ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ನಿಮ್ಹಾನ್ಸ್ ಪ್ರೊಫೆಸರ್ ಅರೆಸ್ಟ್!

ಬೆಂಗಳೂರು: ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ಮಾಡಿದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಗುಂಡು ಹಾರಿಸಿದ್ದ ವೃದ್ಧರೊಬ್ಬರನ್ನ ಬಂಧಿಸಿ, ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಫೈರಿಂಗ್ ಮಾಡಿದ್ದು ಶ್ಯಾಮಸುಂದರ್(83) ಎಂದು ತಿಳಿದುಬಂದಿದ್ದು, ಇವರು ನಿಮ್ಹಾನ್ಸ್​ನ ನಿವೃತ್ತ ಪ್ರೊಫೆಸರ್ ಆಗಿದ್ದಾರೆ. ಈ ಮಧ್ಯೆ, ಗಾಯಾಳು ನಾಯಿಗೆ ಜಯನಗರದ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿದೆ. ನಾಯಿಯ ಕಾಟಕ್ಕೆ ಬೇಸತ್ತು ಫೈರ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿರುವ ಆರೋಪಿ ನಿಮ್ಹಾನ್ಸ್ ಪ್ರೊಫೆಸರ್, ತಮ್ಮ ತೋಟದಲ್ಲಿ ಗಲೀಜು ಮಾಡಿದ್ದಕ್ಕೆ ಗುಂಡು ಹಾರಿಸಿದ್ದಾಗಿ ಹೇಳಿದ್ದಾರೆ. ಪ್ರವೀಣ್ ಎಂಬುವವರು […]

ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ನಿಮ್ಹಾನ್ಸ್ ಪ್ರೊಫೆಸರ್ ಅರೆಸ್ಟ್!
ಸಾಧು ಶ್ರೀನಾಥ್​

Updated on: Nov 11, 2019 | 3:24 PM

ಬೆಂಗಳೂರು: ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ಮಾಡಿದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಗುಂಡು ಹಾರಿಸಿದ್ದ ವೃದ್ಧರೊಬ್ಬರನ್ನ ಬಂಧಿಸಿ, ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಫೈರಿಂಗ್ ಮಾಡಿದ್ದು ಶ್ಯಾಮಸುಂದರ್(83) ಎಂದು ತಿಳಿದುಬಂದಿದ್ದು, ಇವರು ನಿಮ್ಹಾನ್ಸ್​ನ ನಿವೃತ್ತ ಪ್ರೊಫೆಸರ್ ಆಗಿದ್ದಾರೆ. ಈ ಮಧ್ಯೆ, ಗಾಯಾಳು ನಾಯಿಗೆ ಜಯನಗರದ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿದೆ.

ನಾಯಿಯ ಕಾಟಕ್ಕೆ ಬೇಸತ್ತು ಫೈರ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿರುವ ಆರೋಪಿ ನಿಮ್ಹಾನ್ಸ್ ಪ್ರೊಫೆಸರ್, ತಮ್ಮ ತೋಟದಲ್ಲಿ ಗಲೀಜು ಮಾಡಿದ್ದಕ್ಕೆ ಗುಂಡು ಹಾರಿಸಿದ್ದಾಗಿ ಹೇಳಿದ್ದಾರೆ. ಪ್ರವೀಣ್ ಎಂಬುವವರು ಘಟನೆಯ ಬಗ್ಗೆ ದೂರು ನೀಡಿದ್ದರು. ಈ ಬಗ್ಗೆ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಆರೋಪಿಯನ್ನ ಬಂಧಿಸಿ, ಬಳಿಕ ಬಿಡುಗಡೆ ಮಾಡಲಾಗಿದೆ.

Published On - 3:09 pm, Mon, 11 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us