AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಕೈ ಶಾಸಕರ ಪ್ರತಿಭಟನೆ ಲೋಕಸಭೆಯಲ್ಲಿ ಪ್ರಸ್ತಾಪ: ನಿರ್ಮಲಾ ಸೀತಾರಾಮನ್ ಹೇಳಿದ್ದಿಷ್ಟು

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಯಾವ ರೀತಿ ಅನ್ಯಾಯ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಸಾಲು ಸಾಲು ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲ ಕೇಂದ್ರದ ತಾರತಮ್ಯ ನೀತಿಯ ವಿರುದ್ಧ ಸಮರದ ರಹಣಕಹಳೆ ಮೊಳಗಿಸಿದ್ದು, ದೆಹಲಿಯಲ್ಲಿ ಪ್ರತಿಭಟನೆ ಮಾಡಲು ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ. ಇನ್ನು ಈ ಬಗ್ಗೆ ಸಂಸತ್​ ಪ್ರಸ್ತಾಪವಾಗಿದ್ದು, ಇದಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಉತ್ತರಿಸಿ, ಜಿಎಸ್ಟಿ ಸಂಪೂರ್ಣವಾಗಿ ರಾಜ್ಯಗಳಿಗೆ ಹೋಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಕೈ ಶಾಸಕರ ಪ್ರತಿಭಟನೆ ಲೋಕಸಭೆಯಲ್ಲಿ ಪ್ರಸ್ತಾಪ: ನಿರ್ಮಲಾ ಸೀತಾರಾಮನ್ ಹೇಳಿದ್ದಿಷ್ಟು
ನಿರ್ಮಲಾ ಸೀತಾರಾಮನ್
ರಮೇಶ್ ಬಿ. ಜವಳಗೇರಾ
|

Updated on:Feb 05, 2024 | 10:06 PM

Share

ನವದೆಹಲಿ/ಬೆಂಗಳೂರು, (ಫೆಬ್ರವರಿ 05): ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅನುದಾನ (allocation of grants ) ತಾರತಮ್ಯದ ವಿರುದ್ಧದ ಕರ್ನಾಟಕ ಕಾಂಗ್ರೆಸ್​ ಸರ್ಕಾರ (Karnataka Congress Government ) ಸಮರ ಸಾರಿದ್ದು, ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ನಾಡಿದ್ದು ಅಂದರೆ ಫೆಬ್ರವರಿ 7 ರಂದು ದೆಹಲಿಯ ಜಂತರ್ ಮಂತರ್​ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಇನ್ನು ಈ ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಇಂದು(ಫೆ.05) ಸಂಸತ್​ನಲ್ಲಿ ಲೋಕಸಭೆ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಪ್ರಸ್ತಾಪಿಸಿದರು.

ಬಾಕಿ ಹಣಕ್ಕಾಗಿ ಕೇಂದ್ರ ಸರ್ಕಾರವನ್ನು ಒತ್ತಾಯ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಮೌನವಾಗಿರುತ್ತಿದ್ದರು. ಬಿಜೆಪಿಯೇತರ ಸರ್ಕಾರಗಳು ಪ್ರತಿಭಟಿಸುತ್ತಿವೆ ಎಂದು ಅಧೀರ್ ರಂಜನ್ ಸಂಸತ್​ನಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಪ್ರತಿಕ್ರಿಯಿಸಿ, ಹಣಕಾಸು ಆಯೋಗದ ಶಿಫಾರಸು ಆಧರಿಸಿ ರಾಜ್ಯಗಳಿಗೆ ಅನುದಾನ ನೀಡಲಾಗುತ್ತಿದೆ. ರಾಜ್ಯಗಳ ಜಿಎಸ್​ಟಿ ಸಂಪೂರ್ಣವಾಗಿ ಆಯಾ ರಾಜ್ಯಗಳಿಗೆ ಹೋಗುತ್ತಿದೆ. ಹಣಕಾಸು ಆಯೋಗದ ಶಿಫಾರಸು ಉಲ್ಲಂಘಿಸಲು ಸಾಧ್ಯವಿಲ್ಲ. ಹಣಕಾಸು ಸಚಿವೆಯಾಗಿ ಶಿಫಾರಸು ಅನ್ವಯ ನೆರವು ನೀಡಲಾಗುತ್ತಿದೆ. ಯಾವುದೇ ರಾಜ್ಯದ ಪರ ಅಥವಾ ವಿರೋಧ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕೇಂದ್ರದ ವಿರುದ್ಧ ರಾಜ್ಯ ಕಾಂಗ್ರೆಸ್​ ಸರ್ಕಾರದಿಂದ ಪ್ರತಿಭಟನೆ: ದಿಲ್ಲಿಯಲ್ಲಿ ಸ್ಥಳ ಪರಿಶೀಲಿಸಿದ ಡಿಕೆಶಿ

ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಗಂಭೀರ ಆರೋಪ

ಇತ್ತ ಸಿಎಂ ಸಿದ್ದರಾಮಯ್ಯ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದಾಖಲೆಗಳ ಮೂಲಕವೇ ಗುದ್ದು ಕೊಟ್ಟಿದ್ದಾರೆ. ಕೇಂದ್ರದ ಅನುದಾನ ತಾರತಮ್ಯ ಮಾಡ್ತಿದೆ. ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಅಂತಾ ಆರೋಪಗಳ ಚಾರ್ಜ್​ಶೀಟ್ ಬಿಡುಗಡೆ ಮಾಡಿದ್ದಾರೆ. ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರ ಬಿಟ್ರೆ ಕರ್ನಾಟಕವೇ ಎರಡನೇ ಸ್ಥಾನದಲ್ಲಿದೆ. ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ಹಣ ಹೋಗುತ್ತೆ. ಆದ್ರೆ ರಾಜ್ಯಕ್ಕೆ ಬರೋ ತೆರಿಗೆ ಹಣದಲ್ಲಿ ಸುಮಾರು 62 ಸಾವಿರದ 98 ಕೋಟಿ ಕಡಿಮೆ ಆಗಿದೆ ಎಂದಿದ್ದಾರೆ.

ಜಿಎಸ್​ಟಿಯಿಂದ ರಾಜ್ಯದ ತೆರಿಗೆಯಲ್ಲಿ ನಷ್ಟವಾಗುತ್ತಿದೆ.ನಮ್ಮಿಂದ 100 ರೂಪಾಯಿ ಪಡೆದು ನಮಗೆ ಕೇವಲ 12 ರೂಪಾಯಿ ಕೊಡುತ್ತಿದ್ದಾರೆ ಎಂದು ಗುಡುಗಿದ್ದಾರೆ. ಇನ್ನು 2018 ರಿಂದ ಇಲ್ಲಿವರೆಗೂ ಬಜೆಟ್ ಗಾತ್ರ ಹೆಚ್ಚಾಗುತ್ತಲೇ ಇದೆ. ಆದ್ರೆ ರಾಜ್ಯಕ್ಕೆ ಸಿಗುವ ಮೊತ್ತ ಮಾತ್ರ ಕಡಿಮೆ ಆಗುತ್ತಿದೆ ಎಂದು ವರದಿಯನ್ನ ಓದಿ ಹೇಳಿದ್ದಾರೆ.

Published On - 10:05 pm, Mon, 5 February 24

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!