AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿ ಸ್ನೇಹ ಪಕ್ಕಕ್ಕಿಟ್ಟು ಪ್ರಚಾರ ಕಾರ್ಯದಲ್ಲಿ ತೊಡೆ ತಟ್ಟಿದ ನಿಖಿಲ್​ ಕುಮಾರಸ್ವಾಮಿ

ಬೆಂಗಳೂರು: ಸಿನಿಮಾ ಸಂಬಂಧದ ಕಬಂದಬಾಹುವಿನಲ್ಲಿ ಸಿಲುಕಿ ನಟ ನಿಖಿಲ್ ಕುಮಾರಸ್ವಾಮಿ ರಾಜರಾಜೇಶ್ವರಿ ನಗರ ಅಸೆಂಬ್ಲಿ ಉಪಚುನಾವಣೆಯಲ್ಲಿ ಪ್ರಚಾರ ಕಾರ್ಯದಿಂದ ದೂರವುಳಿಯುತ್ತಾರೆ ಎಂಬ ರಾಜಕೀಯ ಪಂಡಿತರ ಲೆಕ್ಕಾಚಾರವನ್ನು ಪಕ್ಕಕ್ಕಿಟ್ಟು ಜೆಡಿಎಸ್ ಯುವ ನಾಯಕ, ಮಾಜಿ ಪ್ರಧಾನಿ ಎಚ್​ ಡಿ ದೇವೇಗೌಡರ ಕುಡಿ ನಿಖಿಲ್ ಕುಮಾರಸ್ವಾಮಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಇಂದು ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಚಿತ್ರ ನಿರ್ಮಾಪಕರು. ಅದರಲ್ಲೂ ನಿಖಿಲ್ ಕುಮಾರಸ್ವಾಮಿ ಚಿತ್ರಗಳನ್ನು ನಿರ್ಮಿಸಿಕೊಟ್ಟವರು. ಜೊತೆಗೆ ಭವಿಷ್ಯದಲ್ಲೂ ನಿಖಿಲ್ ಕುಮಾರಸ್ವಾಮಿ ಅವರನ್ನು […]

ಸಿನಿ ಸ್ನೇಹ ಪಕ್ಕಕ್ಕಿಟ್ಟು ಪ್ರಚಾರ ಕಾರ್ಯದಲ್ಲಿ ತೊಡೆ ತಟ್ಟಿದ ನಿಖಿಲ್​ ಕುಮಾರಸ್ವಾಮಿ
ಸಾಧು ಶ್ರೀನಾಥ್​
| Updated By: KUSHAL V|

Updated on: Oct 24, 2020 | 12:13 PM

Share

ಬೆಂಗಳೂರು: ಸಿನಿಮಾ ಸಂಬಂಧದ ಕಬಂದಬಾಹುವಿನಲ್ಲಿ ಸಿಲುಕಿ ನಟ ನಿಖಿಲ್ ಕುಮಾರಸ್ವಾಮಿ ರಾಜರಾಜೇಶ್ವರಿ ನಗರ ಅಸೆಂಬ್ಲಿ ಉಪಚುನಾವಣೆಯಲ್ಲಿ ಪ್ರಚಾರ ಕಾರ್ಯದಿಂದ ದೂರವುಳಿಯುತ್ತಾರೆ ಎಂಬ ರಾಜಕೀಯ ಪಂಡಿತರ ಲೆಕ್ಕಾಚಾರವನ್ನು ಪಕ್ಕಕ್ಕಿಟ್ಟು ಜೆಡಿಎಸ್ ಯುವ ನಾಯಕ, ಮಾಜಿ ಪ್ರಧಾನಿ ಎಚ್​ ಡಿ ದೇವೇಗೌಡರ ಕುಡಿ ನಿಖಿಲ್ ಕುಮಾರಸ್ವಾಮಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಇಂದು ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಚಿತ್ರ ನಿರ್ಮಾಪಕರು. ಅದರಲ್ಲೂ ನಿಖಿಲ್ ಕುಮಾರಸ್ವಾಮಿ ಚಿತ್ರಗಳನ್ನು ನಿರ್ಮಿಸಿಕೊಟ್ಟವರು. ಜೊತೆಗೆ ಭವಿಷ್ಯದಲ್ಲೂ ನಿಖಿಲ್ ಕುಮಾರಸ್ವಾಮಿ ಅವರನ್ನು ಹಾಕಿಕೊಂಡು ಒಂದೆರಡು ಸಿನಿಮಾ ನಿರ್ಮಿಸುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಸಿನಿ ಲೋಕದ ನಂಟು ಹೀಗಿರುವಾಗ ನಿಖಿಲ್, ಆರ್ ಆರ್ ನಗರದ ಕಡೆ ತಲೆಹಾಕುವುದಿಲ್ಲ ಎಂಬ ರಾಜಕೀಯ ಲೆಕ್ಕಾಚಾರವಿತ್ತು. ಆದ್ರೆ ಆರ್ ಆರ್ ನಗರದಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸುವುದಾಗಿ ನಿಖಿಲ್ ತಿಳಿಸಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಸತ್ಯನಾರಾಯಣ ಅವರ ಪರ ಚುನಾವಣಾ ಪ್ರಚಾರ ಆರಂಭಿಸುವುದಕ್ಕೂ ಮುನ್ನ.. ನಿಖಿಲ್ ಕುಮಾರಸ್ವಾಮಿ ಅವರು ಸ್ಫಟಿಕಪುರಿಯ ಶ್ರೀ ಕ್ಷೇತ್ರ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿಯ ದರ್ಶನ ಪಡೆದರು. ನಂತರ ಶ್ರೀ ಮಠದ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲೂ ನಿಖಿಲ್ ಕುಮಾರಸ್ವಾಮಿ ಪ್ರಚಾರದಿಂದ ದೂರ ಉಳಿಯುತ್ತಾರೆ ಎಂದು ಲೆಕ್ಕ ಹಾಕಲಾಗಿತ್ತು.

ಪ್ರಧಾನವಾಗಿ ಪ್ರಜ್ವಲ್​ ರೇವಣ್ಣ ಅವರು ಅದಾಗಲೇ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರಿಂದ ನಿಖಿಲ್ ತಾವೂ ಸಹ ಪ್ರಚಾರಕ್ಕೆ ಬರುವುದು ಬೇಡವೆಂದು ಲೆಕ್ಕ ಹಾಕಬಹುದು ಎಂದು ಭಾವಿಸಲಾಗಿತ್ತು. ಆದ್ರೆ ಅದನ್ನೆಲ್ಲ ಪಕ್ಕಕ್ಕಿಟ್ಟು ನಿಖಿಲ್ ಕುಮಾರಸ್ವಾಮಿ ಅಮ್ಮಾಜಮ್ಮ ಸತ್ಯನಾರಾಯಣ ಅವರ ಪರ ಚುನಾವಣಾ ಪ್ರಚಾರಕ್ಕೆ ಇಂದು ಧುಮುಕಿದರು.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ