AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಫ್ಲೈ ಓವರ್ ನಿರ್ಮಾಣಕ್ಕೆ ಶಿಲಾನ್ಯಾಸ.. ಗಡ್ಕರಿ, ಮೋದಿಗೆ ಧನ್ಯವಾದ ಸಮರ್ಪಿಸಿದ ಪ್ರಲ್ಹಾದ ಜೋಶಿ

ಈ ಯೋಜನೆಗೆ ಚಾಲನೆ ಸಿಕ್ಕಿರುವುದು ಅತ್ಯಂತ ಸಂತಸದ ಸಂಗತಿ. ಸದರಿ ಫ್ಲೈ ಓವರ್​ ರಾಜ್ಯ ಸರ್ಕಾರದ ಸುಪರ್ದಿಗೆ ಬರುತ್ತದೆ. ಆದರೂ, ಗಡ್ಕರಿಯವರು ವಿಶೇಷ ಕಾಳಿಜಿ ವಹಿಸಿ ಕಾಮಗಾರಿಗೆ ಒಪ್ಪಿಗೆ ನೀಡಿದ್ದಾರೆ. ಉಳಿದ ಹಣವನ್ನ ರಾಜ್ಯ ಸರ್ಕಾರವೇ ಭರಿಸಿ ಕಾಮಗಾರಿ ಪೂರ್ಣ ಮಾಡಬೇಕು.

ಹುಬ್ಬಳ್ಳಿ ಫ್ಲೈ ಓವರ್ ನಿರ್ಮಾಣಕ್ಕೆ ಶಿಲಾನ್ಯಾಸ.. ಗಡ್ಕರಿ, ಮೋದಿಗೆ ಧನ್ಯವಾದ ಸಮರ್ಪಿಸಿದ ಪ್ರಲ್ಹಾದ ಜೋಶಿ
ಚೆನ್ನಮ್ಮ ವೃತ್ತದಲ್ಲಿ ಫ್ಲೈ ಓವರ್​ ನಿರ್ಮಿಸುವ ಯೋಜನೆಗೆ ಶಿಲಾನ್ಯಾಸ
Skanda
| Edited By: |

Updated on: Jan 15, 2021 | 1:51 PM

Share

ಹುಬ್ಬಳ್ಳಿ: ನಗರದ ಚೆನ್ನಮ್ಮ ವೃತ್ತದಲ್ಲಿ ಫ್ಲೈ ಓವರ್​ ನಿರ್ಮಿಸುವ ಯೋಜನೆಗೆ ಇಂದು ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಇಂದು ಶಿಲಾನ್ಯಾಸ ನೆರವೇರಿಸಿದ್ದಾರೆ. ವೀಡಿಯೋ ಕಾನ್ಫರೆನ್ಸ್​ ಮೂಲಕ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರ ಸಚಿವರು, ಇದೇ ಸಂದರ್ಭದಲ್ಲಿ NH63 ಕಲಘಟಗಿ ರಾಷ್ಟ್ರೀಯ ಹೆದ್ದಾರಿಗೆ CRF ಯೋಜನೆಯಡಿ ₹ 25 ಕೋಟಿ ವೆಚ್ಚದಲ್ಲಿ 2.77 ಕಿ.ಮೀ ಉದ್ದದ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಮತ್ತು ದಾಸ್ತಿಕೊಪ್ಪದ ಬಳಿ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದಾರೆ.

ಈ ಯೋಜನೆಯನ್ನು ಹುಬ್ಬಳ್ಳಿಗೆ ನೀಡಿದ್ದಕ್ಕಾಗಿ ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸಚಿವ ಪ್ರಲ್ಹಾದ ಜೋಶಿ ಧನ್ಯವಾದ ತಿಳಿಸಿದ್ದಾರೆ. ಈ ಫ್ಲೈಓವರ್​ನಿಂದ ಟ್ರಾಫಿಕ್​ ಸಮಸ್ಯೆಗೆ ಮುಕ್ತಿ ಸಿಗಲಿದೆ. ಹುಬ್ಬಳ್ಳಿ ಜನತೆಯ ಬಹುದಿನಗಳ ಕನಸು ಸಾಕಾರಗೊಳ್ಳಲಿದೆ ಎಂದು ಹೇಳಿದ್ದಾರೆ.

ಈ ಯೋಜನೆಗೆ ಚಾಲನೆ ಸಿಕ್ಕಿರುವುದು ಅತ್ಯಂತ ಸಂತಸದ ಸಂಗತಿ. ಸದರಿ ಫ್ಲೈ ಓವರ್​ ರಾಜ್ಯ ಸರ್ಕಾರದ ಸುಪರ್ದಿಗೆ ಬರುತ್ತದೆ. ಆದರೂ, ಗಡ್ಕರಿಯವರು ವಿಶೇಷ ಕಾಳಿಜಿ ವಹಿಸಿ ಕಾಮಗಾರಿಗೆ ಒಪ್ಪಿಗೆ ನೀಡಿದ್ದಾರೆ. ಕೇಂದ್ರ ಅನುದಾನದ ನಂತರವೂ ಕಾಮಗಾರಿ ಪೂರ್ಣಗೊಳ್ಳಲು ಬೇಕಿರುವಷ್ಟು ಹಣವನ್ನ ರಾಜ್ಯ ಸರ್ಕಾರವೇ ಭರಿಸಿ ಕಾಮಗಾರಿ ಪೂರ್ಣ ಮಾಡಬೇಕು. ಇದನ್ನು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರೇ ಮುತುವರ್ಜಿ ವಹಿಸಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಕಳೆದ 60 ವರ್ಷಗಳಲ್ಲಿ ಆಗದ ರಸ್ತೆ ಕೆಲಸಗಳು ಗಡ್ಕರಿ ನೈತೃತ್ವದಲ್ಲಿ ನಡೆಯುತ್ತಿವೆ. ಇಡೀ ದೇಶದ ರಸ್ತೆ ವ್ಯವಸ್ಥೆ ಸುಧಾರಣೆ ಆಗುತ್ತಿದೆ. ಹೀಗಾಗಿ ಸದ್ಯ ಗಡ್ಕರಿಯವರನ್ನ ರೋಡ್ಕರಿ ಅಂತ ಕರೆಯುವಂತಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೇಂದ್ರ ಸಚಿವ ಸದಾನಂದ ಗೌಡ, ಜಗದೀಶ ಶೆಟ್ಟರ್, ಬಸವರಾಜ ಹೊರಟ್ಟಿ​ ಮತ್ತಿರರು ಉಪಸ್ಥಿತರಿದ್ದರು.

ಹುಬ್ಬಳ್ಳಿಯಿಂದ ಇನ್ನೆರಡು ಮಾರ್ಗಗಳಲ್ಲಿ ಇಂಡಿಗೋ ವಿಮಾನ ಸೇವೆ: ಪ್ರಲ್ಹಾದ್ ಜೋಶಿ

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ