AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಭಯಾ ಸೇಫ್ ಸಿಟಿ ಟೆಂಡರ್ ಮಾಹಿತಿ ಸೋರಿಕೆ ಪ್ರಕರಣ: ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಿದ ಸರ್ಕಾರ

ಯೋಜನೆ ಅನುಷ್ಠಾನ ಸಂಬಂಧ ಸರ್ಕಾರ ಟೆಂಡರ್​ ಕರೆದಿತ್ತು. ಟೆಂಡರ್​ ಪ್ರಕ್ರಿಯೆ ಮಾಹಿತಿಯು ಸೋರಿಕೆ ಆಗಿತ್ತು. ಈಗ ಇದರ ತನಿಖೆಗೆ ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರ ರಚಿಸಿದೆ.

ನಿರ್ಭಯಾ ಸೇಫ್ ಸಿಟಿ ಟೆಂಡರ್ ಮಾಹಿತಿ ಸೋರಿಕೆ ಪ್ರಕರಣ: ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಿದ ಸರ್ಕಾರ
ಇಂದು ಮೈಸೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
ರಾಜೇಶ್ ದುಗ್ಗುಮನೆ
| Edited By: |

Updated on:Dec 25, 2020 | 10:03 PM

Share

ಬೆಂಗಳೂರು: ನಿರ್ಭಯಾ ಸೇಫ್ ಸಿಟಿ ಟೆಂಡರ್ ಮಾಹಿತಿ ಸೋರಿಕೆ ಪ್ರಕರಣ ಸಂಚಲನ ಸೃಷ್ಟಿಸಿತ್ತು. ಅಲ್ಲದೆ, ಈ ಬಗ್ಗೆ ಟಿವಿ9 ಈ ಬಗ್ಗೆ ನಿರಂತರ ವರದಿ ಕೂಡ ಮಾಡಿತ್ತು. ಈ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯಪಾಲರ ಆದೇಶಾನುಸರ ಸರ್ಕಾರ ಉನ್ನತ ಮಟ್ಟದ ಅಧಿಕಾರಿಗಳಿಂದ ತನಿಖೆಗೆ ಸೂಚಿಸಿದೆ. .

ಯೋಜನೆ ಅನುಷ್ಠಾನ ಸಂಬಂಧ ಸರ್ಕಾರ ಟೆಂಡರ್​ ಕರೆದಿತ್ತು. ಟೆಂಡರ್​ ಪ್ರಕ್ರಿಯೆ ಮಾಹಿತಿಯು ಸೋರಿಕೆ ಆಗಿತ್ತು. ಈಗ ಇದರ ತನಿಖೆಗೆ ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರ ರಚಿಸಿದೆ. ಉನ್ನತ ಮಟ್ಟದ ಈ ತನಿಖಾ ಸಮಿತಿಗೆ ತನಿಖಾಧಿಕಾರಿಯಾಗಿ ಬೆಂಗಳೂರು ಪೊಲೀಸ್​ ಆಯುಕ್ತ ಕಮಲ್ ಪಂತ್​ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.

ಏನಿದು ಪ್ರಕರಣ?

ಬೆಂಗಳೂರು ಸುರಕ್ಷಿತ ನಗರ ಕಾರ್ಯಕ್ರಮದ ಅಡಿ ಸಿಸಿಟಿವಿ ಅಳವಡಿಸಲು ಗುತ್ತಿಗೆ ಕರೆಯಲಾಗಿತ್ತು. ಇದರಲ್ಲಿ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್, ಲಾರ್ಸೆನ್ ಆಂಡ್ ಟೂಬ್ರೋ, ಮ್ಯಾಟ್ರಿಕ್ಸ್ ಸೆಕ್ಯುರಿಟಿ ಮತ್ತು ಸರ್ವೇಲೆನ್ಸ್ ಲಿಮಿಟೆಡ್ ಕಂಪೆನಿಗಳು ಟೆಂಡರ್​ನಲ್ಲಿ ಭಾಗವಹಿಸಿದ್ದವು. ಬಿಇಎಲ್​ ಕೊಟ್ಟ ದೂರಿನನ್ವಯ ಮ್ಯಾಟ್ರಿಕ್ಸ್ ಸೆಕ್ಯುರಿಟಿ & ಸರ್ವೇಲೆನ್ಸ್ ಲಿಮಿಟೆಡ್ ಮತ್ತು ಎನ್​ಸಿಸಿ ಲಿಮಿಟೆಡ್​ ಕಂಪೆನಿಯಲ್ಲಿ ನಿರ್ದೇಶಕರು ಒಬ್ಬರೇ ವ್ಯಕ್ತಿಯಾಗಿದ್ದರಿಂದ, conflict of interest ಇರುವುದು ಕಂಡಿದೆ. ಈ ಎರಡೂ ಕಂಪೆನಿಗಳು ಒಳಒಪ್ಪಂದ ಮಾಡಿಕೊಂಡಿರುವುದು ಕಾಣುತ್ತಿದೆ. ಹಾಗಾಗಿ ಅವರ ಗುತ್ತಿಗೆ ಕರಡು ನಿಯಮಕ್ಕೆ (Contract Document) ವಿರುದ್ಧವಾಗಿದೆ.

ಮ್ಯಾಟ್ರಿಕ್ಸ್ ಕಂಪೆನಿ ಚೀನಾದ ವಸ್ತು ಬಳಕೆ ಮಾಡುವ ಕುರಿತು ಹೇಳಿದ್ದು ಇದು ನಮ್ಮ ಭದ್ರತೆಗೆ ಹೊಡೆತ ಕೊಡಬಹುದು. ಆದ್ದರಿಂದ ಈ ಎರಡೂ ಕಂಪೆನಿಯನ್ನು ಗುತ್ತಿಗೆ ಪ್ರಕ್ರಿಯೆಯಿಂದ ಹೊರಗಿಡಬೇಕೆಂದು ಬಿಇಎಲ್​, ತನ್ನ ಪತ್ರದಲ್ಲಿ ಕೇಳಿಕೊಂಡಿತ್ತು. ಇದೇ ಪತ್ರದ ಆಧಾರದ ಮೇಲೆ ಭ್ರಷ್ಟಾಚಾರ ವಿರೋಧಿ ಸಂಘದ ಶರದ್ ಆಜಾದ್ ಕೂಡ ಕಳೆದ ಮಾರ್ಚ್ 13 ರಂದು ಪತ್ರ ಬರೆದಿದ್ದರು.

ಈ ಆಧಾರವಿಟ್ಟುಕೊಂಡು ಪ್ರಧಾನಿ ಕಾರ್ಯಾಲಯವು ಮುಖ್ಯ ಕಾರ್ಯದರ್ಶಿಗೆ ವರದಿ ನೀಡುವಂತೆ ಕೇಳಿತ್ತು. ತಪ್ಪಾಗಿ ಗುತ್ತಿಗೆ ಕರಡನ್ನು ತಯಾರಿಸಿದ್ದ ಖಾಸಗಿ ಸಂಸ್ಥೆ ಅರ್ನಸ್ಟ್ ಅಂಡ್ ಯಂಗ್ ಕಂಪೆನಿಯ ಮುಖ್ಯಸ್ಥರನ್ನು ಮುಖ್ಯ ಕಾರ್ಯದರ್ಶಿ ನಿರ್ದೇಶನದಂತೆ ಗೃಹ ಕಾರ್ಯದರ್ಶಿ ತರಾಟೆಗೆ ತೆಗೆದುಕೊಂಡಿದ್ದರು. ಅಷ್ಟೇ ಅಲ್ಲ, ಸರಕಾರದ ನಿರ್ದೇಶನದಂತೆ ಈ ಗುತ್ತಿಗೆ ಪ್ರಕ್ರಿಯೆಯನ್ನು ವಜಾ ಮಾಡಲಾಗಿತ್ತು.

ನಿರ್ಭಯಾ ನಿಧಿ ಮಹಿಳಾ ಸುರಕ್ಷತಾ ಯೋಜನೆ: ಗೃಹ ಕಾರ್ಯದರ್ಶಿ ರೂಪಾ ಅವರಿಂದ ದಾಖಲೆ ಬಿಡುಗಡೆ, ವಿವಾದಕ್ಕೆ ಹೊಸ ಆಯಾಮ

TV9 Exclusive: ಕೋಟಿ ಕೋಟಿ ಮೌಲ್ಯದ ಪ್ರಾಜೆಕ್ಟ್ ಮೇಲೆ ಘಟಾನುಘಟಿಗಳ ಕಣ್ಣು; ಆಪ್ತರಿಗೆ ಟೆಂಡರ್​ ಕೊಡಿಸಲು ಮಹಿಳಾ IPS ಅಧಿಕಾರಿ ಹೆಸರು ದುರ್ಬಳಕೆ?

Published On - 9:59 pm, Fri, 25 December 20

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!