AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸೇರಿ 9 ಕಡೆ NIA ದಾಳಿ: ಮೊಬೈಲ್​, ಬ್ಯಾಟರಿ ಹಾಗೂ ದಾಖಲೆಗಳು ವಶಕ್ಕೆ

ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ. 2023ರಲ್ಲಿ ಬಂಧನವಾದ ಬಾಂಗ್ಲಾದೇಶದ ನಾಲ್ವರು ಪ್ರಜೆಗಳು ನೀಡಿದ ಮಾಹಿತಿ ಆಧಾರಿಸಿ ಈ ದಾಳಿ ಮಾಡಲಾಗಿದೆ ಎಂದು ಎನ್​ಐಎ ತಿಳಿಸಿದೆ. ಉಗ್ರ ಸಂಘಟನೆ ಅಲ್​ಖೈದಾ ಜೊತೆ ನಂಟು ಹೊಂದಿದವರ ವಿರುದ್ಧ ಈ ದಾಳಿ ನಡೆದಿದೆ.

ಕರ್ನಾಟಕ ಸೇರಿ 9 ಕಡೆ NIA ದಾಳಿ: ಮೊಬೈಲ್​, ಬ್ಯಾಟರಿ ಹಾಗೂ ದಾಖಲೆಗಳು ವಶಕ್ಕೆ
ಎನ್​ಐಎ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Nov 12, 2024 | 6:27 PM

Share

ಬೆಂಗಳೂರು, ನವೆಂಬರ್​ 12: ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಸೋಮವಾರ (ನ.11) ಕರ್ನಾಟಕ (Karnataka) ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿ, ಶೋಧ ಕಾರ್ಯಾಚರಣೆ ನಡೆಸಿದರು. ಭಾರತವನ್ನು ಅಸ್ಥಿರಗೊಳಿಸುವ ಅಲ್​ಖೈದಾ ಉಗ್ರ ಸಂಘಟನೆಯ ಸಂಚಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ. ಜೊತೆಗೆ ಅಲ್ ಖೈದಾ ಉಗ್ರ ಸಂಘಟನೆ ಕುರಿತು ಪ್ರಚಾರ, ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ವ್ಯಕ್ತಿಗಳ ವಿರುದ್ದ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಆಸ್ಸಾಂನ 9 ಕಡೆ ದಾಳಿ ಮಾಡಲಾಗಿದೆ.

ಎನ್​ಐಎ ಅಧಿಕಾರಿಗಳು ಕಾರ್ಯಾಚಾರಣೆ ವೇಳೆ ಬ್ಯಾಂಕಿಂಗ್ ವಹಿವಾಟುಗಳು, ಮೊಬೈಲ್ ಫೋನ್, ಡಿಜಿಟಲ್ ಸಾಧನಗಳು ಮತ್ತು ಭಯೋತ್ಪಾದಕ ನಿಧಿ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡರು.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಉಗ್ರರಿಗೆ ಐಸಿಸ್​ ನಂಟು: ಮೆಜೆಸ್ಟಿಕ್, ಯಶವಂತಪುರದಲ್ಲಿ ಬಸ್​ ಸ್ಫೋಟಗೊಳಿಸುವಂತೆ ಟಾಸ್ಕ್

2023ರ ನವೆಂಬರ್‌ನಲ್ಲಿ, ಮೊಹಮ್ಮದ್ ಎಂದು ಗುರುತಿಸಲಾದ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಐವರು ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಸಿತ್ತು. ಸೋಜಿಬ್ಮಿಯಾನ್, ಮುನ್ನಾ ಖಾಲಿದ್ ಅನ್ಸಾರಿ ಅಲಿಯಾಸ್​ ಮುನ್ನಾ ಖಾನ್, ಅಜರುಲ್ ಇಸ್ಲಾಂ ಅಲಿಯಾಸ್​ ಜಹಾಂಗೀರ್ ಅಥವಾ ಆಕಾಶ್ ಖಾನ್, ಅಬ್ದುಲ್ ಲತೀಫ್ ಅಲಿಯಾಸ್​ ಮೊಮಿನುಲ್ ಅನ್ಸಾರಿ ಮತ್ತು ಐದನೇ ಆರೋಪಿ ಫರೀದ್ ಭಾರತೀಯ ಪ್ರಜೆಯಾನ್ನು ಬಂಧಿಸಲಾಗಿತ್ತು ಎಂದು ಎನ್​ಐಎ ತಿಳಿಸಿದೆ.

ಟ್ವಿಟರ್​ ಪೋಸ್ಟ್​

ಐವರು ಆರೋಪಿಗಳು ತಮ್ಮ ಚಟುವಟಿಕೆಗಳನ್ನು ಗೌಪ್ಯವಾಗಿ ನಡೆಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದರು ಎಂಬುದು ಅವರ ಪೂರ್ವಾಪರದ ಬಗ್ಗೆ ಎನ್‌ಐಎ ತನಿಖೆ ನಡೆಸಿದಾಗ ತಿಳಿದು ಬಂದಿತ್ತು. ಭಾರತದಲ್ಲಿನ ಮುಸ್ಲಿಂ ಯುವಕರನ್ನು ಪ್ರೇರೇಪಿಸುವಲ್ಲಿ ಇವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅಲ್-ಖೈದಾದ ಹಿಂಸಾತ್ಮಕ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದ್ದರು. ಹಣ ಸಂಗ್ರಹಿಸಿ ಅದನ್ನು ಅಲ್-ಖೈದಾಕ್ಕೆ ಕಳುಹಿಸುತ್ತಿದ್ದರು ಎನ್​ಐಎ ಮಾಹಿತಿ ನೀಡಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:57 am, Tue, 12 November 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!