AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಗಂಡನ‌ ಮನೆಯಲ್ಲಿ ನವವಿವಾಹಿತೆ ಅನುಮಾನಾಸ್ಪದವಾಗಿ ನೇಣಿಗೆ ಶರಣು; ಮೃತಳ ಕಿವಿ ಕಟ್ -ಕೈ ಮೇಲೆ ಗಾಯ

ಗಂಡ ಅಭಿಲಾಷ್ ವಿರುದ್ಧ ಮೃತಳ ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಗಂಡ ಅಭಿಲಾಷ್​ನನ್ನ ಚಿಕ್ಕಬಳ್ಳಾಪುರ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Crime News: ಗಂಡನ‌ ಮನೆಯಲ್ಲಿ ನವವಿವಾಹಿತೆ ಅನುಮಾನಾಸ್ಪದವಾಗಿ ನೇಣಿಗೆ ಶರಣು; ಮೃತಳ ಕಿವಿ ಕಟ್ -ಕೈ ಮೇಲೆ ಗಾಯ
ಗಂಡನ‌ ಮನೆಯಲ್ಲಿ ನವವಿವಾಹಿತೆ ಅನುಮಾನಾಸ್ಪದವಾಗಿ ನೇಣಿಗೆ ಶರಣು; ಮೃತಳ ಕಿವಿ ಕಟ್-ಕೈ ಮೇಲೆ ಗಾಯ
TV9 Web
| Edited By: ಸಾಧು ಶ್ರೀನಾಥ್​|

Updated on:Jun 04, 2022 | 2:36 PM

Share

ಚಿಕ್ಕಬಳ್ಳಾಪುರ: ಗಂಡನ‌ ಮನೆಯಲ್ಲಿ ನವವಿವಾಹಿತೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ನಗರಸಭೆಯ 9ನೇ ವಾರ್ಡ್​ನಲ್ಲಿ ಈ ಘಟನೆ ನಡೆದಿದೆ. ಅನುಷಾ(19) ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾದ ಗೃಹಿಣಿ. ಪ್ರೀತಿಸಿ ವಿವಾಹವಾಗಿದ್ದ ವಿದ್ಯಾರ್ಥಿನಿ ಒಂದೇ ವರ್ಷದಲ್ಲಿ ಸಾವು ಕಂಡಿದ್ದಾಳೆ. ಮೃತಳ ಕಿವಿ ಕಟ್ ಆಗಿದೆ, ಕೈ ಮೇಲೆ ಗಾಯ ಆಗಿರೋದು ಪತ್ತೆಯಾಗಿದೆ. ಆದರೆ ನೇಣು‌ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದಾಗಿ ಪತಿ ಹೇಳಿಕೆ ನೀಡಿದ್ದಾನೆ.

ಗಂಡ ಅಭಿಲಾಷ್ ವಿರುದ್ಧ ಮೃತಳ ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಗಂಡ ಅಭಿಲಾಷ್​ನನ್ನ ಚಿಕ್ಕಬಳ್ಳಾಪುರ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಗುಂಡಿನ ಸದ್ದು… ಅಣ್ಣನಿಂದಲೇ ತಮ್ಮನ ಮೇಲೆ ಗುಂಡಿನ ದಾಳಿ, ಸಾವು

ಕೊಪ್ಪಳ: ಆಸ್ತಿ ಕಲಹ ವಿಕೋಪಕ್ಕೆ ಹೋಗಿ ಕೊಪ್ಪಳ ತಾಲೂಕಿನ ಕವಲೂರು ಗ್ರಾಮದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ತತ್ಪರಿಣಾಮ ತಮ್ಮ ಸಾವಿಗೀಡಾಗಿದ್ದಾನೆ. ಅಣ್ಣನೇ ತಮ್ಮನ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಗುಂಡಿನ ದಾಳಿಗೆ ಒಳಗಾದ ವಿನಯ ದೇಸಾಯಿ(35) ಮೃತಪಟ್ಟವ. ಕವಲೂರು ಗ್ರಾಮದ ರಾಘವೇಂದ್ರ ದೇಸಾಯಿ ಗುಂಡಿನ ದಾಳಿ ನಡೆಸಿದ ಅಣ್ಣ. ಯೋಗೇಶ ದೇಸಾಯಿ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಕೊಪ್ಪಳ ಎಸ್ಪಿ ಗಿರಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸಾಲಬಾಧೆಯಿಂದ ಬೇಸತ್ತು ಯುವ ಉರಗ ರಕ್ಷಕ ನೇಣಿಗೆ ಶರಣು

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಶಾಂತಿನಗರದ ಮನೆಯಲ್ಲಿ ಸಾಲಬಾಧೆಯಿಂದ ಬೇಸತ್ತು ಉರಗ ರಕ್ಷಕ ಪುನೀತ್ ರಾಮ್(28) ನೇಣಿಗೆ ಶರಣಾಗಿದ್ದಾರೆ. ಕೆಲವು ದಿನಗಳ ಹಿಂದೆ ಪುನೀತ್ ರಾಮ್ ಸಾಹಸ ಕ್ರೀಡೆ ಆಯೋಜನೆಗಾಗಿ ಹಣ ಖರ್ಚು ಮಾಡಿ ಸಂಕಷ್ಟಕ್ಕೆ ಸಿಲುಕಿದ್ದರು. ನಗರದಲ್ಲಿ ಹಾವುಗಳನ್ನು ರಕ್ಷಣೆ ಮಾಡಿ ಅರಣ್ಯ ಪ್ರದೇಶಕ್ಕೆ ಬಿಡ್ತಿದ್ದ ಯುವಕ, ಆದ್ರೆ ಸಾಲದ ಹೊರೆ ಹೆಚ್ಚಾಗಿ ಇದೀಗ ನೇಣಿಗೆ ಶರಣಾಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ರಾಮದ ಹೆಬ್ಬಾಗಿಲಿಗೆ ಸರಕು ಲಾರಿ ಡಿಕ್ಕಿ; ಕಂಬ ಬಿದ್ದು, ಬೈಕ್​ ಸವಾರ ಸ್ಥಳದಲ್ಲೇ ಮೃತ

ಗ್ರಾಮದ ಹೆಬ್ಬಾಗಿಲಿಗೆ ಸರಕು ತುಂಬಿದ್ದ ಲಾರಿ ಡಿಕ್ಕಿಯಾಗಿ ಡಿಕ್ಕಿ ರಭಸಕ್ಕೆ ಹೆಬ್ಬಾಗಿಲಿನ ಕಂಬ ಬಿದ್ದು, ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಅಂಧ್ರ ಮೂಲದ ಕಾರ್ಮಿಕ ನರಸಪ್ಪ(30) ಸಾವಿಗೀಡಾದ ವ್ಯಕ್ತಿ. ಕೆಲಸ ಅರಸಿ 5 ತಿಂಗಳ ಮಗು ಹಾಗೂ ಪತ್ನಿಯನ್ನ ಊರಲ್ಲೇ ಬಿಟ್ಟು, 5 ದಿನದ ಹಿಂದೆಯಷ್ಟೇ ಬಂದಿದ್ದ ಕಾರ್ಮಿಕ ನರಸಪ್ಪ. ಪೊಲೀಸ್ ಸಿಬ್ಬಂದಿ ಲಾರಿ ಚಾಲಕನನ್ನ ವಶಕ್ಕೆ ಪಡೆದಿದ್ದಾರೆ. ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಲಾರಿ ಚಾಲಕ ಕನ್ಜಿಮ್ ಪಾಷಾ, ಬೆಂಗಳೂರಿನ ಕಲಾಸಿಪಾಳ್ಯದವ. ಜಖಂಗೊಂಡಿರುವ ಪಕ್ಕದ ಮತ್ತೊಂದು ಆರ್ಚ್ ತೆರವು ಕಾರ್ಯ ಭರದಿಂದ ಸಾಗಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:17 pm, Sat, 4 June 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ