AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಭಯಾ ಸೇಫ್ ಸಿಟಿ ಟೆಂಡರ್ ಮಾಹಿತಿ ಸೋರಿಕೆ ಪ್ರಕರಣ: ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಿದ ಸರ್ಕಾರ

ಯೋಜನೆ ಅನುಷ್ಠಾನ ಸಂಬಂಧ ಸರ್ಕಾರ ಟೆಂಡರ್​ ಕರೆದಿತ್ತು. ಟೆಂಡರ್​ ಪ್ರಕ್ರಿಯೆ ಮಾಹಿತಿಯು ಸೋರಿಕೆ ಆಗಿತ್ತು. ಈಗ ಇದರ ತನಿಖೆಗೆ ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರ ರಚಿಸಿದೆ.

ನಿರ್ಭಯಾ ಸೇಫ್ ಸಿಟಿ ಟೆಂಡರ್ ಮಾಹಿತಿ ಸೋರಿಕೆ ಪ್ರಕರಣ: ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಿದ ಸರ್ಕಾರ
ಇಂದು ಮೈಸೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
ರಾಜೇಶ್ ದುಗ್ಗುಮನೆ
| Edited By: |

Updated on:Dec 25, 2020 | 10:03 PM

Share

ಬೆಂಗಳೂರು: ನಿರ್ಭಯಾ ಸೇಫ್ ಸಿಟಿ ಟೆಂಡರ್ ಮಾಹಿತಿ ಸೋರಿಕೆ ಪ್ರಕರಣ ಸಂಚಲನ ಸೃಷ್ಟಿಸಿತ್ತು. ಅಲ್ಲದೆ, ಈ ಬಗ್ಗೆ ಟಿವಿ9 ಈ ಬಗ್ಗೆ ನಿರಂತರ ವರದಿ ಕೂಡ ಮಾಡಿತ್ತು. ಈ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯಪಾಲರ ಆದೇಶಾನುಸರ ಸರ್ಕಾರ ಉನ್ನತ ಮಟ್ಟದ ಅಧಿಕಾರಿಗಳಿಂದ ತನಿಖೆಗೆ ಸೂಚಿಸಿದೆ. .

ಯೋಜನೆ ಅನುಷ್ಠಾನ ಸಂಬಂಧ ಸರ್ಕಾರ ಟೆಂಡರ್​ ಕರೆದಿತ್ತು. ಟೆಂಡರ್​ ಪ್ರಕ್ರಿಯೆ ಮಾಹಿತಿಯು ಸೋರಿಕೆ ಆಗಿತ್ತು. ಈಗ ಇದರ ತನಿಖೆಗೆ ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರ ರಚಿಸಿದೆ. ಉನ್ನತ ಮಟ್ಟದ ಈ ತನಿಖಾ ಸಮಿತಿಗೆ ತನಿಖಾಧಿಕಾರಿಯಾಗಿ ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್ ಪಂತ್​ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.

ಏನಿದು ಪ್ರಕರಣ?

ಬೆಂಗಳೂರು ಸುರಕ್ಷಿತ ನಗರ ಕಾರ್ಯಕ್ರಮದ ಅಡಿ ಸಿಸಿಟಿವಿ ಅಳವಡಿಸಲು ಗುತ್ತಿಗೆ ಕರೆಯಲಾಗಿತ್ತು. ಇದರಲ್ಲಿ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್, ಲಾರ್ಸೆನ್ ಆಂಡ್ ಟೂಬ್ರೋ, ಮ್ಯಾಟ್ರಿಕ್ಸ್ ಸೆಕ್ಯುರಿಟಿ ಮತ್ತು ಸರ್ವೇಲೆನ್ಸ್ ಲಿಮಿಟೆಡ್ ಕಂಪೆನಿಗಳು ಟೆಂಡರ್​ನಲ್ಲಿ ಭಾಗವಹಿಸಿದ್ದವು. ಬಿಇಎಲ್​ ಕೊಟ್ಟ ದೂರಿನನ್ವಯ ಮ್ಯಾಟ್ರಿಕ್ಸ್ ಸೆಕ್ಯುರಿಟಿ & ಸರ್ವೇಲೆನ್ಸ್ ಲಿಮಿಟೆಡ್ ಮತ್ತು ಎನ್​ಸಿಸಿ ಲಿಮಿಟೆಡ್​ ಕಂಪೆನಿಯಲ್ಲಿ ನಿರ್ದೇಶಕರು ಒಬ್ಬರೇ ವ್ಯಕ್ತಿಯಾಗಿದ್ದರಿಂದ, conflict of interest ಇರುವುದು ಕಂಡಿದೆ. ಈ ಎರಡೂ ಕಂಪೆನಿಗಳು ಒಳಒಪ್ಪಂದ ಮಾಡಿಕೊಂಡಿರುವುದು ಕಾಣುತ್ತಿದೆ. ಹಾಗಾಗಿ ಅವರ ಗುತ್ತಿಗೆ ಕರಡು ನಿಯಮಕ್ಕೆ (Contract Document) ವಿರುದ್ಧವಾಗಿದೆ.

ಮ್ಯಾಟ್ರಿಕ್ಸ್ ಕಂಪೆನಿ ಚೀನಾದ ವಸ್ತು ಬಳಕೆ ಮಾಡುವ ಕುರಿತು ಹೇಳಿದ್ದು ಇದು ನಮ್ಮ ಭದ್ರತೆಗೆ ಹೊಡೆತ ಕೊಡಬಹುದು. ಆದ್ದರಿಂದ ಈ ಎರಡೂ ಕಂಪೆನಿಯನ್ನು ಗುತ್ತಿಗೆ ಪ್ರಕ್ರಿಯೆಯಿಂದ ಹೊರಗಿಡಬೇಕೆಂದು ಬಿಇಎಲ್​, ತನ್ನ ಪತ್ರದಲ್ಲಿ ಕೇಳಿಕೊಂಡಿತ್ತು. ಇದೇ ಪತ್ರದ ಆಧಾರದ ಮೇಲೆ ಭ್ರಷ್ಟಾಚಾರ ವಿರೋಧಿ ಸಂಘದ ಶರದ್ ಆಜಾದ್ ಕೂಡ ಕಳೆದ ಮಾರ್ಚ್ 13 ರಂದು ಪತ್ರ ಬರೆದಿದ್ದರು.

ಈ ಆಧಾರವಿಟ್ಟುಕೊಂಡು ಪ್ರಧಾನಿ ಕಾರ್ಯಾಲಯವು ಮುಖ್ಯ ಕಾರ್ಯದರ್ಶಿಗೆ ವರದಿ ನೀಡುವಂತೆ ಕೇಳಿತ್ತು. ತಪ್ಪಾಗಿ ಗುತ್ತಿಗೆ ಕರಡನ್ನು ತಯಾರಿಸಿದ್ದ ಖಾಸಗಿ ಸಂಸ್ಥೆ ಅರ್ನಸ್ಟ್ ಅಂಡ್ ಯಂಗ್ ಕಂಪೆನಿಯ ಮುಖ್ಯಸ್ಥರನ್ನು ಮುಖ್ಯ ಕಾರ್ಯದರ್ಶಿ ನಿರ್ದೇಶನದಂತೆ ಗೃಹ ಕಾರ್ಯದರ್ಶಿ ತರಾಟೆಗೆ ತೆಗೆದುಕೊಂಡಿದ್ದರು. ಅಷ್ಟೇ ಅಲ್ಲ, ಸರಕಾರದ ನಿರ್ದೇಶನದಂತೆ ಈ ಗುತ್ತಿಗೆ ಪ್ರಕ್ರಿಯೆಯನ್ನು ವಜಾ ಮಾಡಲಾಗಿತ್ತು.

ನಿರ್ಭಯಾ ನಿಧಿ ಮಹಿಳಾ ಸುರಕ್ಷತಾ ಯೋಜನೆ: ಗೃಹ ಕಾರ್ಯದರ್ಶಿ ರೂಪಾ ಅವರಿಂದ ದಾಖಲೆ ಬಿಡುಗಡೆ, ವಿವಾದಕ್ಕೆ ಹೊಸ ಆಯಾಮ

TV9 Exclusive: ಕೋಟಿ ಕೋಟಿ ಮೌಲ್ಯದ ಪ್ರಾಜೆಕ್ಟ್ ಮೇಲೆ ಘಟಾನುಘಟಿಗಳ ಕಣ್ಣು; ಆಪ್ತರಿಗೆ ಟೆಂಡರ್​ ಕೊಡಿಸಲು ಮಹಿಳಾ IPS ಅಧಿಕಾರಿ ಹೆಸರು ದುರ್ಬಳಕೆ?

Published On - 9:59 pm, Fri, 25 December 20

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು