AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಬ ಸಮುದಾಯಕ್ಕೆ ST ಮೀಸಲಾತಿ ಆಗ್ರಹಿಸಿ ನಿರಂಜನಾನಂದಪುರಿ ಸ್ವಾಮೀಜಿ ಭಾಷಣ

ಕೇವಲ ಕುರುಬ ಸಮುದಾಯಕ್ಕೆ ಅನುದಾನ ನೀಡಿದರೆ ಸಾಲದು. ಕುರುಬ ಸಮಾಜಕ್ಕೆ ನೀಡುವ ಅನುದಾನ ಕೇವಲ ಉಪ್ಪಿನಕಾಯಿ. ಈಗ ಮೀಸಲಾತಿಗೆ ಸಹಕರಿಸಿ ನಮಗೆ ಊಟ ಕೊಡಬೇಕು ಎಂದು ರಾಜ್ಯದ ಮುಖ್ಯಮಂತ್ರಿಗೆ ನಿರಂಜನಾನಂದಪುರಿ ಶ್ರೀಗಳು ಒತ್ತಾಯಿಸಿದರು.

ಕುರುಬ ಸಮುದಾಯಕ್ಕೆ ST ಮೀಸಲಾತಿ ಆಗ್ರಹಿಸಿ ನಿರಂಜನಾನಂದಪುರಿ ಸ್ವಾಮೀಜಿ ಭಾಷಣ
ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ
sandhya thejappa
| Edited By: |

Updated on: Feb 07, 2021 | 5:57 PM

Share

ಬೆಂಗಳೂರು: ರಾಜ್ಯದ ರಾಜ ಬಿಎಸ್​ವೈಗೆ ಕುರುಬ ಸಮಾಜದ ಮೇಲೆ ಪ್ರೀತಿಯಿದೆ. ಕೊಡುವ ಸ್ಥಾನದಲ್ಲಿ ನೀವಿದ್ದೀರಾ, ಬೇಡುವ ಸ್ಥಾನದಲ್ಲಿ ನಾವಿದ್ದೇವೆ. ನಮ್ಮ ಬೇಡಿಕೆಯನ್ನು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಎಸ್​ಟಿ ಮೀಸಲಾತಿಗೆ ಆಗ್ರಹಿಸಿ ನಡೆದ ಕುರುಬರ ಬೃಹತ್ ಸಮಾವೇಶದಲ್ಲಿ ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.

ಕೇವಲ ಕುರುಬ ಸಮುದಾಯಕ್ಕೆ ಅನುದಾನ ನೀಡಿದರೆ ಸಾಲದು. ಕುರುಬ ಸಮಾಜಕ್ಕೆ ನೀಡುವ ಅನುದಾನ ಕೇವಲ ಉಪ್ಪಿನಕಾಯಿ. ಈಗ ಮೀಸಲಾತಿಗೆ ಸಹಕರಿಸಿ ನಮಗೆ ಊಟ ಕೊಡಬೇಕು ಎಂದು ರಾಜ್ಯದ ಮುಖ್ಯಮಂತ್ರಿಗೆ ಒತ್ತಾಯಿಸಿದ ನಿರಂಜನಾನಂದಪುರಿ ಶ್ರೀಗಳು ಕುರುಬ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ಸಿಗಲೇಬೇಕು. ಸಿಎಂ ಶಿಫಾರಸು ಮಾಡಿದರೆ ಕೇಂದ್ರಕ್ಕೆ ಹೋಗುತ್ತೇವೆ. ಮೋದಿ ಮತ್ತು ಅಮಿತ್ ಶಾ ಅವರಿಗೆ ಮೀಸಲಾತಿ ನೀಡುವಂತೆ ಮನವಿ ಮಾಡುತ್ತೇವೆ ಎಂದರು.

ಸ್ವಾಮೀಜಿ ಭರವಸೆ ನಿರಂಜನಾನಂದಪುರಿ ಶ್ರೀಗಳು ಹಿಂದಿಯಲ್ಲಿ ಭಾಷಣ ಮಾಡುವ ಮೂಲಕ ಕುರುಬ ಸಮುದಾಯಕ್ಕೆ ಎಸ್​ಟಿ ಮೀಸಲಾತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದರು. ಮೋದಿ ಅವರೇ ಕುರುಬ ಸಮುದಾಯಕ್ಕೆ ಮೀಸಲಾತಿ ನೀಡಿ. ಮುಂದೆ ಎಂದಿಗೂ ನಿಮ್ಮ ಜೊತೆ ಕುರುಬ ಸಮಾಜ ಇರುತ್ತದೆ ಎಂದು ತಿಳಿಸಿದರು.

ನನ್ನ ಜೀವ ಇರುವವರೆಗೂ ಕುರುಬರ ಹಕ್ಕಿಗಾಗಿ ಹೋರಾಟ ಮಾಡುತ್ತೇನೆ. ಕುರುಬ ಸಮಾಜಕ್ಕೆ ಮೀಸಲಾತಿ ಕೊಡಿಸುವುದೇ ನಮ್ಮ ಗುರಿ ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಜೊತೆಗೆ ಪಾದಯಾತ್ರೆ ಯಾವುದೇ ವ್ಯಕ್ತಿ, ಪಕ್ಷದ ಪರವಲ್ಲ. ಹಾಗೂ ಪಾದಯಾತ್ರೆ ಕುರುಬ ಸಮುದಾಯದ ಪಾದಯಾತ್ರೆ ಅಲ್ಲ. ಎಲ್ಲಾ ಸಮುದಾಯದ ಬೆಂಬಲದ ಪಾದಯಾತ್ರೆ ಎಂದರು.

ಬಹುಸಂಖ್ಯಾತರಂಥ ಆನೆ ಕೆಳಗೆ ಬಿದ್ದರೆ ಸಣ್ಣ ಸಮುದಾಯಗಳು ಅಪ್ಪಚ್ಚಿಯಾಗುತ್ತವೆ -ಪಂಚಮಸಾಲಿ ಸಮುದಾಯವನ್ನು 2Aಗೆ ಸೇರಿಸದಂತೆ ಶ್ರೀಗಳ ಆಗ್ರಹ

Follow Us
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ