AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ: ಎನ್​ಐಎ ಕಾರ್ಯಾಚರಣೆ

ಜಿಹಾದಿ ಸಂಘಟನೆಗೆ ಹಣ ಹೊಂದಿಸಲು ಉಗ್ರಗಾಮಿಗಳು ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಕರ್ನಾಟಕದಲ್ಲಿ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ: ಎನ್​ಐಎ ಕಾರ್ಯಾಚರಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 04, 2021 | 10:39 PM

Share

ಬೆಂಗಳೂರು: ದೇಶದ ವಿವಿಧೆಡೆ ಕಾರ್ಯಾಚರಣೆ ನಡೆಸಿದ ರಾಷ್ಟ್ರೀಯ ತನಿಖಾ ದಳದ (National Investigating Agency – NIA) ಭದ್ರತಾ ಸಿಬ್ಬಂದಿ ಹಲವು ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿಯೂ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಲಾಗಿದೆ. ಬೆಂಗಳೂರಿನ ಶಂಕರ್ ವೆಂಕಟೇಶ್ ಪೆರುಮಾಳ್, ಮಂಗಳೂರಿನ ಅಮರ್ ಅಬ್ದುಲ್ ರೆಹಮಾನ್ ಬಂಧಿತರು. ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತಿಬ್ಬರು ಶಂಕಿತ ಉಗ್ರರನ್ನು ಸೆರೆ ಹಿಡಿಯಲಾಗಿದೆ.

ಕರ್ನಾಟಕ ಸೇರಿದಂತೆ ದೇಶದ 5 ಕಡೆ ಎನ್‌ಐಎ ಬುಧವಾರ ದಾಳಿ ನಡೆಸಿತ್ತು. ಕರ್ನಾಟಕದ ಬಂಧಿತ ಉಗ್ರರು ಕೇರಳದ ಮೊಹಮದ್ ಅಮೀನ್ ಜೊತೆಗೆ ನಂಟು ಹೊಂದಿದ್ದರು ಎಂದು ಆರೋಪಿಸಲಾಗಿದೆ. ಐಸಿಎಸ್ ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿದ್ದ ಮೊಹಮದ್ ಅಮೀನ್, ಉಗ್ರಗಾಮಿ ಚಟುವಟಿಕೆಗಳಿಗೆ ಹಣಕಾಸು ಒದಗಿಸುತ್ತಿದ್ದ. ಬಂಧಿತರು ಸಹ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿ ಹಣ ಸಂಗ್ರಹಿಸುತ್ತಿದ್ದರು ಎಂದು ದೂರಲಾಗಿದೆ.

ಜಿಹಾದಿ ಸಂಘಟನೆಗೆ ಹಣ ಹೊಂದಿಸಲು ಉಗ್ರಗಾಮಿಗಳು ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಿದ್ದರು ಎಂದು ಆರೋಪಿಸಲಾಗಿದೆ. ಉಗ್ರರ ಬಂಧನದ ವೇಳೆ ರಾಷ್ಟ್ರೀಯ ತನಿಖಾ ದಳವು ಲ್ಯಾಪ್‌ಟಾಪ್, ಹಾರ್ಡ್​ಡಿಸ್ಕ್, ಪೆನ್ ಡ್ರೈವ್, ಸಿಮ್ ಕಾರ್ಡ್​ಗಳು ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳು ಜಪ್ತಿ ಮಾಡಿದೆ.

(NIA Arrests two ISIS Terrorist Suspects in Karnataka)

ಇದನ್ನೂ ಓದಿ: ಐಇಡಿ, ಪಿಸ್ತೂಲ್ ಸಮೇತ ದೆಹಲಿಯಲ್ಲಿ ಐಸಿಸ್ ಉಗ್ರನ ಬಂಧನ

ಇದನ್ನೂ ಓದಿ: ಬೆಂಗಳೂರಿನಲ್ಲಿ ಸಿನಿಮೀಯ ರೀತಿ ಶಂಕಿತ ಐಸಿಸ್​​​ ಉಗ್ರ ಅರೆಸ್ಟ್

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್