AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kashi Yatra: ಕಾಶಿ ಯಾತ್ರೆಗೆ ಹೋಗಲು ನೋಂದಾಯಿಸಿಕೊಳ್ಳುವುದು ಹೇಗೆ? ಸಬ್ಸಿಡಿಗಾಗಿ ನೀಡಬೇಕಾದ ದಾಖಲೆಗಳೇನು? ಇಲ್ಲಿದೆ ಮಾಹಿತಿ

ಈ ಕಾಶಿ ಯಾತ್ರಾ ಯೋಜನೆಗಾಗಿ ಆನ್‌ಲೈನ್ ಫಾರ್ಮ್​​ನ್ನು ಭರ್ತಿ ಮಾಡಲು ಬಯಸುವ ಅರ್ಜಿದಾರರು ಕರ್ನಾಟಕ ಸರ್ಕಾರದ ಅಧಿಕೃತ ವೆಬ್‌ಸೈಟ್​​ಗಳಾದ itms.kar.nic.in ಮತ್ತು sevasindhuservices.karnataka.gov.in ಭೇಟಿ ನೀಡಿ.

Kashi Yatra: ಕಾಶಿ ಯಾತ್ರೆಗೆ ಹೋಗಲು ನೋಂದಾಯಿಸಿಕೊಳ್ಳುವುದು ಹೇಗೆ? ಸಬ್ಸಿಡಿಗಾಗಿ ನೀಡಬೇಕಾದ ದಾಖಲೆಗಳೇನು? ಇಲ್ಲಿದೆ ಮಾಹಿತಿ
ಕಾಶಿ
TV9 Web
| Edited By: |

Updated on: Jul 15, 2022 | 4:33 PM

Share

ಬೆಂಗಳೂರು: ಕರ್ನಾಟಕದಿಂದ ಕಾಶಿಗೆ ಭಾರತ್‌ ಗೌರವ್‌ (Bharat Gaurav Train) ರೈಲು ಯೋಜನೆ ಪ್ರಾರಂಭವಾಗಲಿದೆ ಎಂದು ಈ ಹಿಂದೆ ಮಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ(Shashikala Jolle) ತಿಳಿಸಿದ್ದರು. ಸದ್ಯ ಈಗ ಕಾಶಿ ಯಾತ್ರೆ (Kashi Yatra) ತೆರಳುವ ಯಾತ್ರಾರ್ಥಿಗಳಿಗೆ 5,000 ರೂ. ಸಹಾಯಧನ ನೀಡಲು ಸರ್ಕಾರ ಮುಂದಾಗಿದೆ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವವರಿಗೆ ನೇರವಾಗಿ ನಗದು ವರ್ಗಾವಣೆ ಮಾಡಲಾಗುವುದು. 5 ಸಾವಿರ ರೂ. ನೇರ ನಗದು ವರ್ಗಾವಣೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನಿನ್ನೆ (ಜುಲೈ 14) ರಂದು ಚಾಲನೆ ನೀಡಿದ್ದಾರೆ. ಈ ಯೋಜನೆಯು ಉತ್ತರ ಪ್ರದೇಶದ ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೀರ್ಥಯಾತ್ರೆ ಕೈಗೊಳ್ಳಲು ಸುಮಾರು 30,000 ಯಾತ್ರಾರ್ಥಿಗಳಿಗೆ ತಲಾ ₹ 5,000 ನಗದು ಸಹಾಯವನ್ನು ನೀಡಲಾಗುವುದು ಎಂದು ಕರ್ನಾಟಕದ ಧಾರ್ಮಿಕ ದತ್ತಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಈ ಯೋಜನೆಗೆ ₹ 7 ಕೋಟಿವರೆಗೆ ಮೀಸಲಿಟ್ಟಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಾಶಿ ಯಾತ್ರೆಗೆ ಹೇಗೆ, ಯಾರೆಲ್ಲ ಹೋಗಬಹುದು ಮತ್ತು ಹೇಗೆ ನೋಂದಣಿ ಮಾಡಬೇಕು ಎನ್ನುವುದನ್ನು ತಿಳಿಯಲು ಮುಂದೆ ಓದಿ.

ನೋಂದಣಿ ಹೇಗೆ?

ಈ ಕಾಶಿ ಯಾತ್ರಾ ಯೋಜನೆಗಾಗಿ ಆನ್‌ಲೈನ್ ಫಾರ್ಮ್​​ನ್ನು ಭರ್ತಿ ಮಾಡಲು ಬಯಸುವ ಅರ್ಜಿದಾರರು ಕರ್ನಾಟಕ ಸರ್ಕಾರದ ಅಧಿಕೃತ ವೆಬ್‌ಸೈಟ್​​ಗಳಾದ itms.kar.nic.in ಮತ್ತು sevasindhuservices.karnataka.gov.in ಮೂಲಕ ಯಾತ್ರಿಗಳು ಸಬ್ಸಿಡಿಗಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.

ಕರ್ನಾಟಕ ಕಾಶಿ ಯಾತ್ರಾ ಯೋಜನೆ ಅರ್ಹತಾ ಮಾಹಿತಿ:

ಯೋಜನೆಯ ಪ್ರಯೋಜನಗಳನ್ನು ಪಡೆಯಲು ಬಯಸುವ ಅರ್ಜಿದಾರರು ಈ ಅರ್ಹತಾ ಮಾನದಂಡವನ್ನು ಅನುಸರಿಸಬೇಕಾಗುತ್ತದೆ.

  • ಕರ್ನಾಟಕದ ನಿವಾಸಿಗಳು ಮಾತ್ರ ಈ ಪ್ರಯೋಜಗೆ ಅರ್ಹರು.
  • ಮತದಾರರ ಗುರುತಿನ ಚೀಟಿ, ಆಧಾರ್ ಅಥವಾ ಪಡಿತರ ಚೀಟಿ ಹೊಂದಿರಬೇಕು
  • ಅಭ್ಯರ್ಥಿಗಳು 18 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಾಗಿರಬೇಕು.
  • ಈ ಹಿಂದೆ ಸಬ್ಸಿಡಿ ಸ್ವೀಕರಿಸುವವರು ಈ ಭಾರಿ ಅರ್ಹರಲ್ಲ.

ಅಗತ್ಯವಿರುವ ದಾಖಲೆಗಳು:

  • ವೋಟರ್ ಐಡಿ, ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಕರ್ನಾಟಕ ಮೂಲದ ನಿವಾಸದ ಪುರಾವೆ
  • ಆಧಾರ್ ಕಾರ್ಡ್, ವೋಟರ್ ಐಡಿ, ಇತ್ಯಾದಿ.
  • ಪಾಸ್ಪೋರ್ಟ್ ಗಾತ್ರದ ಫೋಟೋ.
  • ಮೊಬೈಲ್ ನಂಬರ್
  • ಬ್ಯಾಂಕ್ ಖಾತೆ ವಿವರಗಳು
  • ಕೋವಿಡ್ ಲಸಿಕೆ ಪ್ರಮಾಣಪತ್ರ ಮತ್ತು ಇತ್ತೀಚಿನ ಕೋವಿಡ್ ಋಣಾತ್ಮಕ ವರದಿ ಹೊಂದಿರಬೇಕು.

ಆಹಾರ, ನೀರು, ವಸತಿ, ಸ್ಥಳೀಯ ಸಾರಿಗೆ ಮತ್ತು ಇತರೆ ಮೂಲಭೂತ ಸೌಕರ್ಯಗಳಿಗೆ ರೈಲ್ವೇಯ ಅಧೀನ ಸಂಸ್ಥೆಯ ಜೊತೆ ಐಆರ್‌ಸಿಟಿಸಿ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. 7 ದಿನಗಳ ಪ್ರವಾಸಕ್ಕೆ ಅಂದಾಜು 15 ಸಾವಿರ ರೂಪಾಯಿ ವೆಚ್ಚವಾಗಲಿದ್ದು, ಇದರಲ್ಲಿ 5 ಸಾವಿರ ರೂಗಳನ್ನು ಸಹಾಯಧನವನ್ನಾಗಿ ನೀಡಲಾಗುವುದು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ