ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ‘ನಿಮ್ಮ ಬಸ್‌ ಯಾತ್ರೆ’

ಬೆಂಗಳೂರು: ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ನಿಮ್ಮ ಬಸ್‌ ಯಾತ್ರೆ ಎಂಬ ವಿಶೇಷ ಅಭಿಯಾನವನ್ನ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಬಿಎಂಟಿಸಿ ಬಸ್‌ನಲ್ಲಿ ಸಂಚರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದು, ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಿಂದ ಬೆಳ್ಳಂದೂರುವರೆಗೆ ಬಸ್ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಅಭಿಯಾನದಲ್ಲಿ ಬಿಎಂಟಿಸಿ ಎಂಡಿ.ಸಿ.ಶಿಖಾ, ಬೆಂಗಳೂರು ಪೋಲಿಸ್ ಕಮಿಷನರ್ ಭಾಸ್ಕರ್ ರಾವ್, ಬಿಬಿಎಂಪಿ ವಿಶೇಷ ಆಯುಕ್ತ ರಣದೀಪ್, ನಟ ಚೇತನ್ ಭಾಗಿಯಾಗಿದ್ದಾರೆ. ಅಧಿಕಾರಿಗಳು ಸ್ವತಃ ಸಾರ್ವಜನಿಕ ಬಸ್ ನಲ್ಲಿ ಸಂಚಾರಿಸುವ ಮೂಲಕ ಬಸ್ ಲೈನ್ ಬಗ್ಗೆ ಜಾಗೃತಿ ಮೂಡಿಸಿದರು. ಟ್ರಾಫಿಕ್ ಸಮಸ್ಯೆ […]

ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ‘ನಿಮ್ಮ ಬಸ್‌ ಯಾತ್ರೆ’
ಸಾಧು ಶ್ರೀನಾಥ್​

Updated on: Dec 11, 2019 | 11:04 AM

ಬೆಂಗಳೂರು: ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ನಿಮ್ಮ ಬಸ್‌ ಯಾತ್ರೆ ಎಂಬ ವಿಶೇಷ ಅಭಿಯಾನವನ್ನ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಬಿಎಂಟಿಸಿ ಬಸ್‌ನಲ್ಲಿ ಸಂಚರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದು, ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಿಂದ ಬೆಳ್ಳಂದೂರುವರೆಗೆ ಬಸ್ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಅಭಿಯಾನದಲ್ಲಿ ಬಿಎಂಟಿಸಿ ಎಂಡಿ.ಸಿ.ಶಿಖಾ, ಬೆಂಗಳೂರು ಪೋಲಿಸ್ ಕಮಿಷನರ್ ಭಾಸ್ಕರ್ ರಾವ್, ಬಿಬಿಎಂಪಿ ವಿಶೇಷ ಆಯುಕ್ತ ರಣದೀಪ್, ನಟ ಚೇತನ್ ಭಾಗಿಯಾಗಿದ್ದಾರೆ. ಅಧಿಕಾರಿಗಳು ಸ್ವತಃ ಸಾರ್ವಜನಿಕ ಬಸ್ ನಲ್ಲಿ ಸಂಚಾರಿಸುವ ಮೂಲಕ ಬಸ್ ಲೈನ್ ಬಗ್ಗೆ ಜಾಗೃತಿ ಮೂಡಿಸಿದರು.

ಟ್ರಾಫಿಕ್ ಸಮಸ್ಯೆ ತಡೆಯುವ ದೃಷ್ಟಿಯಿಂದ ಬಸ್​ಗಾಗಿ ಪ್ರತ್ಯೇಕ ಬಿಎಂಟಿಸಿ ಲೈನ್ ಮಾಡಿದ್ದು, ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸಂಸ್ಥೆಗಳ ಜೊತೆ ಕೈಜೋಡಿಸಿ ಎಂದು ಹೇಳಿದ್ದಾರೆ. ಈಗಾಗಲೇ ಬಿಬಿಎಂಪಿ 15 ‌ಕೋಟಿ ವೆಚ್ಚದಲ್ಲಿ ಸಿಲ್ಕ್ ಬೋರ್ಡ್ ನಿಂದ ಕೆ.ಆರ್ ಪುರಂ ವರೆಗೆ ಪ್ರತ್ಯೇಕ ಬಸ್ ಮಾರ್ಗ ವ್ಯವಸ್ಥೆ ಮಾಡಿದೆ.

Published On - 11:03 am, Wed, 11 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us