AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ನಿಫಾ ವೈರಸ್ ಪತ್ತೆ; ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಮುಂಜಾಗ್ರತೆ ವಹಿಸುವಂತೆ ಸೂಚನೆ

Nipah Virus: ಹಣ್ಣುಗಳನ್ನು ಚೆನ್ನಾಗಿ ತೊಳೆದು ಸೇವಿಸಿ. ಪ್ರಾಣಿ, ಪಕ್ಷಿಗಳು ಕಚ್ಚಿದ ಹಣ್ಣು ಸೇವಿಸಬೇಡಿ. ಜ್ವರ, ಕೆಮ್ಮು, ಉಸಿರಾಟದ ತೊಂದರೆ ಕಂಡು ಬಂದಲ್ಲಿ ತಪಾಸಣೆ ನಡೆಸಿ ಡಿಹೆಚ್ಒ ವೆಂಕಟೇಶ್ ಹೇಳಿದ್ದಾರೆ.

ಕೇರಳದಲ್ಲಿ ನಿಫಾ ವೈರಸ್ ಪತ್ತೆ; ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಮುಂಜಾಗ್ರತೆ ವಹಿಸುವಂತೆ ಸೂಚನೆ
ನಿಫಾ ವೈರಸ್​
TV9 Web
| Edited By: |

Updated on: Sep 07, 2021 | 3:05 PM

Share

ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ಅಧಿಕವಾಗಿದೆ. ಹೀಗಾಗಿ ಕೇರಳದಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ವಹಿಸಲಾಗುತ್ತಿದೆ. ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹ ನಡೆಯುತ್ತಿದೆ. ಬಳಿಕ ಬಿಬಿಎಂಪಿ, ಜಿಲ್ಲಾ ಕೇಂದ್ರದಕ್ಕೆ ಮಾಹಿತಿ ರವಾನೆ ಮಾಡಲಾಗುತ್ತಿದೆ. ಈ ಸಂಬಂಧ, ಬೆಂಗಳೂರು ಗ್ರಾಮಾಂತರ ಜಿಲ್ಲಾದಿಕಾರಿಯಿಂದ ಪರಿಶೀಲನೆ ನಡೆಸಲಾಗಿದೆ.

ಬೆಂಗಳೂರು ಗ್ರಾಮಾಂತರ ಡಿಸಿ ಶ್ರೀನಿವಾಸ್, ಎಸಿ ಅರುಣ್ ಕುಮಾರ್ ನೇತೃತ್ವದ ತಂಡ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಡುವಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಪ್ರತಿನಿತ್ಯ 500 ರಿಂದ 600 ಪ್ರಯಾಣಿಕರು ಕೇರಳದಿಂದ ಬರುತ್ತಿದ್ದು ಎಲ್ಲರ ಮೇಲೆಯೂ‌ ನಿಗಾ ವಹಿಸಲಾಗುತ್ತಿದೆ.

ನಿಫಾ ರೋಗ ಲಕ್ಷಣ ಪತ್ತೆಗಾಗಿ ಥರ್ಮಲ್ ಸ್ಕ್ಯಾನಿಂಗ್ ಕೇರಳದಲ್ಲಿ ಮತ್ತೆ ಪತ್ತೆ ಆಗಿರುವ ನಿಫಾ ಕುರಿತು ಗಡಿ ಜಿಲ್ಲೆಗಳಲ್ಲಿ ಅಧಿಕ ಎಚ್ಚರ ವಹಿಸಲಾಗುತ್ತಿದೆ. ರೋಗ ಲಕ್ಷಣ ಪತ್ತೆಗಾಗಿ ಥರ್ಮಲ್ ಸ್ಕಾನಿಂಗ್ ನಡೆಸಲಾಗುತ್ತಿದೆ. ಈ ಬಗ್ಗೆ, ತಲಪಾಡಿ ಗಡಿಭಾಗದಲ್ಲಿ ಎಸಿಪಿ ರಂಜಿತ್ ಬಂಡಾರು ಹೇಳಿಕೆ ನೀಡಿದ್ದಾರೆ. ಮಂಗಳೂರು ಹೊರವಲಯದ ತಲಪಾಡಿ ಗಡಿಯಲ್ಲಿ ಸದ್ಯ ಟೆಕ್ನಿಕಲ್ ಆಗಿ ಯಾವುದೇ ತಪಾಸಣೆ ಇಲ್ಲ. ಸದ್ಯ ಥರ್ಮಲ್ ಸ್ಯಾನಿಂಗ್ ಆರಂಭಿಸುತ್ತೇವೆ. ಹಾಗೂ ಉಳಿದ ತಾಂತ್ರಿಕ ವ್ಯವಸ್ಥೆಗಳನ್ನು ಆರೋಗ್ಯ ಇಲಾಖೆ ವ್ಯವಸ್ಥೆ ಮಾಡುತ್ತೆ. ನಿಫಾ ರೋಗ ಲಕ್ಷಣ ಇದ್ದವರನ್ನು ವಾಪಾಸ್ ಕಳಿಸುತ್ತೇವೆ. ಕೊವಿಡ್ ನೆಗೆಟಿವ್ ರಿಪೋರ್ಟ್ ಇದ್ದು ಟೆಂಪರೇಚರ್ ಜಾಸ್ತಿ ಬಂದ್ರು ವಾಪಾಸ್ ಕಳಿಸುತ್ತೇವೆ ಎಂದು ರಂಜಿತ್ ಮಾಹಿತಿ ನೀಡಿದ್ದಾರೆ.

ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಕೂಡ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ, ಟಿವಿ9ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಹೇಳಿಕೆ ನೀಡಿದ್ದಾರೆ. ಸದ್ಯ ಕೊಡಗು ಜಿಲ್ಲೆಯಲ್ಲಿ ನಿಫಾ ವೈರಸ್ ಪತ್ತೆಯಾಗಿಲ್ಲ. ಹೀಗಾಗಿ ಜಿಲ್ಲೆಯ ಜನರು ಆತಂಕಪಡುವುದು ಬೇಡ. ಬಾವಲಿಗಳು ಸತ್ತುಬಿದ್ದಿದ್ದರೆ ಕೂಡಲೇ ಮಾಹಿತಿ ನೀಡಿ. ಆರೋಗ್ಯ ಇಲಾಖೆಗೆ ಮಾಹಿತಿ ನೀಡಲು ಆರೋಗ್ಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ನಿಫಾಗೆ ಚಿಕಿತ್ಸೆ ನೀಡುವುದಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ. ಜಿಲ್ಲಾಸ್ಪತ್ರೆಯಲ್ಲಿ 5, ತಾಲೂಕು ಆಸ್ಪತ್ರೆಯಲ್ಲಿ 2 ಬೆಡ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಹೇಳಿಕೆ ನೀಡಿದ್ದಾರೆ.

ಹಣ್ಣುಗಳನ್ನು ಚೆನ್ನಾಗಿ ತೊಳೆದು ಸೇವಿಸಿ. ಪ್ರಾಣಿ, ಪಕ್ಷಿಗಳು ಕಚ್ಚಿದ ಹಣ್ಣು ಸೇವಿಸಬೇಡಿ. ಜ್ವರ, ಕೆಮ್ಮು, ಉಸಿರಾಟದ ತೊಂದರೆ ಕಂಡು ಬಂದಲ್ಲಿ ತಪಾಸಣೆ ನಡೆಸಿ ಡಿಹೆಚ್ಒ ವೆಂಕಟೇಶ್ ಹೇಳಿದ್ದಾರೆ.

ಇದನ್ನೂ ಓದಿ: Nipah virus ಕೇರಳದ ಮೂರು ಜಿಲ್ಲೆಗಳಲ್ಲಿ ನಿಫಾ ವೈರಸ್ ಎಚ್ಚರಿಕೆ; ನಿಫಾಗೆ ಬಲಿಯಾದ ಬಾಲಕನ ನಿಕಟ ಸಂಪರ್ಕದಲ್ಲಿದ್ದ 8 ಮಂದಿಗೆ ಸೋಂಕು ಇಲ್ಲ

ಇದನ್ನೂ ಓದಿ: Nipah Virus ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ: ರೋಗ ಲಕ್ಷಣಗಳೇನು? ತಡೆಯುವುದು ಹೇಗೆ?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್