AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather Forecast: ಕರಾವಳಿಯಲ್ಲಿ ಮುಂಗಾರು ಚುರುಕು, ಉ.ಕ ಜಿಲ್ಲೆಗಳಲ್ಲಿ ಬಿಸಿ ಗಾಳಿ: 5 ದಿನದ ವರದಿ ಹೀಗಿದೆ

ಈ ಬಾರಿಗೆ ಮೇ 29ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿತ್ತಾದರೂ, ಜೂ.4ಕ್ಕೆ ಅಧಿಕೃತವಾಗಿ ಕೇರಳಕ್ಕೆ ಮುಂಗಾರು ಪ್ರವೇಶಿಸಿತ್ತು. ಬಳಿಕದಲ್ಲಿ ಕರಾವಳಿ ಕರ್ನಾಟದ ಮೂಲಕ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿತ್ತು. ಆದರೆ ಮಳೆಗಾಲ ಆರಂಭದಲ್ಲೇ ಮುಂಗಾರು ದುರ್ಬಲಗೊಂಡಿದೆ. ಇದರ ಮಧ್ಯೆಯೂ ಕರ್ನಾಟಕದಲ್ಲಿ ಮಳೆ ಮುನ್ಸೂಚನೆ ಇದೆ. ಹಾಗಾದ್ರೆ, ಎಲ್ಲೆಲ್ಲಿ ಎಷ್ಟು ದಿನ ಮಳೆಯಾಗಲಿದೆ ಎನ್ನುವ ಭಾರತೀಯ ಹವಾಮಾನ ಇಲಾಖೆಯ ವರದಿ ಇಲ್ಲಿದೆ.

Karnataka Weather Forecast: ಕರಾವಳಿಯಲ್ಲಿ ಮುಂಗಾರು ಚುರುಕು, ಉ.ಕ ಜಿಲ್ಲೆಗಳಲ್ಲಿ ಬಿಸಿ ಗಾಳಿ:  5 ದಿನದ ವರದಿ ಹೀಗಿದೆ
Karnataka Weather Report
ರಮೇಶ್ ಬಿ. ಜವಳಗೇರಾ
|

Updated on: Jun 20, 2026 | 6:03 PM

Share

ಬೆಂಗಳೂರು, (ಜೂನ್ 20)): ಕರ್ನಾಟಕದಲ್ಲಿ  ಮುಂಗಾರು (Monsoon Rain) ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು (Karavali And Malenadu)  ಭಾಗದ ಜಿಲ್ಲೆಗಳಲ್ಲೂ ಈ ಬಾರಿ ಮಳೆ ದೂರವಾಗಿದೆ. ಇದರ ಮಧ್ಯೆಯೂ ಸಹ ಮುಂದಿನ ಐದು ಅಂದರೆ ಜೂನ್ 25ರವರೆಗೆ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಸ್ತುತ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದ್ದು, ಮುಂದಿನ ವಾರದಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮುಂದಿನ 5 ದಿನಗಳ ಹವಾಮಾನ ಮುನ್ಸೂಚನೆ

ಮುಂದಿನ 5 ದಿನ ರಾಜ್ಯದ ಹಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ನಂತರ ಗುಡುಗು ಸಹಿತ ಬಿರುಗಾಳಿ ಮಳೆಯಾಗಬಹುದು. ಇನ್ನು ಜೂನ್ 22ರಂದು ಮುಂಗಾರು ಮಾರುತಗಳು ಚುರುಕಾಗುವುದರಿಂದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆ ಇದೆ. ಜೂನ್ 23 ರಿಂದ 25ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಪ್ರಾದೇಶಿಕವಾರು ಹವಾಮಾನ ಮುನ್ಸೂಚನೆ

ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂನ್ 22 ರಿಂದ ಈ ಭಾಗಗಳಲ್ಲಿ ಮುಂಗಾರು ತೀವ್ರಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 21ರಿಂದ 24 ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂನ್ 22 ಮತ್ತು 23ರಂದು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡು

ಮುಂದಿನ ಎರಡು ದಿನಗಳಲ್ಲಿ ಬೆಳಗಾವಿ, ರಾಯಚೂರು, ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿ ಗಾಳಿ ಮತ್ತು ತೇವಾಂಶ ಎಚ್ಚರಿಕೆ ನೀಡಲಾಗಿದ್ದು, ಐಎಂಡಿ ಯೆಲ್ಲೋ ಅಲರ್ಟ್ ನೀಡಿದೆ.

ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದ ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ) ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us