ಬೆಂಗಳೂರಿನಲ್ಲಿ 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರಿಂದ ಗೂಂಡಾ ಕಾಯ್ದೆ ಜಾರಿಯಾಗಿದ್ದು 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಬೆಂಗಳೂರಿನಲ್ಲಿ 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ
ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ
ಆಯೇಷಾ ಬಾನು

Updated on: Apr 28, 2021 | 3:22 PM

ಬೆಂಗಳೂರು: ನಗರದಲ್ಲಿನ ರೌಡಿಗಳ ಅಟ್ಟಹಾಸಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಕಡಿವಾಣ ಹಾಕಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಒಂಭತ್ತು ಆರೋಪಿಗಳನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರಿಂದ ಗೂಂಡಾ ಕಾಯ್ದೆ ಜಾರಿಯಾಗಿದ್ದು 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಮುನಿಕೃಷ್ಣ @ ಮುನೀಚ್, ಸಾಗರ್ @ ಇಟ್ಟಮಡು ಸಾಗರ್, ರಾಜು @ ರಾಜುದೊರೈ, ವಾಸುದೇವ @ ವಾಸು, ಚೇತನ್ @ ಮಾದೇಶ್, ಕೋಟೇಶ್ವರನ್ @ ಕೋಟೆ, ಸ್ಯಾಮ್ಯುಲ್ @ ನಿಖಿಲ್ ಮಂಜುನಾಥ್ @ ಗನ್ ಮಂಜ, ಹರಿರಾಜ ಶೆಟ್ಟಿ @ ಹರೀಶ್ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿರುವ ಆರೋಪಿಗಳು.

ಇವರೆಲ್ಲಾ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ, ಸಾಲು ಸಾಲು ಅಪರಾಧ ಚಟುವಟಿಕೆಗಳಲ್ಲಿ ಭಾಗಿ, ಅಕ್ರಮ ಜೂಜು, ಗಾಂಜಾ ಮಾರಾಟ ಹಾಗೂ ವಿವಿಧ ಠಾಣೆಗಳಲ್ಲಿ ರೌಡಿಶೀಟರ್ಗಳಾಗಿರುವ ಆರೋಪಿಗಳು. ಇವರಿಗೆ ಹಲವು ಬಾರಿ ವಾರ್ನಿಂಗ್ ನೀಡಿದ್ದರೂ ಮತ್ತೆ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದರು. ಈ ಹಿನ್ನೆಲೆಯಲ್ಲಿ ಸಿಸಿಬಿ ಡಿಸಿಪಿ ಹಾಗೂ ಆಯಾ ವಿಭಾಗದ ಡಿಸಿಪಿಗಳ ವರದಿ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್ರಿಂದ ಗೂಂಡಾ ಕಾಯ್ದೆ ಜಾರಿ ಮಾಡಲಾಗಿದೆ.

ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ

ಇದನ್ನೂ ಓದಿ: ಕಾಮಾಕ್ಷಿಪಾಳ್ಯದಲ್ಲಿ ಮಹಿಳೆ ಅತ್ಯಾಚಾರ-ಕೊಲೆ: ಗೋವಾಕ್ಕೆ ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us