AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಖಲಿಫೇಟ್, ದೇಶಾದ್ಯಂತ ಪ್ರತಿ ಜಿಲ್ಲೆಯಲ್ಲಿ 50 ಸ್ಲೀಪರ್ ಸೆಲ್: ಬಳ್ಳಾರಿ ಉಗ್ರರ ಬಗ್ಗೆ ಎನ್​ಐಎ ಸ್ಫೋಟಕ ಮಾಹಿತಿ

ಕಳೆದ ವರ್ಷ ಡಿಸೆಂಬರ್​​ನಲ್ಲಿ ಬಳ್ಳಾರಿಯಲ್ಲಿ ಬಂಧನಕ್ಕೊಳಗಾಗಿರುವ ಐಸಿಸ್ ಉಗ್ರರ ಬಗ್ಗೆ ಇದೀಗ ಎನ್​ಐಎ ಸ್ಫೋಟಕ ಮಾಹಿತಿ ನೀಡಿದೆ. ಬಂಧಿತ ಉಗ್ರರ ವಿರುದ್ಧ ಚಾರ್ಜ್​ಶೀಟ್​​ ಸಲ್ಲಿಸಿರುವ ಎನ್​ಐಎ ಅದರಲ್ಲಿ ಉಲ್ಲೇಖಿಸಿರುವ ಅಂಶಗಳು ಬೆಚ್ಚಿಬೀಳಿಸುವಂತಿವೆ. ಹಾಗಾದರೆ ಎನ್​ಐಎ ಚಾರ್ಜ್​ಶೀಟ್​ನಲ್ಲಿ ಏನೇನಿದೆ? ಇಲ್ಲಿದೆ ವಿವರ.

ಭಾರತದಲ್ಲಿ ಖಲಿಫೇಟ್, ದೇಶಾದ್ಯಂತ ಪ್ರತಿ ಜಿಲ್ಲೆಯಲ್ಲಿ 50 ಸ್ಲೀಪರ್ ಸೆಲ್: ಬಳ್ಳಾರಿ ಉಗ್ರರ ಬಗ್ಗೆ ಎನ್​ಐಎ ಸ್ಫೋಟಕ ಮಾಹಿತಿ
ಬಳ್ಳಾರಿ ಉಗ್ರರ ಬಗ್ಗೆ ಎನ್​ಐಎ ಸ್ಫೋಟಕ ಮಾಹಿತಿ
ಗಣಪತಿ ಶರ್ಮಾ
|

Updated on: Jun 14, 2024 | 7:02 AM

Share

ನವದೆಹಲಿ, ಜೂನ್ 14: ದೇಶದಲ್ಲಿ ಖಲಿಫೇಟ್ (ಇಸ್ಲಾಂ ಆಡಳಿತ) ಜಾರಿಗೊಳಿಸುವಂತೆ ಮಾಡುವುದು ಮತ್ತು ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಲು ದೇಶದಾದ್ಯಂತ ಪ್ರತಿ ಜಿಲ್ಲೆಯಲ್ಲಿಯೂ ಕನಿಷ್ಠ 50 ಸ್ಲಿಪರ್‌ಸೆಲ್ ಸ್ಥಾಪನೆ ಮಾಡುವುದು ಕರ್ನಾಟಕದ (Karnataka) ಬಳ್ಳಾರಿ (Ballari) ಉಗ್ರರ (Terrorists) ಸಂಚಾಗಿತ್ತು ಎಂಬ ಸ್ಫೋಟಕ ಮಾಹಿತಿ ಇದೀಗ ತಿಳಿದುಬಂದಿದೆ. ಆರೋಪಿಗಳು ಈಗಾಗಲೇ ಬಳ್ಳಾರಿಯಲ್ಲಿ ಪ್ರಾಯೋಗಿಕ ಸ್ಫೋಟ ನಡೆಸಿದ್ದರು ಮತ್ತು ಜಿಹಾದ್ ಸಂಬಂಧಿತ ಡಿಜಿಟಲ್ ದಾಖಲೆಗಳು ಮತ್ತು ಡೇಟಾವನ್ನು ಇತರ ಯುವಕರೊಂದಿಗೆ ಹಂಚಿಕೊಳ್ಳುತ್ತಿದ್ದರು ಎಂದು ರಾಷ್ಟ್ರೀಯ ತನಿಖಾ ದಳ (NIA) ಸಲ್ಲಿಸಿರುವ ಚಾರ್ಜ್​ಶೀಟ್​ನಿಂದ ತಿಳಿದುಬಂದಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ಐಸಿಸ್‌ ಚಟುವಟಿಕೆಗಳನ್ನು ಬಯಲಿಗೆಳೆದಿದ್ದ ಎನ್​ಐಎ, ಆ ಸಂಬಂಧ ಬಂಧಿಸಲ್ಪಟ್ಟ ಕರ್ನಾಟಕ ನಾಲ್ವರು ಸೇರಿದಂತೆ 7 ಮಂದಿ ಉಗ್ರರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಿದೆ.

2025ರ ವೇಳೆಗೆ ಭಾರತದ ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 50 ಸ್ಲಿಪರ್‌ಸೆಲ್​ಗಳನ್ನು ಸ್ಥಾಪಿಸುವುದು ಮತ್ತು ಇವುಗಳ ಸದಸ್ಯರನ್ನು ಬಳಸಿಕೊಂಡು ಸೇನೆ, ಪೊಲೀಸರು ಮತ್ತು ನಿರ್ದಿಷ್ಟ ಸಮುದಾಯದ ಧಾರ್ಮಿಕ ನಾಯಕರ ಮೇಲೆ ದಾಳಿ ನಡೆಸುವ ಸಂಚನ್ನು ಉಗ್ರರು ಹೂಡಿದ್ದರು ಎಂದು ಎನ್​ಐಎ ಉಲ್ಲೇಖಿಸಿದೆ.

ಬಳ್ಳಾರಿಯಲ್ಲಿ ಸಂಚು ಬಯಲಿಗೆಳೆದಿದ್ದ ಎನ್​ಐಎ

ಕಳೆದವರ್ಷ ಡಿಸೆಂಬರ್​​ನಲ್ಲಿ ಬಳ್ಳಾರಿಯಲ್ಲಿ ಉಗ್ರರ ಸಂಚನ್ನು ಎನ್​ಐಎ ಬಯಲಿಗೆಳೆದಿತ್ತು. ಕೃತ್ಯಕ್ಕೆ ಸಂಬಂಧಿಸಿ ರಾಜ್ಯದ ನಾಲ್ವರು ಸೇರಿದಂತೆ 7 ಜನರನ್ನು ಬಂಧಿಸಲಾಗಿತ್ತು. ಬಳ್ಳಾರಿಯಲ್ಲಿ ರಾಜ್ಯದ ಮೊಹಮ್ಮದ್ ಸುಲೈಮಾನ್ ಮಿನಾಜ್, ಮೊಹಮ್ಮದ್ ಮುನಿರುದ್ದೀನ್, ಸಯ್ಯದ್ ಸಮೀರ್, ಮೊಹಮ್ಮದ್ ಮುಜಮ್ಮಿಲ್​​ನನ್ನು ಬಂಧಿಸಲಾಗಿತ್ತು. ಜೊತೆಗೆ ಮಹಾರಾಷ್ಟ್ರದ ಇನ್ಸಾಲ್‌ ಷೇಕ್, ಜಾರ್ಖಂಡ್‌ನ ಮೊಹಮ್ಮದ್ ಶಹಬಾಜ್ ಮತ್ತು ದೆಹಲಿಯ ಶಯಾನ್ ರೆಹಮಾನ್ ಬಂಧಿಸಲಾಗಿತ್ತು. ಇದೀಗ ಈ ಉಗ್ರರ ವಿರುದ್ಧ ಎನ್‌ಐಎ ಆರೋಪಪಟ್ಟಿ ದಾಖಲಿಸಿದೆ.

ಇದನ್ನೂ ಓದಿ: ಪೊಲೀಸರ ಹೆಸರಿನಲ್ಲಿ ವಿದ್ಯಾರ್ಥಿಗಳ ಪೋಷಕರಿಗೆ ಪಾಕಿಸ್ತಾನದಿಂದ ಬರುತ್ತಿದೆ ಬೆದರಿಕೆ ಕರೆ!

ತನಿಖೆಯ ಸಮಯದಲ್ಲಿ ಸ್ಫೋಟಕ ಸಾಮಗ್ರಿಗಳು, ಹರಿತವಾದ ಶಸ್ತ್ರಾಸ್ತ್ರಗಳು, ಜಿಹಾದ್, ಖಿಲಾಫತ್, ಐಸಿಸ್ ಸೇರಿದಂತೆ ವಿವಿಧ ಭಯೋತ್ಪಾದಕ ಸಂಘಟನೆಗಳು ಪ್ರಕಟಿಸಿದ ಫಿದಾಯೀನ್ ದಾಳಿಗಳಿಗೆ ಸಂಬಂಧಿಸಿದ ಪ್ರಚಾರ ನಿಯತಕಾಲಿಕೆಗಳನ್ನು ಒಳಗೊಂಡ ಡಿಜಿಟಲ್ ಸಾಧನಗಳು ಮತ್ತು ಇಸ್ಲಾಮಿಕ್ ಸ್ಥಾಪನೆಗಾಗಿ ಐಸಿಸ್ ಮಾರ್ಗಸೂಚಿಯನ್ನು ಬಹಿರಂಗಪಡಿಸುವ ಸಂದೇಶಗಳ ದಾಖಲೆಗಳು ಹಾಗೂ ದತ್ತಾಂಶಗಳನ್ನು ಎನ್‌ಐಎ ವಶಪಡಿಸಿಕೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ