AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ 41 ಕಡೆ NIA ದಾಳಿ, ಬೆಂಗಳೂರಿನಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆ

ಇತ್ತೀಚೆಗಷ್ಟೇ ಕರ್ನಾಟಕದ ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ 44 ಕಡೆಗಳಲ್ಲಿ ಎನ್​ಐಎ ದಾಳಿ ನಡೆಸಿತ್ತು. ಅಂದು ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬಂಧಿಸಲಾಗಿತ್ತು. ಇಂದು ಮತ್ತೆ ದೇಶಾದ್ಯಂತ 41 ಕಡೆಗಳಲ್ಲಿ ಎನ್​ಐಎ ದಾಳಿ ನಡೆದಿದ್ದು, ಬೆಂಗಳೂರಿನಲ್ಲಿ ಶಮೀವುಲ್ಲಾ ಎಂಬಾತನ ಮನೆಯಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ ಏಳು ಕೆಜಿ ಸೋಡಿಯಂ‌ ನೈಟ್ರೇಟ್ ಪತ್ತೆಯಾಗಿದೆ.

ದೇಶದ 41 ಕಡೆ NIA ದಾಳಿ, ಬೆಂಗಳೂರಿನಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆ
NIA ದಾಳಿ ವೇಳೆ ಬೆಂಗಳೂರಿನಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆ
Shivaprasad B
| Edited By: |

Updated on: Dec 18, 2023 | 12:51 PM

Share

ಬೆಂಗಳೂರು, ಡಿ.18: ಇತ್ತೀಚೆಗಷ್ಟೇ ಕರ್ನಾಟಕದ ಬೆಂಗಳೂರು (Bengaluru) ಸೇರಿದಂತೆ ಮಹಾರಾಷ್ಟ್ರದ 44 ಕಡೆಗಳಲ್ಲಿ ಎನ್​ಐಎ ದಾಳಿ (NIA Raid) ನಡೆಸಿತ್ತು. ಅಂದು ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬಂಧಿಸಲಾಗಿತ್ತು. ಇಂದು ಮತ್ತೆ ದೇಶಾದ್ಯಂತ 41 ಕಡೆಗಳಲ್ಲಿ ಎನ್​ಐಎ ದಾಳಿ ನಡೆದಿದ್ದು, ಬೆಂಗಳೂರಿನಲ್ಲಿ ಶಮೀವುಲ್ಲಾ ಎಂಬಾತನ ಮನೆಯಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ ಏಳು ಕೆಜಿ ಸೋಡಿಯಂ‌ ನೈಟ್ರೇಟ್ ಪತ್ತೆಯಾಗಿದೆ.

ನಗರದ ಶಿವಾಜಿನಗರ, ಪುಲಿಕೇಶಿನಗರ, ಸುಲ್ತಾನ್ ಪಾಳ್ಯ, ಆರ್​.ಟಿ.ನಗರ, ಜೆ.ಸಿ.ನಗರದ ಚಿನ್ನಪ್ಪ ಗಾರ್ಡನ್ ಸೇರಿದಂತೆ ನಗರದ 20ಕ್ಕೂ ಹೆಚ್ಚು ಕಡೆಗಳಲ್ಲಿ ಹಾಗೂ ಬಳ್ಳಾರಿಯಲ್ಲಿ ಒಂಬತ್ತು ಕಡೆಗಳಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಂತೆ, ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಶಮಿವುಲ್ಲಾ ವಾಸವಿದ್ದ ಬಾಡಿಗೆ ಮನೆ ಮೇಲೆ ದಾಳಿ ನಡೆಸಿದಾಗ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆಯಾಗಿದೆ.

ಇದನ್ನೂ ಓದಿ: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಐವರು ಸೇರಿ 24 ವಾಂಟೆಡ್ ಆರೋಪಿಗಳ ಹೆಸರು ಪ್ರಕಟಿಸಿದ ಎನ್​ಐಎ

ಹಲವರನ್ನು ವಶಕ್ಕೆ ಪಡೆದ ಎನ್​ಐಎ

ದಾಳಿ ವೇಳೆ ಶಮಿವುಲ್ಲಾ, ಸೂಫಿಯಾನ್ ಆಗಿ ಮತಾಂತರಗೊಂಡಿದ್ದ ನಿಖಿಲ್, ನಿಷೇಧಿತ ಪಿಎಫ್​ಐ ಬಳ್ಳಾರಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸುಲೇಮಾನ್, ಅಜಾಜ್ ಅಹ್ಮದ್, ತಬ್ರೇಜ್, ಮುಜಾಮಿಲ್ ಎಂಬುವರನ್ನು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ನಿಂದಿಸಿದ ಶ್ರೀನಿವಾಸ್​​ಗೆ ಪ್ರತ್ಯುತ್ತರ ಕೊಟ್ಟ ನಿರ್ದೇಶಕ ಎಪಿ ಅರ್ಜುನ್
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಎಲೆಕ್ಟ್ರಾನಿಕ್ಸ್ ಘಟಕ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ಅನುದಾನ
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಯುವತಿ ತಲೆ ಮೇಲೆ ಹರಿದ BMTC ಎಲೆಕ್ಟ್ರಿಕ್ ಬಸ್
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ಮಲೇಷ್ಯಾಗೆ ತೆರಳಿದ ಪ್ರಧಾನಿ ಮೋದಿಗೆ ಅಪ್ಪುಗೆಯ ಸ್ವಾಗತ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್