AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitin Gadkari: ರಾಜ್ಯದ ವಿವಿಧೆಡೆ ಹೆದ್ದಾರಿ ಕಾಮಗಾರಿಗಳಿಗೆ ನಿತಿನ್ ಗಡ್ಕರಿ ಅನುದಾನ ಬಿಡುಗಡೆ: ಸಿಎಂ ಬೊಮ್ಮಾಯಿ ಧನ್ಯವಾದ

National Highways Development in Karnataka: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ಕರ್ನಾಟಕದ ವಿವಿಧ ಹೆದ್ದಾರಿ ಯೋಜನೆ ಕಾಮಗಾರಿಗಳಿಗೆ 3 ಸಾವಿರ ಕೋಟಿ ರೂಗೂ ಹೆಚ್ಚು ಅನುದಾನ ಪ್ರಕಟಿಸಿದ್ದಾರೆ.

Nitin Gadkari: ರಾಜ್ಯದ ವಿವಿಧೆಡೆ ಹೆದ್ದಾರಿ ಕಾಮಗಾರಿಗಳಿಗೆ ನಿತಿನ್ ಗಡ್ಕರಿ ಅನುದಾನ ಬಿಡುಗಡೆ: ಸಿಎಂ ಬೊಮ್ಮಾಯಿ ಧನ್ಯವಾದ
ನಿತಿನ್ ಗಡ್ಕರಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 08, 2023 | 2:09 PM

Share

ಬೆಂಗಳೂರು: ಈ ಬಾರಿ ಬಜೆಟ್​ನಲ್ಲಿ ಹೆದ್ದಾರಿ ಇಲಾಖೆಗೆ ಬಹಳಷ್ಟು ಅನುದಾನ ಕೊಡಲಾಗಿದೆ. ಇದರಲ್ಲಿ ಕರ್ನಾಟಕದಲ್ಲಿ ಬಹಳಷ್ಟು ಹೆದ್ದಾರಿ ಯೋಜನೆಗಳಿಗೆ ಅನುದಾನ ಕೊಡಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ಕರ್ನಾಟಕದ ವಿವಿಧ ಹೆದ್ದಾರಿ ಯೋಜನೆ ಕಾಮಗಾರಿಗಳಿಗೆ 3 ಸಾವಿರ ಕೋಟಿ ರೂಗೂ ಹೆಚ್ಚು ಅನುದಾನ ಪ್ರಕಟಿಸಿದ್ದಾರೆ. ಇವುಗಳ ಪೈಕಿ ಬಿಜಾರಪುದ ಮಹಾರಾಷ್ಟ್ರ ಗಡಿಭಾಗದ ಕನಮಡಿಬಿಜ್ಜರಗಿತಿಕೋಟ ಸೆಕ್ಷನ್​ನಲ್ಲಿ ದ್ವಿಪಥ ರಸ್ತೆಯ ಅಗಲೀಕರಣಕ್ಕೆ 196 ಕೋಟಿ ರೂ ಅನುದಾನ ನೀಡಲಾಗಿರುವ ವಿಚಾರವನ್ನು ತಿಳಿಸಿ ಗಡ್ಕರಿ ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವರ ಈ ಟ್ವೀಟ್​ಗೆ ಪ್ರತಿಕ್ರಿಯಿಸಿ, ವಿಶ್ವದರ್ಜೆಯ ಇನ್​ಫ್ರಾಸ್ಟ್ರಕ್ಚರ್ ಅನ್ನು ಒದಗಿಸಿರುವುದಕ್ಕೆ ಧನ್ಯವಾದ ಹೇಳಿದ್ದಾರೆ.

ಯಾವ್ಯಾವ ಯೋಜನೆಗೆ ಎಷ್ಟೆಷ್ಟು ಅನುದಾನ?

* ಕನಮಡಿ ಬಿಜ್ಜರಗಿ ಟಿಕೋಟಾ ಸೆಕ್ಷನ್​ನಲ್ಲಿ (ಬಿಜಾಪುರ) ದ್ವಿಪಥ ರಸ್ತೆಯ ಅಗಲೀಕರಣ: 196.05 ಕೋಟಿ ರೂ

* ವಿಜಯಪುರ ಕಲಬುರ್ಗಿಯ ಮಹಾರಾಷ್ಟ್ರ ಗಡಿಭಾಗದ ರಾಹೆ-548ಬಿಗೆ ಸೇರುವ ಮುರುಂನಿಂದ ಐಬಿ ಸರ್ಕಲ್​ವರೆಗಿನ ದ್ವಿಪಥ ರಸ್ತೆಯ ಅಗಲೀಕರಣ ಯೋಜನೆ: 957.09 ಕೋಟಿ ರೂ

* ಕೊಪ್ಪಳ ಮತ್ತು ಗದಗ್​ನಲ್ಲಿ ರಾಹೆ-367ರ ಗಡ್ಡನಕೇರಿ ಸೆಕ್ಷನ್​ನಲ್ಲಿ ಕುಕುನೂರ, ಯಲಬುರ್ಗ, ಗಜೇಂದ್ರಗಡದಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಯೋಜನೆ: 333.96 ಕೋಟಿ ರೂ.

* ಬಾಗಲಕೋಟೆ ಜಿಲ್ಲೆ ರಾಹೆ-367: ಸರ್ಜಾಪುರದಿಂದ ಪಟ್ಟದಕಲ್ಲು ರಸ್ತೆ ಅಗಲೀಕರಣ ಯೋಜನೆ: 445.62 ಕೋಟಿ ರೂ

* ಮೈಸೂರಿನಿಂದ ಕುಶಾಲನಗರದರೆಗಿನ ರಾಹೆ 275, ಗುಡ್ಡೆಹೊಸೂರು ಬಳಿ ನಾಲ್ಕು ಪಥ ರಸ್ತೆ ಅಗಲೀಕರಣ ಯೋಜನೆ: 909.86 ಕೋಟಿ ರೂ

* ಮೈಸೂರು ಜಿಲ್ಲೆ ಯಲವಾಲ ಕೆಆರ್ ನಗರ ರಸ್ತೆ ಜಂಕ್ಷನ್​ನಲ್ಲಿ ನಾಲ್ಕು ಲೇನ್ ರಸ್ತೆ ನಿರ್ಮಾಣ ಯೋಜನೆ: 739.39 ಕೋಟಿ ರೂ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ