AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರ ನಾಸಿರ್​ನನ್ನು ಎಸ್ಕೆಫ್ ಮಾಡಿಸಲು ಫಾತಿಮಾ ತಡರಾತ್ರಿ ಪ್ಲಾನ್​: ಫೋನ್​ನಲ್ಲಿ ಗಂಟೆಗಟ್ಟಲೇ ಮಾತುಕತೆ

ಉಗ್ರ ನಾಸಿರ್​ಗೆ ಸಹಾಯ ಮಾಡುತ್ತಿದ್ದ ಮೂವರನ್ನ ಬಂಧಿಸಿ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳ ಬಳಿ ದೊರೆತ ಮೊಬೈಲ್​ ಪರಿಶೀಲಿಸಿದಾಗ ಸ್ಫೋಟಕ ಅಂಶಗಳು ಬಹಿರಂಗಗೊಂಡಿವೆ. ಎನ್​ಐಎ ವಿಚಾರಣೆ ವೇಳೆ ಏನೆಲ್ಲ ಅಂಶಗಳು ಬಹಿರಂಗಗೊಂಡಿವೆ? ಇಲ್ಲಿದೆ ವಿವರ

ಉಗ್ರ ನಾಸಿರ್​ನನ್ನು ಎಸ್ಕೆಫ್ ಮಾಡಿಸಲು ಫಾತಿಮಾ ತಡರಾತ್ರಿ ಪ್ಲಾನ್​: ಫೋನ್​ನಲ್ಲಿ ಗಂಟೆಗಟ್ಟಲೇ ಮಾತುಕತೆ
ಎಎಸ್​ಐ ಚಾಂದ್ ಪಾಷಾ ಹಾಗೂ ಫಾತಿಮಾ
ವಿವೇಕ ಬಿರಾದಾರ
|

Updated on:Jul 13, 2025 | 10:28 PM

Share

ಬೆಂಗಳೂರು, ಜುಲೈ 13: ಉಗ್ರ ನಾಸಿರ್​ಗೆ (Nasir) ಸಹಾಯ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ. ಮೂವರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಆರು ದಿ‌ನ ಕಸ್ಟಡಿಗೆ ಪಡೆಯಲಾಗಿದೆ. 4ನೇ ದಿನದ ವಿಚಾರಣೆ ವೇಳೆ ಹಲವು ಸಂಗತಿಗಳು ಬಯಲಾಗಿವೆ.  ತಲೆ ಮರೆಸಿಕೊಂಡಿರುವ ಜುನೈದ್​​ ಮತ್ತು ಈತನ ತಾಯಿ ಫಾತಿಮಾ ತಡರಾತ್ರಿ ಫೋನ್​ನಲ್ಲಿ ಗಂಟೆಗಟ್ಟಲೇ ಮಾತನಾಡುತ್ತಿದ್ದರು ಎಂಬವುದು ತನಿಖೆ ವೇಳೆ ಗೊತ್ತಾಗಿದೆ.  

ದಕ್ಷಿಣ ಭಾರತದಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣಗಳ ಉಗ್ರ ಜುನೈದ್ ಸದ್ಯ ಗಲ್ಫ್​ನಲ್ಲಿ‌ ತಲೆಮರೆಸಿಕೊಂಡಿದ್ದಾನೆ. ಈತನಿಗಾಗಿ ಎನ್​ಐಎ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಇದರ ನಡುವೆ ಜೈಲಿನಲ್ಲಿರುವ ಉಗ್ರ ನಾಸಿರ್​ಗೆ ಸಹಾಯ ಮಾಡುತ್ತಿದ್ದ ಮೂವರನ್ನು ಎನ್​ಐಎ ಬಂಧಿಸಿದೆ. ಡಾ ನಾಗರಾಜ್, ASI ಚಾನ್ ಪಾಷಾ, ಜುನೈದ್ ತಾಯಿ ಫಾತಿಮಾಳನ್ನು ಬಂಧಿಸಲಾಗಿದೆ. ಆರು ದಿನಗಳ ಹಿಂದೆ ಫಾತಿಮಾ ಮನೆ ಮೇಲೆ ದಾಳಿ ಮಾಡಿದ್ದಾಗ ಅಲ್ಲಿ ಸಿಕ್ಕ ಮೊಬೈಲ್ ಫೋನ್, ಹಣ, ಕಾಗದ ಪತ್ರಗಳನ್ನು ಎನ್​ಐಎ ವಶಕ್ಕೆ ಪಡೆದಿದೆ. ವಶ ಪಡಿಸಿಕೊಂಡ ಮೊಬೈಲ್ ಸಿಡಿಆರ್ ತೆಗೆಸಿದ್ದ ಎನ್​ಐಎಗೆ ಮಾಹಿತಿಯೊಂದು ಸಿಕ್ಕಿದೆ.

ಫಾತಿಮಾ ಪುತ್ರ ಜುನೈದ್​ನ ಜೊತೆಗೆ ತಡರಾತ್ರಿ ಎರಡು ಗಂಟೆ ಸುಮಾರಿಗೆ ಕರೆ ಮಾಡಿ ಸುಮಾರು 40 ನಿಮಿಷ ಮಾತನಾಡಿದ್ದಾಳೆ. ಜುನೈದ್ ಹೇಳುತ್ತಿದ್ದ ಪ್ಲಾನ್​ಗಳನ್ನು ಫಾತಿಮಾ ಎಎಸ್ಐ ಚಾನ್ ಪಾಷಾನಿಗೆ ಹೇಳುತ್ತಿದ್ದಳು. ಚಾನ್ ಪಾಷಾ, ವೈದ್ಯ ನಾಗರಾಜ್ ಮೂಲಕ ನಾಸಿರ್​ಗೆ ತಿಳಿಸುತ್ತಿದ್ದನು. ಈ ಮಾಹಿತಿ ನಾಸಿರ್​ಗೆ ತಿಳಿಸಲು ಲಕ್ಷ ಲಕ್ಷ ಹಣವನ್ನು ಚಾನ್ ಪಾಷಾ ಮತ್ತು ನಾಗರಾಜ್ ಪಡೆದಿದ್ದರು ಎಂಬುವುದು ತನಿಖೆ ವೇಳೆ ಗೊತ್ತಾಗಿದೆ.

ಇದನ್ನೂ ಓದಿ
Image
ಕೊಯಮತ್ತೂರು ಬಾಂಬ್​ ಸ್ಫೋಟದ ಆರೋಪಿ 27 ವರ್ಷದ ಬಳಿಕ ಕರ್ನಾಟಕದಲ್ಲಿ ಅರೆಸ್ಟ್
Image
ಸಂಪುಟ ವಿಸ್ತರಣೆಗಾಗಿ ದೆಹಲಿಗೆ ಬಂದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್
Image
ಹಲವು ಸ್ಫೋಟಗಳ ಮಾಸ್ಟರ್ ಮೈಂಡ್ ನಾಸೀರ್ ಜತೆ ಬಂಧಿತರಿಗೆ ಪ್ರಬಲ ನಂಟು
Image
ಅಡ್ವಾಣಿ ಮೇಲೆ ದಾಳಿಯ ಸಂಚು ರೂಪಿಸಿದ್ದ ಉಗ್ರ ಅಬೂಬಕರ್ ಅರೆಸ್ಟ್​

ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್, ರಾಮೇಶ್ವರಂ ಕೆಫೆ ಸ್ಫೋಟ ಮಾಸ್ಟರ್ ಮೈಂಡ್​ಗೂ ಬಂಧಿತ ಶಂಕಿತರಿಗೂ ಪ್ರಬಲ ನಂಟು!

ಉಗ್ರ ನಾಸಿರ್​ ಪರಾರಿಯಾಗಲು ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಲಾಗಿತ್ತು. ಆದರೆ, 2023 ರಲ್ಲಿ ಸಿಸಿಬಿ ಪೊಲೀಸರು ಮಾಡಿದ್ದ ದಾಳಿ ಇದೆಲ್ಲವನ್ನು ಹಾಳು ಮಾಡಿತ್ತು. ಉಗ್ರ ನಾಸಿರ್​ ಪರಾರಿಯಾಗಲು ತಯಾರು ಮಾಡಿದ್ದ ಜೀವಂತ ಗ್ರೆನೇಡ್ ಜಪ್ತಿ ಮಾಡಿ, ಐವರನ್ನು ಸಿಸಿಬಿ ಬಂಧಿಸಿತ್ತು. ತನಿಖೆಯ ಮುಂದುವರೆದ ಭಾಗದಲ್ಲಿ ಎನ್​ಐಎ ಎಂಟ್ರಿಯಾಗಿ ಸದ್ಯ ಮೂವರು ಮೀಡಿಯೇಟರ್​ಗಳನ್ನು ಬಂಧಿಸಿ ವಿಚಾರಣೆ ಮುಂದುವರೆಸಿದೆ. ಇನ್ನೂ ಎರಡು ದಿನ ಮೂವರೂ ಎನ್​ಐಎ ಕಸ್ಟಡಿಯಲ್ಲಿ ಇರಲಿದ್ದು ಇನ್ನೂ ಏನೆಲ್ಲ ಪ್ಲಾನ್ ಮಾಡಿಕೊಂಡಿದ್ದರು ಎಂಬುವುದು ಎನ್​ಐಎ ಪತ್ತೆ ಹಚ್ಚಲಿದೆ.

ವರದಿ: ವಿಕಾಸ್​, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:18 pm, Sun, 13 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ