AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಎಂಬಿ ಭಯೋತ್ಪಾದಕರ ವಿರುದ್ಧ ಬೆಂಗಳೂರಲ್ಲಿ ಎನ್​ಐಎ ಚಾರ್ಜ್​ಶೀಟ್!

2018ರಲ್ಲಿ ಜೆಎಂಬಿ ಸಂಘಟನೆಯ ಉಗ್ರರ ಅಗತ್ಯಗಳನ್ನು ಪೂರೈಸಲು (ಮಾಲ್ ಎ ಗಣಿಮಾತ್) ಹಣ ಸಂಗ್ರಹಕ್ಕೆ ಯತ್ನಿಸಿದ್ದರು. ವಿಧ್ವಂಸಕ ಕೃತ್ಯವೆಸಗಲು ಶಸ್ತ್ರಾಸ್ತ್ರ, ಸ್ಫೋಟಕಗಳ ವಸ್ತುಗಳ ಸಂಗ್ರಹಕ್ಕೆ ಮುಂದಾಗಿದ್ದರು.

ಜೆಎಂಬಿ ಭಯೋತ್ಪಾದಕರ ವಿರುದ್ಧ ಬೆಂಗಳೂರಲ್ಲಿ ಎನ್​ಐಎ ಚಾರ್ಜ್​ಶೀಟ್!
ಸಾಂಕೇತಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Feb 17, 2021 | 9:54 PM

Share

ಬೆಂಗಳೂರು: ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ್​ ಉಗ್ರ ಸಂಘಟನೆಯ 11 ಸದಸ್ಯರ ವಿರುದ್ಧ ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದೆ. ನಜೀರ್​ ಶೇಖ್​, ಆರಿಫ್ ಹುಸೇನ್, ಆಸಿಫ್ ಇಕ್ಬಾಲ್, ಜಹೀದುಲ್ಲ ಇಸ್ಲಾಂ, ಮುಸ್ತಫಾ ಇಸ್ಸೂರ್​ ರೆಹಮಾನ್, ಆದಿಲ್ ಶೇಕ್, ಅಬ್ದುಲ್ ಕರೀಂ, ಮುಸ್ತಾಫಾ ಹುಸೇನ್ ಸೇರಿ 11 ಆರೋಪಿಗಳ ವಿರುದ್ಧ NIA ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ ಆಗಿದೆ.

2018ರಲ್ಲಿ ಜೆಎಂಬಿ ಸಂಘಟನೆಯ ಉಗ್ರರ ಅಗತ್ಯಗಳನ್ನು ಪೂರೈಸಲು (ಮಾಲ್ ಎ ಗನಿಮತ್) ಹಣ ಸಂಗ್ರಹಕ್ಕೆ ಯತ್ನಿಸಿದ್ದರು. ವಿಧ್ವಂಸಕ ಕೃತ್ಯವೆಸಗಲು ಶಸ್ತ್ರಾಸ್ತ್ರ, ಸ್ಫೋಟಕಗಳ ವಸ್ತುಗಳ ಸಂಗ್ರಹಕ್ಕೆ ಮುಂದಾಗಿದ್ದರು. ಈ ಬಗ್ಗೆ ಕೆ.ಆರ್​.ಪುರಂ, ಅತ್ತಿಬೆಲೆ ಠಾಣೆಯಲ್ಲಿ FIR ದಾಖಲಾಗಿತ್ತು. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಎನ್​ಐಎ ಶೋಧ ಕಾರ್ಯ ನಡೆಸುತ್ತಿದೆ.

2014-18ರ ಅವಧಿಯಲ್ಲಿ ಜೆಎಂಬಿ ಬೆಂಗಳೂರಿನಲ್ಲಿ 20-22 ಅಡಗುತಾಣಗಳನ್ನು ಸ್ಥಾಪನೆ ಮಾಡಿತ್ತು. ಈ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ಕಾರ್ಯವನ್ನು ವಿಸ್ತರಣೆ ಮಾಡಿಕೊಳ್ಳುವುದು ಈ ಸಂಘಟನೆಯ ಉದ್ದೇಶವಾಗಿತ್ತು. ಇದನ್ನು  ರಾಷ್ಟ್ರೀಯ ತನಿಖಾ ಸಂಸ್ಥೆ ತಡೆಯುತ್ತಲೇ ಬರುತ್ತಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ‘ಉಗ್ರ’ ಪರ ಗೋಡೆ ಬರಹ ಪ್ರಕರಣ: ತನಿಖೆಗೆ ಎನ್​ಐಎ ತಂಡ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​