AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಬ ಸಮುದಾಯಕ್ಕೆ ST ಮೀಸಲಾತಿ ಆಗ್ರಹಿಸಿ ನಿರಂಜನಾನಂದಪುರಿ ಸ್ವಾಮೀಜಿ ಭಾಷಣ

ಕೇವಲ ಕುರುಬ ಸಮುದಾಯಕ್ಕೆ ಅನುದಾನ ನೀಡಿದರೆ ಸಾಲದು. ಕುರುಬ ಸಮಾಜಕ್ಕೆ ನೀಡುವ ಅನುದಾನ ಕೇವಲ ಉಪ್ಪಿನಕಾಯಿ. ಈಗ ಮೀಸಲಾತಿಗೆ ಸಹಕರಿಸಿ ನಮಗೆ ಊಟ ಕೊಡಬೇಕು ಎಂದು ರಾಜ್ಯದ ಮುಖ್ಯಮಂತ್ರಿಗೆ ನಿರಂಜನಾನಂದಪುರಿ ಶ್ರೀಗಳು ಒತ್ತಾಯಿಸಿದರು.

ಕುರುಬ ಸಮುದಾಯಕ್ಕೆ ST ಮೀಸಲಾತಿ ಆಗ್ರಹಿಸಿ ನಿರಂಜನಾನಂದಪುರಿ ಸ್ವಾಮೀಜಿ ಭಾಷಣ
ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ
sandhya thejappa
sandhya thejappa| Edited By: ರಶ್ಮಿ ಕಲ್ಲಕಟ್ಟ|

Updated on: Feb 07, 2021 | 5:57 PM

Share

ಬೆಂಗಳೂರು: ರಾಜ್ಯದ ರಾಜ ಬಿಎಸ್​ವೈಗೆ ಕುರುಬ ಸಮಾಜದ ಮೇಲೆ ಪ್ರೀತಿಯಿದೆ. ಕೊಡುವ ಸ್ಥಾನದಲ್ಲಿ ನೀವಿದ್ದೀರಾ, ಬೇಡುವ ಸ್ಥಾನದಲ್ಲಿ ನಾವಿದ್ದೇವೆ. ನಮ್ಮ ಬೇಡಿಕೆಯನ್ನು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಎಸ್​ಟಿ ಮೀಸಲಾತಿಗೆ ಆಗ್ರಹಿಸಿ ನಡೆದ ಕುರುಬರ ಬೃಹತ್ ಸಮಾವೇಶದಲ್ಲಿ ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.

ಕೇವಲ ಕುರುಬ ಸಮುದಾಯಕ್ಕೆ ಅನುದಾನ ನೀಡಿದರೆ ಸಾಲದು. ಕುರುಬ ಸಮಾಜಕ್ಕೆ ನೀಡುವ ಅನುದಾನ ಕೇವಲ ಉಪ್ಪಿನಕಾಯಿ. ಈಗ ಮೀಸಲಾತಿಗೆ ಸಹಕರಿಸಿ ನಮಗೆ ಊಟ ಕೊಡಬೇಕು ಎಂದು ರಾಜ್ಯದ ಮುಖ್ಯಮಂತ್ರಿಗೆ ಒತ್ತಾಯಿಸಿದ ನಿರಂಜನಾನಂದಪುರಿ ಶ್ರೀಗಳು ಕುರುಬ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ಸಿಗಲೇಬೇಕು. ಸಿಎಂ ಶಿಫಾರಸು ಮಾಡಿದರೆ ಕೇಂದ್ರಕ್ಕೆ ಹೋಗುತ್ತೇವೆ. ಮೋದಿ ಮತ್ತು ಅಮಿತ್ ಶಾ ಅವರಿಗೆ ಮೀಸಲಾತಿ ನೀಡುವಂತೆ ಮನವಿ ಮಾಡುತ್ತೇವೆ ಎಂದರು.

ಸ್ವಾಮೀಜಿ ಭರವಸೆ ನಿರಂಜನಾನಂದಪುರಿ ಶ್ರೀಗಳು ಹಿಂದಿಯಲ್ಲಿ ಭಾಷಣ ಮಾಡುವ ಮೂಲಕ ಕುರುಬ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದರು. ಮೋದಿ ಅವರೇ ಕುರುಬ ಸಮುದಾಯಕ್ಕೆ ಮೀಸಲಾತಿ ನೀಡಿ. ಮುಂದೆ ಎಂದಿಗೂ ನಿಮ್ಮ ಜೊತೆ ಕುರುಬ ಸಮಾಜ ಇರುತ್ತದೆ ಎಂದು ತಿಳಿಸಿದರು.

ನನ್ನ ಜೀವ ಇರುವವರೆಗೂ ಕುರುಬರ ಹಕ್ಕಿಗಾಗಿ ಹೋರಾಟ ಮಾಡುತ್ತೇನೆ. ಕುರುಬ ಸಮಾಜಕ್ಕೆ ಮೀಸಲಾತಿ ಕೊಡಿಸುವುದೇ ನಮ್ಮ ಗುರಿ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಜೊತೆಗೆ ಪಾದಯಾತ್ರೆ ಯಾವುದೇ ವ್ಯಕ್ತಿ, ಪಕ್ಷದ ಪರವಲ್ಲ. ಹಾಗೂ ಪಾದಯಾತ್ರೆ ಕುರುಬ ಸಮುದಾಯದ ಪಾದಯಾತ್ರೆ ಅಲ್ಲ. ಎಲ್ಲಾ ಸಮುದಾಯದ ಬೆಂಬಲದ ಪಾದಯಾತ್ರೆ ಎಂದರು.

ಬಹುಸಂಖ್ಯಾತರಂಥ ಆನೆ ಕೆಳಗೆ ಬಿದ್ದರೆ ಸಣ್ಣ ಸಮುದಾಯಗಳು ಅಪ್ಪಚ್ಚಿಯಾಗುತ್ತವೆ -ಪಂಚಮಸಾಲಿ ಸಮುದಾಯವನ್ನು 2Aಗೆ ಸೇರಿಸದಂತೆ ಶ್ರೀಗಳ ಆಗ್ರಹ

Follow Us
sandhya thejappa
sandhya thejappa
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು