AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವೆ ನಿರ್ಮಲಾ ಸೀತಾರಾಮನ್​​ಗೂ ಡೀಪ್‌ಫೇಕ್ ಕಾಟ: ಬೆಂಗಳೂರಿನಲ್ಲಿ ಪ್ರಕರಣ ದಾಖಲು

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಡೀಪ್‌ಫೇಕ್ ವೀಡಿಯೊ ವೈರಲ್ ಆಗಿದೆ. ಹಣಕಾಸು ಹೂಡಿಕೆ ಕುರಿತಂತೆ ನಕಲಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹಂಚಲಾಗಿದೆ. ಇದೀಗ ಈ ಬಗ್ಗೆ ಬೆಂಗಳೂರಿನ ಮಲ್ಲೇಶ್ವರಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇಂತಹ ಡೀಪ್‌ಫೇಕ್ ವೀಡಿಯೊಗಳ ಬಗ್ಗೆ ಸಾರ್ವಜನಿಕರು ಎಚ್ಚರದಿಂದಿರಬೇಕು, ಆರ್ಥಿಕ ನಷ್ಟ ತಪ್ಪಿಸಲು ಮಾಹಿತಿ ಪರಿಶೀಲಿಸುವುದು ಅತ್ಯಗತ್ಯ. ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಚಿವೆ ನಿರ್ಮಲಾ ಸೀತಾರಾಮನ್​​ಗೂ ಡೀಪ್‌ಫೇಕ್ ಕಾಟ: ಬೆಂಗಳೂರಿನಲ್ಲಿ ಪ್ರಕರಣ ದಾಖಲು
ನಿರ್ಮಲಾ ಸೀತಾರಾಮನ್
ಅಕ್ಷಯ್​ ಪಲ್ಲಮಜಲು​​
|

Updated on:Dec 04, 2025 | 9:36 AM

Share

ಬೆಂಗಳೂರು, ಡಿ.4: ಡೀಪ್ ಫೇಕ್ ಕಾಟ ಮತ್ತೆ ಶುರುವಾಗಿದೆ. ಈ ಹಿಂದೆ ನಟ-ನಟಿಯರ ಫೋಟೋಗಳನ್ನು ಡೀಪ್ ಫೇಕ್ ಮಾಡಿ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು.  ಇದೀಗ ಮತ್ತೆ ಇದರ ಟ್ರೆಂಡ್​​​ ಶುರುವಾಗಿದೆ. ಈ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಟಾರ್ಗೆಟ್​​ ಆಗಿದ್ದಾರೆ. ಈ ಬಗ್ಗೆ ಬೆಂಗಳೂರಿನ ಮಲ್ಲೇಶ್ವರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹಣಕಾಸು ಹೂಡಿಕೆ ಯೋಜನೆ ಉದ್ದೇಶಿಸಿ ಮಾತನಾಡಿರುವ ವೀಡಿಯೋವನ್ನು ಎಡಿಟ್​​ ಮಾಡಿ ಸಾಮಾಜಿಕ ಜಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಸುಳ್ಳು ಡೀಪ್ ಫೇಕ್ ವೀಡಿಯೋ ಮಾಡಿ ಸಾರ್ವಜನಿಕರಿಗೆ ಪ್ರಚೋದನೆ ನೀಡಿದ್ದಾರೆ ಎಂದು ದೂರು ದಾಖಲಾಗಿದೆ. ಇದೀಗ ಈ ಬಗ್ಗೆ ಆರೋಪಿಗಳ ಪತ್ತೆಗೆ ಕಾರ್ಯಚರಣೆ ನಡೆಯುತ್ತಿದೆ ಎಂದು ಹೇಳಲಾಗಿದೆ.

ಎಫ್ಐಆರ್​​ನಲ್ಲಿ ಏನಿದೆ?

ಭಾರತದ ಹಣಕಾಸು ಸಚಿವರಾದ ನಿರ್ಮಾಲಾ ಸೀತಾರಾಮನ್​​​​ ಅವರ ವಿಡಿಯೋವನ್ನು ಡೀಪ್ ಫೇಕ್ ಮಾಡಿ, ಫೇಸ್​​​ ಬುಕ್​​ನಲ್ಲಿ ಹಂಚಿಕೊಂಡಿದ್ದಾರೆ ಎಂದು ಮಲ್ಲೇಶ್ವರಂ ಪೊಲೀಸ್​​ ಠಾಣೆಯ ಸಬ್​​​​​​ ಇನ್ಸ್​ಪೆಕ್ಟರ್​​​​​ ರಮೇಶ್​​​​ ಎಸ್​​ ಅವರು ದೂರು ನೀಡಿದ್ದಾರೆ. ಹಣಕಾಸಿನ ಹೂಡಿಕೆ ಯೋಜನೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ವಿಡಿಯೋವನ್ನು ಡೀಪ್​​​​​​​ ಫೇಕ್​​ ಮಾಡಿ ಅದನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರಿಂದ ಜನರಿಗೆ ತಪ್ಪು ಮಾಹಿತಿ ಹೋಗುತ್ತಿದೆ. ಹೂಡಿಕೆ ಮಾಡುವ ವ್ಯಕ್ತಿಗೆ ಇದು ಆರ್ಥಿಕ ನಷ್ಟವನ್ನು ಉಂಟು ಮಾಡುವ ಸಾಧ್ಯತೆ ಇದೆ. ಸರ್ಕಾರ ಹಾಗೂ ಸಾರ್ವಜನಿಕ ಸಂಸ್ಥೆಗಳ ಮೇಲೆ ದೊಡ್ಡ ಪರಿಣಾಮವನ್ನುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಈ ಕೃತ್ಯದಲ್ಲಿ ಶಾಮೀಲಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಈ ಎಫ್ಐಆರ್​​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಸ್ಫೋಟಕ್ಕೂ ಬೆಂಗಳೂರು ಜೈಲಿನಲ್ಲಿ ಉಗ್ರ ಮೊಬೈಲ್ ಬಳಸಿದ್ದಕ್ಕೂ ಇದೆಯಾ ನಂಟು? ಎನ್​ಐಎ ತೀವ್ರ ತನಿಖೆ

ಪ್ರಧಾನಿ ಮೋದಿಗೂ ತಪ್ಪಿಲ್ಲ ಡೀಪ್ ಫೇಕ್ ಕಾಟ:

ಪ್ರಧಾನಿ ನರೇಂದ್ರ ಮೋದಿ ಮಹಿಳೆಯರೊಂದಿಗೆ ಗಾರ್ಬಾ ನೃತ್ಯ ಮಾಡಿರುವ ವಿಡಿಯೋ ಕೂಡ ವೈರಲ್​​ ಆಗಿತ್ತು. ಇಟಲಿ ಅಧ್ಯಕ್ಷರ ಜತೆಗೆ ಮೋದಿ ಕೆಲವೊಂದು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿತ್ತು. ಮಹಿಳೆಯರೊಂದಿಗೆ ಗಾರ್ಬಾ ನೃತ್ಯ ಬಗ್ಗೆ ಪ್ರಧಾನಿ ಅವರೇ ಕಾರ್ಯಕ್ರಮವೊಂದರಲ್ಲಿ ಹೇಳಿದರು. ತಂತ್ರಜ್ಞಾನವನ್ನು ಒಳ್ಳೆಯ ವಿಚಾರಕ್ಕೆ ಬಳಸಿಕೊಳ್ಳಬೇಕು ಎಂದು ಯುವಕರಿಗೆ ಕಿವಿಮಾತು ಕೂಡ ಹೇಳಿದ್ದರು. ನವೆಂಬರ್ 2023 ರಲ್ಲಿ, ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಕೂಡ ವೈರಲ್​ ಆಗಿತ್ತು. ಈ ಬಗ್ಗೆ ಅವರು ದೂರು ಕೂಡ ನೀಡಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:35 am, Thu, 4 December 25

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್