AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಇಸ್ರೇಲ್‌ ದೂತಾವಾಸ ಕಚೇರಿ ಸ್ಫೋಟಕ್ಕೆ ಸಂಚು: ಪ್ರಮುಖ ಸಂಚುಕೋರ ನೂರುದ್ದೀನ್ ಮೈಸೂರಿನಲ್ಲಿ ಬಂಧನ

ವಿವಿಧ ಭಯೋತ್ಪಾದಕ ಚಟುವಟಿಕೆಗಳಲ್ಲಿ ಶಾಮೀಲಾಗಿ ತನಿಖಾ ಏಜೆನ್ಸಿಗಳಿಗೆ ಬೇಕಾಗಿದ್ದ ಉಗ್ರ ನೂರುದ್ದೀನ್ ಅಲಿಯಾಸ್ ರಫಿಯನ್ನು ಬಂಧಿಸುವಲ್ಲಿ ಕೊನೆಗೂ ರಾಷ್ಟ್ರೀಯ ತನಿಖಾ ದಳ ಯಶಸ್ವಿಯಾಗಿದೆ. ಈತ ಮೈಸೂರಿನ ರಾಜೀವ್ ನಗರದಲ್ಲಿ ತಲೆಮರೆಸಿಕೊಂಡಿದ್ದ. ಈತ ಬೆಂಗಳೂರಿನಲ್ಲಿರುವ ಇಸ್ರೇಲ್‌ ದೂತಾವಾಸ ಕಚೇರಿ ಸ್ಫೋಟಕ್ಕೆ ಸಂಚು ಹೂಡಿದ್ದವರಲ್ಲಿ ಪ್ರಮುಖನಾಗಿದ್ದಾನೆ.

ಬೆಂಗಳೂರಿನ ಇಸ್ರೇಲ್‌ ದೂತಾವಾಸ ಕಚೇರಿ ಸ್ಫೋಟಕ್ಕೆ ಸಂಚು: ಪ್ರಮುಖ ಸಂಚುಕೋರ ನೂರುದ್ದೀನ್ ಮೈಸೂರಿನಲ್ಲಿ ಬಂಧನ
ಎನ್​ಐಎ
ಗಣಪತಿ ಶರ್ಮಾ
|

Updated on: May 16, 2024 | 8:11 AM

Share

ಬೆಂಗಳೂರು, ಮೇ 16: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿರುವ (Bengaluru) ಇಸ್ರೇಲ್‌ ದೂತಾವಾಸ ಕಚೇರಿ (Israel Consulate) ಸ್ಫೋಟಕ್ಕೆ ಮತ್ತು ದೇಶದ ವಿವಿಧ ನಗರಗಳಲ್ಲಿರುವ ವಿದೇಶಗಳ ರಾಯಭಾರ ಕಚೇರಿಗಳಲ್ಲಿ ಸ್ಫೋಟಕ್ಕೆ ಸಂಚು ಹೂಡಿದ್ದ ಪ್ರಮುಖ ಆರೋಪಿ ನೂರುದ್ದೀನ್ ಅಲಿಯಾಸ್ ರಫಿಯನ್ನು (Nuruddin alias Rafi) ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಮೈಸೂರಿನಲ್ಲಿ ಬಂಧಿಸಿದ್ದಾರೆ. ಸ್ಫೋಟಕ್ಕೆ ಸಂಚು ಹೂಡಿದ್ದ ಆರೋಪದಲ್ಲಿ ಬಂಧಕ್ಕೊಳಗಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ನೂರುದ್ದೀನ್ ಬಳಿಕ ನಾಪತ್ತೆಯಾಗಿದ್ದ.

ವಿಚಾರಣೆಗೂ ಹಾಜರಾಗದೆ ನಾಪತ್ತೆಯಾದ ಕಾರಣ ಆತನನ್ನು ಚೆನ್ನೈನ ನ್ಯಾಯಾಲಯ ಘೋಷಿತ ಅಪರಾಧಿ ಎಂದು ಪ್ರಕಟಿಸಿತ್ತು. ಅದರ ಬೆನ್ನಲ್ಲೇ ಆತ ಮೈಸೂರಿನ ರಾಜೀವ್ ನಗರದಲ್ಲಿ ಅಡಗಿದ್ದಾನೆ ಎಂಬ ಸುಳಿವು ಎನ್​ಐಎ ಅಧಿಕಾರಿಗಳಿಗೆ ದೊರೆತಿತ್ತು. ಸುಳಿವು ದೊರೆತ ಬೆನ್ನಲ್ಲೇ ದಾಳಿ ನಡೆಸಿದ ಎನ್​ಐಎ ತಂಡ ಆತನನ್ನು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದೆ.

ನೂರುದ್ದೀನ್, ಪಾಕಿಸ್ತಾನದ ಅಮಿರ್ ಜುಬೇಗ್‌ ಸಿದ್ದಿಕೆ ಮತ್ತು ಶ್ರೀಲಂಕಾದ ಮುಹಮ್ಮದ್ ಜೊತೆ ಸೇರಿಕೊಂಡು ಚೆನ್ನೈನಲ್ಲಿರುವ ಅಮೆರಿಕ ದೂತಾವಾಸ ಕಚೇರಿ ಮತ್ತು ಬೆಂಗಳೂರಿನಲ್ಲಿರುವ ಇಸ್ರೇಲ್ ದೂತಾವಾಸ ಕಚೇರಿಯನ್ನು ಸ್ಪೋಟಿಸಲು 2014ರಲ್ಲಿ ಸಂಚು ರೂಪಿಸಿದ್ದ. ಈ ಕೃತ್ಯಕ್ಕೆ ಅಗತ್ಯವಾದ ಹಣವನ್ನು ನೂರೂದ್ದೀನ್ ನಕಲಿ ನೋಟು ಚಲಾವಣೆಯ ಮೂಲಕ ನೀಡಿದ್ದ. ಈ ಪ್ರಕರಣದಲ್ಲಿ ಆತನ ಬಂಧನವಾಗಿ ಆತನ ವಿರುದ್ಧ ಬೇಹುಗಾರಿಕೆ ಪ್ರಕರಣ ದಾಖಲಿಸಲಾಗಿತ್ತು. ಆತನಿಗೆ 2023ರಲ್ಲಿ ಷರತ್ತಬದ್ಧ ಜಾಮೀನು ನೀಡಲಾಗಿತ್ತು. ಬಳಿಕ ಈತ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಆತನ ಕುರಿತು ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.

ಇದನ್ನೂ ಓದಿ: ಒಮ್ಮೆ ಟಿಕೆಟ್ ರದ್ದು, ಮತ್ತೆ ಟಿಕೆಟ್ ಕಾಯ್ದಿರಿಸಿ ವಿಮಾನ ಏರದ ಪ್ರಜ್ವಲ್: ಎಸ್​ಐಟಿ ಅಧಿಕಾರಿಗಳು ಬೇಸ್ತು

ಕೆಲವೇ ದಿನಗಳ ಹಿಂದೆ, ಅಂದರೆ ಮೇ 7ರಂದು ನೂರುದ್ದೀನ್​ನನ್ನು ಎನ್‌ಐಎ ವಿಶೇಷ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ