AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಬ ಸಮುದಾಯಕ್ಕೆ ST ಮೀಸಲಾತಿ ಆಗ್ರಹಿಸಿ ನಿರಂಜನಾನಂದಪುರಿ ಸ್ವಾಮೀಜಿ ಭಾಷಣ

ಕೇವಲ ಕುರುಬ ಸಮುದಾಯಕ್ಕೆ ಅನುದಾನ ನೀಡಿದರೆ ಸಾಲದು. ಕುರುಬ ಸಮಾಜಕ್ಕೆ ನೀಡುವ ಅನುದಾನ ಕೇವಲ ಉಪ್ಪಿನಕಾಯಿ. ಈಗ ಮೀಸಲಾತಿಗೆ ಸಹಕರಿಸಿ ನಮಗೆ ಊಟ ಕೊಡಬೇಕು ಎಂದು ರಾಜ್ಯದ ಮುಖ್ಯಮಂತ್ರಿಗೆ ನಿರಂಜನಾನಂದಪುರಿ ಶ್ರೀಗಳು ಒತ್ತಾಯಿಸಿದರು.

ಕುರುಬ ಸಮುದಾಯಕ್ಕೆ ST ಮೀಸಲಾತಿ ಆಗ್ರಹಿಸಿ ನಿರಂಜನಾನಂದಪುರಿ ಸ್ವಾಮೀಜಿ ಭಾಷಣ
ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ
sandhya thejappa
| Edited By: |

Updated on: Feb 07, 2021 | 5:57 PM

Share

ಬೆಂಗಳೂರು: ರಾಜ್ಯದ ರಾಜ ಬಿಎಸ್​ವೈಗೆ ಕುರುಬ ಸಮಾಜದ ಮೇಲೆ ಪ್ರೀತಿಯಿದೆ. ಕೊಡುವ ಸ್ಥಾನದಲ್ಲಿ ನೀವಿದ್ದೀರಾ, ಬೇಡುವ ಸ್ಥಾನದಲ್ಲಿ ನಾವಿದ್ದೇವೆ. ನಮ್ಮ ಬೇಡಿಕೆಯನ್ನು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಎಸ್​ಟಿ ಮೀಸಲಾತಿಗೆ ಆಗ್ರಹಿಸಿ ನಡೆದ ಕುರುಬರ ಬೃಹತ್ ಸಮಾವೇಶದಲ್ಲಿ ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.

ಕೇವಲ ಕುರುಬ ಸಮುದಾಯಕ್ಕೆ ಅನುದಾನ ನೀಡಿದರೆ ಸಾಲದು. ಕುರುಬ ಸಮಾಜಕ್ಕೆ ನೀಡುವ ಅನುದಾನ ಕೇವಲ ಉಪ್ಪಿನಕಾಯಿ. ಈಗ ಮೀಸಲಾತಿಗೆ ಸಹಕರಿಸಿ ನಮಗೆ ಊಟ ಕೊಡಬೇಕು ಎಂದು ರಾಜ್ಯದ ಮುಖ್ಯಮಂತ್ರಿಗೆ ಒತ್ತಾಯಿಸಿದ ನಿರಂಜನಾನಂದಪುರಿ ಶ್ರೀಗಳು ಕುರುಬ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ಸಿಗಲೇಬೇಕು. ಸಿಎಂ ಶಿಫಾರಸು ಮಾಡಿದರೆ ಕೇಂದ್ರಕ್ಕೆ ಹೋಗುತ್ತೇವೆ. ಮೋದಿ ಮತ್ತು ಅಮಿತ್ ಶಾ ಅವರಿಗೆ ಮೀಸಲಾತಿ ನೀಡುವಂತೆ ಮನವಿ ಮಾಡುತ್ತೇವೆ ಎಂದರು.

ಸ್ವಾಮೀಜಿ ಭರವಸೆ ನಿರಂಜನಾನಂದಪುರಿ ಶ್ರೀಗಳು ಹಿಂದಿಯಲ್ಲಿ ಭಾಷಣ ಮಾಡುವ ಮೂಲಕ ಕುರುಬ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದರು. ಮೋದಿ ಅವರೇ ಕುರುಬ ಸಮುದಾಯಕ್ಕೆ ಮೀಸಲಾತಿ ನೀಡಿ. ಮುಂದೆ ಎಂದಿಗೂ ನಿಮ್ಮ ಜೊತೆ ಕುರುಬ ಸಮಾಜ ಇರುತ್ತದೆ ಎಂದು ತಿಳಿಸಿದರು.

ನನ್ನ ಜೀವ ಇರುವವರೆಗೂ ಕುರುಬರ ಹಕ್ಕಿಗಾಗಿ ಹೋರಾಟ ಮಾಡುತ್ತೇನೆ. ಕುರುಬ ಸಮಾಜಕ್ಕೆ ಮೀಸಲಾತಿ ಕೊಡಿಸುವುದೇ ನಮ್ಮ ಗುರಿ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಜೊತೆಗೆ ಪಾದಯಾತ್ರೆ ಯಾವುದೇ ವ್ಯಕ್ತಿ, ಪಕ್ಷದ ಪರವಲ್ಲ. ಹಾಗೂ ಪಾದಯಾತ್ರೆ ಕುರುಬ ಸಮುದಾಯದ ಪಾದಯಾತ್ರೆ ಅಲ್ಲ. ಎಲ್ಲಾ ಸಮುದಾಯದ ಬೆಂಬಲದ ಪಾದಯಾತ್ರೆ ಎಂದರು.

ಬಹುಸಂಖ್ಯಾತರಂಥ ಆನೆ ಕೆಳಗೆ ಬಿದ್ದರೆ ಸಣ್ಣ ಸಮುದಾಯಗಳು ಅಪ್ಪಚ್ಚಿಯಾಗುತ್ತವೆ -ಪಂಚಮಸಾಲಿ ಸಮುದಾಯವನ್ನು 2Aಗೆ ಸೇರಿಸದಂತೆ ಶ್ರೀಗಳ ಆಗ್ರಹ

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!