AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಮಾರ್ಗಸೂಚಿ: ಇಂದಿನಿಂದ ನೈಟ್​ ಕರ್ಫ್ಯೂ ಜಾರಿ: ಸಮಯದಲ್ಲೂ ಬದಲಾವಣೆ

ಕರ್ಫ್ಯೂ ಜಾರಿ ಸಮಯದಲ್ಲೂ ರಾಜ್ಯ ಸರ್ಕಾರ ಬದಲಾವಣೆ ಮಾಡಿದೆ. ಈ ಮೊದಲು ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಹೇಳಲಾಗಿತ್ತು. ಆದರೆ, ಸರ್ಕಾರ ಈಗ ಸಮಯ ಬದಲಿಸಿದೆ.  ರಾತ್ರಿ‌ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಮಾತ್ರ  ನೈಟ್​ ಕರ್ಫ್ಯೂ ಜಾರಿಯಲ್ಲಿರಲಿದೆ. 

ಸರ್ಕಾರದ ಮಾರ್ಗಸೂಚಿ: ಇಂದಿನಿಂದ ನೈಟ್​ ಕರ್ಫ್ಯೂ ಜಾರಿ: ಸಮಯದಲ್ಲೂ ಬದಲಾವಣೆ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Dec 24, 2020 | 9:04 AM

Share

ಬೆಂಗಳೂರು: ಕೊರೊನಾ ವೈರಸ್​ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ ಮಾಡುವುದಾಗಿ ಹೇಳಿತ್ತು. ಆದರೆ, ಈಗ ಸರ್ಕಾರ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸುವ ನಿರ್ಧಾರಕ್ಕೆ ಬಂದಿದೆ. ಸಂಜೆ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ಈ ವಿಚಾರ ಹೊರ ಬಿದ್ದಿದೆ.

ಕರ್ಫ್ಯೂ ಜಾರಿ ಸಮಯದಲ್ಲೂ ರಾಜ್ಯ ಸರ್ಕಾರ ಬದಲಾವಣೆ ಮಾಡಿದೆ. ಈ ಮೊದಲು ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಹೇಳಲಾಗಿತ್ತು. ಈಗ ಸಮಯ ಬದಲಾವಣೆ ಆಗಿದ್ದು,  ರಾತ್ರಿ‌ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಮಾತ್ರ  ನೈಟ್​ ಕರ್ಫ್ಯೂ ಜಾರಿಯಲ್ಲಿರಲಿದೆ.

ಡಿಸೆಂಬರ್​ 25ರಂದು ಕ್ರಿಸ್​ಮಸ್​ ಆಚರಣೆ ಮಾಡಲಾಗುತ್ತಿದೆ. ನೈಟ್​ ಕರ್ಫ್ಯೂನಿಂದ ಕ್ರಿಸ್​ಮಸ್​ ಆಚರಣೆಗೆ ತೊಂದರೆ ಆಗಲಿದೆ ಎನ್ನಲಾಗಿತ್ತು. ಆದರೆ, ಕ್ರಿಸ್​​ಮಸ್​ ವೇಳೆ ಧಾರ್ಮಿಕ ಕಾರ್ಯಕ್ರಮಕ್ಕೆ ಅಡಚಣೆ ಆಗುವುದಿಲ್ಲ ಎಂದು ಗೈಡ್​ಲೈನ್​ನಲ್ಲಿ ಹೇಳಲಾಗಿದೆ.

ಇಂದಿನಿಂದಲೇ ನೈಟ್​ ಕರ್ಫ್ಯೂ ಜಾರಿ ಆದರೆ ನಿಯಮಗಳು ಏನಿರಲಿದೆ ಎನ್ನುವ ಬಗ್ಗೆ ಜನರಲ್ಲಿ ಸಾಕಷ್ಟು ಗೊಂದಲ ಮೂಡಿತ್ತು. ಅಲ್ಲದೆ, ಕರ್ಫ್ಯೂ ಜಾರಿಗೆ ಸರ್ಕಾರ ಅಗತ್ಯ ಸಿದ್ಧತೆಗಳನ್ನು ಕೂಡ ಮಾಡಿಕೊಳ್ಳಬೇಕಿತ್ತು. ಹೀಗಾಗಿ, ನಾಳೆಯಿಂದ ನೈಟ್​ ಕರ್ಫ್ಯೂ ಜಾರಿ ಮಾಡಲು ತೀರ್ಮಾನ ಮಾಡಲಾಗಿದೆ.

ರಾತ್ರಿ ವೇಳೆ ಬಸ್​, ರೈಲು, ವಿಮಾನ ಸಂಚಾರಕ್ಕೆ ಅವಕಾಶ ಇದೆ. ಹೀಗಾಗಿ ಪ್ರಯಾಣಿಕರನ್ನು ಪಿಕಪ್, ಡ್ರಾಪ್​ ಮಾಡಲು  ಆಟೋ, ಟ್ಯಾಕ್ಸಿಗಳಿಗೆ ಅವಕಾಶ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸರಕು ಸಾಗಣೆಗೆ ಯಾವುದೇ ನಿರ್ಬಂಧವನ್ನು ಸರ್ಕಾರ ಹೇರಿಲ್ಲ.

ಇನ್ನು, 24 ಗಂಟೆ ಕೆಲಸ ನಿರ್ವಹಿಸಬೇಕಾದ ಕೈಗಾರಿಕೆಗಳಿಗೆ ನಿರ್ಬಂಧ ಇಲ್ಲ. ನೈಟ್​ ಶಿಫ್ಟ್​ನಲ್ಲಿ ಶೇ.50ರಷ್ಟು ಸಿಬ್ಬಂದಿ ಬಳಕೆಗೆ ಅವಕಾಶ ಇದೆ. ರಾತ್ರಿ ಕೆಲಸ ಮುಗಿಸಿ ಸಂಚಾರ ನಡೆಸುವ ಕಾರ್ಮಿಕರಿಗೆ ಕಂಪನಿ ಐಡಿ ಕಾರ್ಡ್ ಕಡ್ಡಾಯ ಎಂದು ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಪಾರ್ಟಿಗಳಿಗೆ ನಿಷೇಧ:

2021 ಹೊಸವರ್ಷಕ್ಕೆ ಸಾರ್ವಜನಿಕವಾಗಿ ಪಾರ್ಟಿ ಮಾಡುವುದರ ಮೇಲೆ ಸರ್ಕಾರ ನಿರ್ಬಂಧ ವಿಧಿಸಿದೆ. ಕ್ಲಬ್-ಪಬ್-ರೆಸ್ಟೋರೆಂಟ್ ತೆರೆಯಬಹುದು. ಆದರೆ, ಕ್ಲಬ್-ಪಬ್-ರೆಸ್ಟೋರೆಂಟ್‌ನಲ್ಲಿ ನ್ಯೂಇಯರ್ ಪಾರ್ಟಿಗೆ ನಿಷೇಧ ಇರಲಿದೆ. ದೈಹಿಕ ಅಂತರವಿಲ್ಲದೇ ಯಾರೂ ಒಂದೆಡೆ ಸೇರುವಂತಿಲ್ಲ.

KSRTC ಬಸ್​ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ: ಸಚಿವ ಕೆ.ಸುಧಾಕರ್​

Published On - 5:41 pm, Wed, 23 December 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?