AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಇಸ್ರೇಲ್‌ ದೂತಾವಾಸ ಕಚೇರಿ ಸ್ಫೋಟಕ್ಕೆ ಸಂಚು: ಪ್ರಮುಖ ಸಂಚುಕೋರ ನೂರುದ್ದೀನ್ ಮೈಸೂರಿನಲ್ಲಿ ಬಂಧನ

ವಿವಿಧ ಭಯೋತ್ಪಾದಕ ಚಟುವಟಿಕೆಗಳಲ್ಲಿ ಶಾಮೀಲಾಗಿ ತನಿಖಾ ಏಜೆನ್ಸಿಗಳಿಗೆ ಬೇಕಾಗಿದ್ದ ಉಗ್ರ ನೂರುದ್ದೀನ್ ಅಲಿಯಾಸ್ ರಫಿಯನ್ನು ಬಂಧಿಸುವಲ್ಲಿ ಕೊನೆಗೂ ರಾಷ್ಟ್ರೀಯ ತನಿಖಾ ದಳ ಯಶಸ್ವಿಯಾಗಿದೆ. ಈತ ಮೈಸೂರಿನ ರಾಜೀವ್ ನಗರದಲ್ಲಿ ತಲೆಮರೆಸಿಕೊಂಡಿದ್ದ. ಈತ ಬೆಂಗಳೂರಿನಲ್ಲಿರುವ ಇಸ್ರೇಲ್‌ ದೂತಾವಾಸ ಕಚೇರಿ ಸ್ಫೋಟಕ್ಕೆ ಸಂಚು ಹೂಡಿದ್ದವರಲ್ಲಿ ಪ್ರಮುಖನಾಗಿದ್ದಾನೆ.

ಬೆಂಗಳೂರಿನ ಇಸ್ರೇಲ್‌ ದೂತಾವಾಸ ಕಚೇರಿ ಸ್ಫೋಟಕ್ಕೆ ಸಂಚು: ಪ್ರಮುಖ ಸಂಚುಕೋರ ನೂರುದ್ದೀನ್ ಮೈಸೂರಿನಲ್ಲಿ ಬಂಧನ
ಎನ್​ಐಎ
Follow us
Ganapathi Sharma
|

Updated on: May 16, 2024 | 8:11 AM

ಬೆಂಗಳೂರು, ಮೇ 16: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿರುವ (Bengaluru) ಇಸ್ರೇಲ್‌ ದೂತಾವಾಸ ಕಚೇರಿ (Israel Consulate) ಸ್ಫೋಟಕ್ಕೆ ಮತ್ತು ದೇಶದ ವಿವಿಧ ನಗರಗಳಲ್ಲಿರುವ ವಿದೇಶಗಳ ರಾಯಭಾರ ಕಚೇರಿಗಳಲ್ಲಿ ಸ್ಫೋಟಕ್ಕೆ ಸಂಚು ಹೂಡಿದ್ದ ಪ್ರಮುಖ ಆರೋಪಿ ನೂರುದ್ದೀನ್ ಅಲಿಯಾಸ್ ರಫಿಯನ್ನು (Nuruddin alias Rafi) ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಮೈಸೂರಿನಲ್ಲಿ ಬಂಧಿಸಿದ್ದಾರೆ. ಸ್ಫೋಟಕ್ಕೆ ಸಂಚು ಹೂಡಿದ್ದ ಆರೋಪದಲ್ಲಿ ಬಂಧಕ್ಕೊಳಗಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ನೂರುದ್ದೀನ್ ಬಳಿಕ ನಾಪತ್ತೆಯಾಗಿದ್ದ.

ವಿಚಾರಣೆಗೂ ಹಾಜರಾಗದೆ ನಾಪತ್ತೆಯಾದ ಕಾರಣ ಆತನನ್ನು ಚೆನ್ನೈನ ನ್ಯಾಯಾಲಯ ಘೋಷಿತ ಅಪರಾಧಿ ಎಂದು ಪ್ರಕಟಿಸಿತ್ತು. ಅದರ ಬೆನ್ನಲ್ಲೇ ಆತ ಮೈಸೂರಿನ ರಾಜೀವ್ ನಗರದಲ್ಲಿ ಅಡಗಿದ್ದಾನೆ ಎಂಬ ಸುಳಿವು ಎನ್​ಐಎ ಅಧಿಕಾರಿಗಳಿಗೆ ದೊರೆತಿತ್ತು. ಸುಳಿವು ದೊರೆತ ಬೆನ್ನಲ್ಲೇ ದಾಳಿ ನಡೆಸಿದ ಎನ್​ಐಎ ತಂಡ ಆತನನ್ನು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದೆ.

ನೂರುದ್ದೀನ್, ಪಾಕಿಸ್ತಾನದ ಅಮಿರ್ ಜುಬೇಗ್‌ ಸಿದ್ದಿಕೆ ಮತ್ತು ಶ್ರೀಲಂಕಾದ ಮುಹಮ್ಮದ್ ಜೊತೆ ಸೇರಿಕೊಂಡು ಚೆನ್ನೈನಲ್ಲಿರುವ ಅಮೆರಿಕ ದೂತಾವಾಸ ಕಚೇರಿ ಮತ್ತು ಬೆಂಗಳೂರಿನಲ್ಲಿರುವ ಇಸ್ರೇಲ್ ದೂತಾವಾಸ ಕಚೇರಿಯನ್ನು ಸ್ಪೋಟಿಸಲು 2014ರಲ್ಲಿ ಸಂಚು ರೂಪಿಸಿದ್ದ. ಈ ಕೃತ್ಯಕ್ಕೆ ಅಗತ್ಯವಾದ ಹಣವನ್ನು ನೂರೂದ್ದೀನ್ ನಕಲಿ ನೋಟು ಚಲಾವಣೆಯ ಮೂಲಕ ನೀಡಿದ್ದ. ಈ ಪ್ರಕರಣದಲ್ಲಿ ಆತನ ಬಂಧನವಾಗಿ ಆತನ ವಿರುದ್ಧ ಬೇಹುಗಾರಿಕೆ ಪ್ರಕರಣ ದಾಖಲಿಸಲಾಗಿತ್ತು. ಆತನಿಗೆ 2023ರಲ್ಲಿ ಷರತ್ತಬದ್ಧ ಜಾಮೀನು ನೀಡಲಾಗಿತ್ತು. ಬಳಿಕ ಈತ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಆತನ ಕುರಿತು ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.

ಇದನ್ನೂ ಓದಿ: ಒಮ್ಮೆ ಟಿಕೆಟ್ ರದ್ದು, ಮತ್ತೆ ಟಿಕೆಟ್ ಕಾಯ್ದಿರಿಸಿ ವಿಮಾನ ಏರದ ಪ್ರಜ್ವಲ್: ಎಸ್​ಐಟಿ ಅಧಿಕಾರಿಗಳು ಬೇಸ್ತು

ಕೆಲವೇ ದಿನಗಳ ಹಿಂದೆ, ಅಂದರೆ ಮೇ 7ರಂದು ನೂರುದ್ದೀನ್​ನನ್ನು ಎನ್‌ಐಎ ವಿಶೇಷ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ಹಾಸನದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪ, ಭಯಭೀತರಾದ ಜನ!
ಹಾಸನದಲ್ಲಿ ಕಾಣಿಸಿಕೊಂಡ 12 ಅಡಿ ಉದ್ದದ ಕಾಳಿಂಗ ಸರ್ಪ, ಭಯಭೀತರಾದ ಜನ!