AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಬ ಸಮುದಾಯಕ್ಕೆ ST ಮೀಸಲಾತಿ ಆಗ್ರಹಿಸಿ ನಿರಂಜನಾನಂದಪುರಿ ಸ್ವಾಮೀಜಿ ಭಾಷಣ

ಕೇವಲ ಕುರುಬ ಸಮುದಾಯಕ್ಕೆ ಅನುದಾನ ನೀಡಿದರೆ ಸಾಲದು. ಕುರುಬ ಸಮಾಜಕ್ಕೆ ನೀಡುವ ಅನುದಾನ ಕೇವಲ ಉಪ್ಪಿನಕಾಯಿ. ಈಗ ಮೀಸಲಾತಿಗೆ ಸಹಕರಿಸಿ ನಮಗೆ ಊಟ ಕೊಡಬೇಕು ಎಂದು ರಾಜ್ಯದ ಮುಖ್ಯಮಂತ್ರಿಗೆ ನಿರಂಜನಾನಂದಪುರಿ ಶ್ರೀಗಳು ಒತ್ತಾಯಿಸಿದರು.

ಕುರುಬ ಸಮುದಾಯಕ್ಕೆ ST ಮೀಸಲಾತಿ ಆಗ್ರಹಿಸಿ ನಿರಂಜನಾನಂದಪುರಿ ಸ್ವಾಮೀಜಿ ಭಾಷಣ
ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ
sandhya thejappa
| Updated By: ರಶ್ಮಿ ಕಲ್ಲಕಟ್ಟ|

Updated on: Feb 07, 2021 | 5:57 PM

Share

ಬೆಂಗಳೂರು: ರಾಜ್ಯದ ರಾಜ ಬಿಎಸ್​ವೈಗೆ ಕುರುಬ ಸಮಾಜದ ಮೇಲೆ ಪ್ರೀತಿಯಿದೆ. ಕೊಡುವ ಸ್ಥಾನದಲ್ಲಿ ನೀವಿದ್ದೀರಾ, ಬೇಡುವ ಸ್ಥಾನದಲ್ಲಿ ನಾವಿದ್ದೇವೆ. ನಮ್ಮ ಬೇಡಿಕೆಯನ್ನು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಎಸ್​ಟಿ ಮೀಸಲಾತಿಗೆ ಆಗ್ರಹಿಸಿ ನಡೆದ ಕುರುಬರ ಬೃಹತ್ ಸಮಾವೇಶದಲ್ಲಿ ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.

ಕೇವಲ ಕುರುಬ ಸಮುದಾಯಕ್ಕೆ ಅನುದಾನ ನೀಡಿದರೆ ಸಾಲದು. ಕುರುಬ ಸಮಾಜಕ್ಕೆ ನೀಡುವ ಅನುದಾನ ಕೇವಲ ಉಪ್ಪಿನಕಾಯಿ. ಈಗ ಮೀಸಲಾತಿಗೆ ಸಹಕರಿಸಿ ನಮಗೆ ಊಟ ಕೊಡಬೇಕು ಎಂದು ರಾಜ್ಯದ ಮುಖ್ಯಮಂತ್ರಿಗೆ ಒತ್ತಾಯಿಸಿದ ನಿರಂಜನಾನಂದಪುರಿ ಶ್ರೀಗಳು ಕುರುಬ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ಸಿಗಲೇಬೇಕು. ಸಿಎಂ ಶಿಫಾರಸು ಮಾಡಿದರೆ ಕೇಂದ್ರಕ್ಕೆ ಹೋಗುತ್ತೇವೆ. ಮೋದಿ ಮತ್ತು ಅಮಿತ್ ಶಾ ಅವರಿಗೆ ಮೀಸಲಾತಿ ನೀಡುವಂತೆ ಮನವಿ ಮಾಡುತ್ತೇವೆ ಎಂದರು.

ಸ್ವಾಮೀಜಿ ಭರವಸೆ ನಿರಂಜನಾನಂದಪುರಿ ಶ್ರೀಗಳು ಹಿಂದಿಯಲ್ಲಿ ಭಾಷಣ ಮಾಡುವ ಮೂಲಕ ಕುರುಬ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದರು. ಮೋದಿ ಅವರೇ ಕುರುಬ ಸಮುದಾಯಕ್ಕೆ ಮೀಸಲಾತಿ ನೀಡಿ. ಮುಂದೆ ಎಂದಿಗೂ ನಿಮ್ಮ ಜೊತೆ ಕುರುಬ ಸಮಾಜ ಇರುತ್ತದೆ ಎಂದು ತಿಳಿಸಿದರು.

ನನ್ನ ಜೀವ ಇರುವವರೆಗೂ ಕುರುಬರ ಹಕ್ಕಿಗಾಗಿ ಹೋರಾಟ ಮಾಡುತ್ತೇನೆ. ಕುರುಬ ಸಮಾಜಕ್ಕೆ ಮೀಸಲಾತಿ ಕೊಡಿಸುವುದೇ ನಮ್ಮ ಗುರಿ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಜೊತೆಗೆ ಪಾದಯಾತ್ರೆ ಯಾವುದೇ ವ್ಯಕ್ತಿ, ಪಕ್ಷದ ಪರವಲ್ಲ. ಹಾಗೂ ಪಾದಯಾತ್ರೆ ಕುರುಬ ಸಮುದಾಯದ ಪಾದಯಾತ್ರೆ ಅಲ್ಲ. ಎಲ್ಲಾ ಸಮುದಾಯದ ಬೆಂಬಲದ ಪಾದಯಾತ್ರೆ ಎಂದರು.

ಬಹುಸಂಖ್ಯಾತರಂಥ ಆನೆ ಕೆಳಗೆ ಬಿದ್ದರೆ ಸಣ್ಣ ಸಮುದಾಯಗಳು ಅಪ್ಪಚ್ಚಿಯಾಗುತ್ತವೆ -ಪಂಚಮಸಾಲಿ ಸಮುದಾಯವನ್ನು 2Aಗೆ ಸೇರಿಸದಂತೆ ಶ್ರೀಗಳ ಆಗ್ರಹ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ