AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಇಸ್ರೇಲ್‌ ದೂತಾವಾಸ ಕಚೇರಿ ಸ್ಫೋಟಕ್ಕೆ ಸಂಚು: ಪ್ರಮುಖ ಸಂಚುಕೋರ ನೂರುದ್ದೀನ್ ಮೈಸೂರಿನಲ್ಲಿ ಬಂಧನ

ವಿವಿಧ ಭಯೋತ್ಪಾದಕ ಚಟುವಟಿಕೆಗಳಲ್ಲಿ ಶಾಮೀಲಾಗಿ ತನಿಖಾ ಏಜೆನ್ಸಿಗಳಿಗೆ ಬೇಕಾಗಿದ್ದ ಉಗ್ರ ನೂರುದ್ದೀನ್ ಅಲಿಯಾಸ್ ರಫಿಯನ್ನು ಬಂಧಿಸುವಲ್ಲಿ ಕೊನೆಗೂ ರಾಷ್ಟ್ರೀಯ ತನಿಖಾ ದಳ ಯಶಸ್ವಿಯಾಗಿದೆ. ಈತ ಮೈಸೂರಿನ ರಾಜೀವ್ ನಗರದಲ್ಲಿ ತಲೆಮರೆಸಿಕೊಂಡಿದ್ದ. ಈತ ಬೆಂಗಳೂರಿನಲ್ಲಿರುವ ಇಸ್ರೇಲ್‌ ದೂತಾವಾಸ ಕಚೇರಿ ಸ್ಫೋಟಕ್ಕೆ ಸಂಚು ಹೂಡಿದ್ದವರಲ್ಲಿ ಪ್ರಮುಖನಾಗಿದ್ದಾನೆ.

ಬೆಂಗಳೂರಿನ ಇಸ್ರೇಲ್‌ ದೂತಾವಾಸ ಕಚೇರಿ ಸ್ಫೋಟಕ್ಕೆ ಸಂಚು: ಪ್ರಮುಖ ಸಂಚುಕೋರ ನೂರುದ್ದೀನ್ ಮೈಸೂರಿನಲ್ಲಿ ಬಂಧನ
ಎನ್​ಐಎ
ಗಣಪತಿ ಶರ್ಮಾ
|

Updated on: May 16, 2024 | 8:11 AM

Share

ಬೆಂಗಳೂರು, ಮೇ 16: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿರುವ (Bengaluru) ಇಸ್ರೇಲ್‌ ದೂತಾವಾಸ ಕಚೇರಿ (Israel Consulate) ಸ್ಫೋಟಕ್ಕೆ ಮತ್ತು ದೇಶದ ವಿವಿಧ ನಗರಗಳಲ್ಲಿರುವ ವಿದೇಶಗಳ ರಾಯಭಾರ ಕಚೇರಿಗಳಲ್ಲಿ ಸ್ಫೋಟಕ್ಕೆ ಸಂಚು ಹೂಡಿದ್ದ ಪ್ರಮುಖ ಆರೋಪಿ ನೂರುದ್ದೀನ್ ಅಲಿಯಾಸ್ ರಫಿಯನ್ನು (Nuruddin alias Rafi) ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಮೈಸೂರಿನಲ್ಲಿ ಬಂಧಿಸಿದ್ದಾರೆ. ಸ್ಫೋಟಕ್ಕೆ ಸಂಚು ಹೂಡಿದ್ದ ಆರೋಪದಲ್ಲಿ ಬಂಧಕ್ಕೊಳಗಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ನೂರುದ್ದೀನ್ ಬಳಿಕ ನಾಪತ್ತೆಯಾಗಿದ್ದ.

ವಿಚಾರಣೆಗೂ ಹಾಜರಾಗದೆ ನಾಪತ್ತೆಯಾದ ಕಾರಣ ಆತನನ್ನು ಚೆನ್ನೈನ ನ್ಯಾಯಾಲಯ ಘೋಷಿತ ಅಪರಾಧಿ ಎಂದು ಪ್ರಕಟಿಸಿತ್ತು. ಅದರ ಬೆನ್ನಲ್ಲೇ ಆತ ಮೈಸೂರಿನ ರಾಜೀವ್ ನಗರದಲ್ಲಿ ಅಡಗಿದ್ದಾನೆ ಎಂಬ ಸುಳಿವು ಎನ್​ಐಎ ಅಧಿಕಾರಿಗಳಿಗೆ ದೊರೆತಿತ್ತು. ಸುಳಿವು ದೊರೆತ ಬೆನ್ನಲ್ಲೇ ದಾಳಿ ನಡೆಸಿದ ಎನ್​ಐಎ ತಂಡ ಆತನನ್ನು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದೆ.

ನೂರುದ್ದೀನ್, ಪಾಕಿಸ್ತಾನದ ಅಮಿರ್ ಜುಬೇಗ್‌ ಸಿದ್ದಿಕೆ ಮತ್ತು ಶ್ರೀಲಂಕಾದ ಮುಹಮ್ಮದ್ ಜೊತೆ ಸೇರಿಕೊಂಡು ಚೆನ್ನೈನಲ್ಲಿರುವ ಅಮೆರಿಕ ದೂತಾವಾಸ ಕಚೇರಿ ಮತ್ತು ಬೆಂಗಳೂರಿನಲ್ಲಿರುವ ಇಸ್ರೇಲ್ ದೂತಾವಾಸ ಕಚೇರಿಯನ್ನು ಸ್ಪೋಟಿಸಲು 2014ರಲ್ಲಿ ಸಂಚು ರೂಪಿಸಿದ್ದ. ಈ ಕೃತ್ಯಕ್ಕೆ ಅಗತ್ಯವಾದ ಹಣವನ್ನು ನೂರೂದ್ದೀನ್ ನಕಲಿ ನೋಟು ಚಲಾವಣೆಯ ಮೂಲಕ ನೀಡಿದ್ದ. ಈ ಪ್ರಕರಣದಲ್ಲಿ ಆತನ ಬಂಧನವಾಗಿ ಆತನ ವಿರುದ್ಧ ಬೇಹುಗಾರಿಕೆ ಪ್ರಕರಣ ದಾಖಲಿಸಲಾಗಿತ್ತು. ಆತನಿಗೆ 2023ರಲ್ಲಿ ಷರತ್ತಬದ್ಧ ಜಾಮೀನು ನೀಡಲಾಗಿತ್ತು. ಬಳಿಕ ಈತ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಆತನ ಕುರಿತು ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.

ಇದನ್ನೂ ಓದಿ: ಒಮ್ಮೆ ಟಿಕೆಟ್ ರದ್ದು, ಮತ್ತೆ ಟಿಕೆಟ್ ಕಾಯ್ದಿರಿಸಿ ವಿಮಾನ ಏರದ ಪ್ರಜ್ವಲ್: ಎಸ್​ಐಟಿ ಅಧಿಕಾರಿಗಳು ಬೇಸ್ತು

ಕೆಲವೇ ದಿನಗಳ ಹಿಂದೆ, ಅಂದರೆ ಮೇ 7ರಂದು ನೂರುದ್ದೀನ್​ನನ್ನು ಎನ್‌ಐಎ ವಿಶೇಷ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ