಾರಣಕ್ಕೆ ನವಜಾತ ಶಿಶುಗಳಲ್ಲಿ ಡೀಹೈಡ್ರೇಷನ್ ಉಂಟಾಗ್ತಿದೆ.

ಬಿರುಬಿಸಿಲಿಗೆ ಬಳಲಿದ ಗಣಿನಾಡು ಬಳ್ಳಾರಿ.. ಡಿ ಹೈಡ್ರೇಷನ್​ನಿಂದ ನವಜಾತ ಶಿಶುಗಳು ಅಸ್ವಸ್ಥ
ಡಿ ಹೈಡ್ರೇಷನ್​ನಿಂದ ನವಜಾತ ಶಿಶುಗಳು ಅಸ್ವಸ್ಥ
ಆಯೇಷಾ ಬಾನು
ಆಯೇಷಾ ಬಾನು|

Updated on: Apr 13, 2021 | 8:48 AM

Share

ಗಣಿನಾಡು ಬಳ್ಳಾರಿಯಲ್ಲಿ ಈಗಾಗಲೇ 40 ಡಿಗ್ರಿಗೂ ಹೆಚ್ಚು ಉಷ್ಣಾಂಶ ದಾಖಲಾಗುತ್ತಿದೆ. ಬಿರು ಬಿಸಿಲಿನಿಂದಾಗಿ ಭೂಮಿ ಕಾದ ಕಬ್ಬಿಣವಾಗಿದೆ. ಹೀಗಾಗಿಯೇ ಬಿಸಿಲಿನ ಎಫೆಕ್ಟ್ ನವಜಾತ ಶಿಶುಗಳ ಮೇಲೆ ಹಾಗೂ ಚಿಕ್ಕಚಿಕ್ಕ ಮಕ್ಕಳ ಮೇಲೆ ಆಗುತ್ತಿದೆ. ಪೋಷಕರು ಸಾಕಷ್ಟು ಮುಂಜಾಗ್ರತೆ ವಹಿಸಿದ್ರೂ ಬಿಸಿಲಿನಿಂದ ಶಿಶುಗಳನ್ನು ರಕ್ಷಣೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಬಳ್ಳಾರಿಯಲ್ಲಿ ಭಾರಿ ಬಿಸಿಲಿನ ಪರಿಣಾಮ ನವಜಾತ ಶಿಶುಗಳು ನಿರ್ಜಲೀಕರಣ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಾಹಿತಿ ಪ್ರಕಾರ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ನಿತ್ಯ 6ರಿಂದ 7 ಶಿಶುಗಳು ಬಿಸಿಲಿನ ಸಮಸ್ಯೆಯಿಂದ ಚಿಕಿತ್ಸೆಗೋಸ್ಕರ ದಾಖಲಾಗುತ್ತಿದ್ದಾರಂತೆ. ವಿಮ್ಸ್​ನ ನವಜಾತ ಶಿಶುಗಳ ಸ್ಪೇಷಲ್ ಕೇರ್ ಘಟಕದಲ್ಲಿ ನವಜಾತ ಶಿಶುಗಳಿಗೆ ಸಮರ್ಪಕ ಚಿಕಿತ್ಸೆ ನೀಡಲಾಗುತ್ತಿದೆ. 20 ದಿನದಲ್ಲಿ 70 ಕ್ಕೂ ಹೆಚ್ಚು ನವಜಾತ ಶಿಶುಗಳಿಗೆ ಚಿಕಿತ್ಸೆ ನೀಡಲಾಗಿದೆ. ಬಿಸಿಲಿನ ಪ್ರಮಾಣ ಜಾಸ್ತಿಯಾಗಿದ್ದರಿಂದ ಇನ್ನಷ್ಟು ಶಿಶುಗಳು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನು ಮಕ್ಕಳಲ್ಲಿ ಈ ರೀತಿ ಸಮಸ್ಯೆ ಎದುರಾಗಿರುವುದು ಬಳ್ಳಾರಿ ಜಿಲ್ಲೆಯ ಪೋಷಕರಲ್ಲಿ ಆತಂಕ ಮೂಡಿಸಿದೆ. ಬಿಸಿಲು ಮತ್ತಷ್ಟು ಹೆಚ್ಚಾದರೆ ಪರಿಸ್ಥಿತಿ ಏನಪ್ಪಾ ಅನ್ನೋ ಭಯವೂ ಪೋಷಕರನ್ನ ಕಾಡುತ್ತಿದೆ. ಮಕ್ಕಳು ಮಾತ್ರವಲ್ಲ ವೃದ್ಧರಿಗೂ ಬಿಸಿಲಿನಿಂದ ನಾನಾ ಸಮಸ್ಯೆ ಎದುರಾಗುತ್ತಿವೆ. ಒಟ್ನಲ್ಲಿ ಬೇಸಿಗೆ ಮುಗಿಯುವ ತನಕ ಜನರು ಒಂದಷ್ಟು ಅಲರ್ಟ್ ಆಗಿದ್ರೆ ಒಳ್ಳೆಯದು. ಇಲ್ಲವಾದ್ರೆ ಮತ್ತಷ್ಟು ಸಮಸ್ಯೆ ಎದುರಾಗುವ ಅಪಾಯ ಇದೆ.

Dehydration in Babies

ವಿಮ್ಸ್​ನ ನವಜಾತ ಶಿಶುಗಳ ಸ್ಪೇಷಲ್ ಕೇರ್ ಘಟಕ

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟಕ್ಕೆ ಸಜ್ಜಾಗಿಯೇ ಹುಟ್ಟಿದ ಶಿಶು; ಅಮ್ಮ ಪಡೆದ ವ್ಯಾಕ್ಸಿನ್​ನಿಂದ ಶಕ್ತಿ ಪಡೆದ ಅಮೆರಿಕದ ಮೊದಲ ಮಗು ಇದು..

(Newly Born Babies Facing Dehydration Problems Due to Heavy Summer in Bellary)

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ