AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಕಳದಲ್ಲಿ ಎನ್​ಐಎ ದಾಳಿ: ಐಸಿಸ್ ನಂಟು ಶಂಕೆಯ ಮೇಲೆ ಮೂವರು ವಶಕ್ಕೆ

ಐಸಿಸ್ ಉಗ್ರರ ಜೊತೆಗೆ ನಂಟು ಹೊಂದಿದ್ದ ಶಂಕೆಯ ಮೇಲೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಭಟ್ಕಳದ ಉಮರ್ ಸ್ಟ್ರೀಟ್, ಸಾಗರ ರಸ್ತೆಯ ಮನೆ ಮೇಲೆ ದಾಳಿ ನಡೆಸಲಾಗಿದೆ.

ಭಟ್ಕಳದಲ್ಲಿ ಎನ್​ಐಎ ದಾಳಿ: ಐಸಿಸ್ ನಂಟು ಶಂಕೆಯ ಮೇಲೆ ಮೂವರು ವಶಕ್ಕೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Aug 06, 2021 | 3:49 PM

Share

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ರಾಷ್ಟ್ರೀಯ ತನಿಖಾ ದಳ (National Investigation Agency – NIA) ಶುಕ್ರವಾರ ದಾಳಿ ನಡೆಸಿ, ಐಸಿಸ್ ಉಗ್ರರ ಜೊತೆಗೆ ನಂಟು ಹೊಂದಿದ್ದ ಶಂಕೆಯ ಮೇಲೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಭಟ್ಕಳದ ಉಮರ್ ಸ್ಟ್ರೀಟ್, ಸಾಗರ ರಸ್ತೆಯ ಮನೆ ಮೇಲೆ ದಾಳಿ ನಡೆಸಲಾಗಿದೆ.

ವಿವಿಧೆಡೆ ಕಾರ್ಯಾಚರಣೆ ದೇಶದ ವಿವಿಧೆಡೆ ಇತ್ತೀಚೆಗೆ ಕಾರ್ಯಾಚರಣೆ ನಡೆಸಿದ ರಾಷ್ಟ್ರೀಯ ತನಿಖಾ ದಳದ ಭದ್ರತಾ ಸಿಬ್ಬಂದಿ ಹಲವು ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿಯೂ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಲಾಗಿದೆ. ಬೆಂಗಳೂರಿನ ಶಂಕರ್ ವೆಂಕಟೇಶ್ ಪೆರುಮಾಳ್, ಮಂಗಳೂರಿನ ಅಮರ್ ಅಬ್ದುಲ್ ರೆಹಮಾನ್ ಬಂಧಿತರು. ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತಿಬ್ಬರು ಶಂಕಿತ ಉಗ್ರರನ್ನು ಸೆರೆ ಹಿಡಿಯಲಾಗಿದೆ.

ಕರ್ನಾಟಕ ಸೇರಿದಂತೆ ದೇಶದ 5 ಕಡೆ ಎನ್‌ಐಎ ಬುಧವಾರ ದಾಳಿ ನಡೆಸಿತ್ತು. ಕರ್ನಾಟಕದ ಬಂಧಿತ ಉಗ್ರರು ಕೇರಳದ ಮೊಹಮದ್ ಅಮೀನ್ ಜೊತೆಗೆ ನಂಟು ಹೊಂದಿದ್ದರು ಎಂದು ಆರೋಪಿಸಲಾಗಿದೆ. ಐಸಿಎಸ್ ಉಗ್ರಗಾಮಿಗಳೊಂದಿಗೆ ಸಂಪರ್ಕದಲ್ಲಿದ್ದ ಮೊಹಮದ್ ಅಮೀನ್, ಉಗ್ರಗಾಮಿ ಚಟುವಟಿಕೆಗಳಿಗೆ ಹಣಕಾಸು ಒದಗಿಸುತ್ತಿದ್ದ. ಬಂಧಿತರು ಸಹ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿ ಹಣ ಸಂಗ್ರಹಿಸುತ್ತಿದ್ದರು ಎಂದು ದೂರಲಾಗಿದೆ.

(NIA takes three people into custody to investigate on alleged ISIS relations)

ಇದನ್ನೂ ಓದಿ: ಕರ್ನಾಟಕದಲ್ಲಿ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ: ಎನ್​ಐಎ ಕಾರ್ಯಾಚರಣೆ

Published On - 3:36 pm, Fri, 6 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ