AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು, ಕೋಲಾರದಲ್ಲಿ NIA ದಾಳಿ: ಒಟ್ಟು ಮೂವರು ಶಂಕಿತ ಉಗ್ರರ ಬಂಧನ..!

ಬೆಂಗಳೂರು, ಕೋಲಾರದಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್​ಐಎ) ಒಟ್ಟು 5 ಕಡೆ ದಾಳಿ ನಡೆಸಿದ್ದು, ಈ ವೇಳೆ ಮೂವರು ಶಂಕಿತ ಉಗ್ರರನ್ನು ಬಂಧಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ ಸೇರಿದಂತೆ ಮೂವರನ್ನು ಉಗ್ರರ ಚಟುವಟಿಕೆಗೆ ನೆರವು ನೀಡುತ್ತಿದ್ದ ಆರೋಪದಡಿ ಬಂಧಿಸಲಾಗಿದೆ.

ಬೆಂಗಳೂರು, ಕೋಲಾರದಲ್ಲಿ NIA ದಾಳಿ:  ಒಟ್ಟು ಮೂವರು ಶಂಕಿತ ಉಗ್ರರ ಬಂಧನ..!
NIA
ಶಿವಪ್ರಸಾದ್​ ಬಿ.
| Edited By: |

Updated on:Jul 09, 2025 | 10:34 AM

Share

ಬೆಂಗಳೂರು, (ಜುಲೈ 08): ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಬೆಂಗಳೂರು (Bengaluru), ಕೋಲಾರದಲ್ಲಿ (Kolar) ಒಟ್ಟು ಐದು ಕಡೆ ದಾಳಿ ಮಾಡಿದ್ದು, ಮೂವರು ಶಂಕಿತ ಉಗ್ರರನ್ನು (suspected terrorists) ಬಂಧಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ ಚಾಂದ್ ಪಾಷಾ ಅನೀಸ್ ಹಾಗೂ ಫಾತಿಮಾ ಎನ್ನುವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರರ ಚಟುವಟಿಕೆಗೆ ನೆರವು ನೀಡುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಲಾಗಿದ್ದು, ದಾಳಿ ವೇಳೆ ಎನ್​ಐಎ ಅಧಿಕಾರಿಗಳು 2 ವಾಕಿಟಾಕಿ, ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ಉಗ್ರರ ಚಟುವಟಿಕೆಗೆ ನೆರವು ನೀಡುತ್ತಿದ್ದ ಆರೋಪದಡಿ ಈ ಮೂವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಫಾತಿಮಾ ಉಗ್ರ ಕೃತ್ಯದಲ್ಲಿ ಶಾಮೀಲಾಗಿರುವ ಜುನೈದ್ ಅಹ್ಮದ್​ನ ತಾಯಿ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಕೈದಿಗಳನ್ನು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಗೆ ಸೇರುವಂತೆ ಟಿ.ನಾಸೀರ್ ಪ್ರಚೋದನೆ ನೀಡುತ್ತಿದ್ದ ಎಂದು ತಿಳಿದುಬಂದಿದೆ.

ಸತೀಶ್ ಗೌಡ ಎಂಬುವರಿಗೆ ನೋಟಿಸ್

ಕೋಲಾರ ತಾಲ್ಲೂಕು ಭಟ್ರಹಳ್ಳಿ ಗ್ರಾಮದ ಸತೀಶ್ ಗೌಡ ಎಂಬುವರಿಗೆ ಎನ್.ಐ.ಎ ನೋಟೀಸ್ ನೀಡಿದೆ. ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸತೀಶ್ ಗೌಡ ಮನೆಯಲ್ಲಿ ಲಭ್ಯವಿಲ್ಲದ ಕಾರಣ ಕುಟುಂಬಸ್ಥರಿಗೆ ಎನ್​ಐಎ ನೋಟೀಸ್ ನೀಡಿದ್ದು, 9-07-25 ರಂದು 10 ಗಂಟೆಗೆ ಬೆಂಗಳೂರು ಎನ್.ಐ.ಎ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

Published On - 9:39 pm, Tue, 8 July 25

Follow Us
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ