AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಫ್ಲೈ ಓವರ್ ನಿರ್ಮಾಣಕ್ಕೆ ಶಿಲಾನ್ಯಾಸ.. ಗಡ್ಕರಿ, ಮೋದಿಗೆ ಧನ್ಯವಾದ ಸಮರ್ಪಿಸಿದ ಪ್ರಲ್ಹಾದ ಜೋಶಿ

ಈ ಯೋಜನೆಗೆ ಚಾಲನೆ ಸಿಕ್ಕಿರುವುದು ಅತ್ಯಂತ ಸಂತಸದ ಸಂಗತಿ. ಸದರಿ ಫ್ಲೈ ಓವರ್​ ರಾಜ್ಯ ಸರ್ಕಾರದ ಸುಪರ್ದಿಗೆ ಬರುತ್ತದೆ. ಆದರೂ, ಗಡ್ಕರಿಯವರು ವಿಶೇಷ ಕಾಳಿಜಿ ವಹಿಸಿ ಕಾಮಗಾರಿಗೆ ಒಪ್ಪಿಗೆ ನೀಡಿದ್ದಾರೆ. ಉಳಿದ ಹಣವನ್ನ ರಾಜ್ಯ ಸರ್ಕಾರವೇ ಭರಿಸಿ ಕಾಮಗಾರಿ ಪೂರ್ಣ ಮಾಡಬೇಕು.

ಹುಬ್ಬಳ್ಳಿ ಫ್ಲೈ ಓವರ್ ನಿರ್ಮಾಣಕ್ಕೆ ಶಿಲಾನ್ಯಾಸ.. ಗಡ್ಕರಿ, ಮೋದಿಗೆ ಧನ್ಯವಾದ ಸಮರ್ಪಿಸಿದ ಪ್ರಲ್ಹಾದ ಜೋಶಿ
ಚೆನ್ನಮ್ಮ ವೃತ್ತದಲ್ಲಿ ಫ್ಲೈ ಓವರ್​ ನಿರ್ಮಿಸುವ ಯೋಜನೆಗೆ ಶಿಲಾನ್ಯಾಸ
Skanda
| Updated By: ಆಯೇಷಾ ಬಾನು|

Updated on: Jan 15, 2021 | 1:51 PM

Share

ಹುಬ್ಬಳ್ಳಿ: ನಗರದ ಚೆನ್ನಮ್ಮ ವೃತ್ತದಲ್ಲಿ ಫ್ಲೈ ಓವರ್​ ನಿರ್ಮಿಸುವ ಯೋಜನೆಗೆ ಇಂದು ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಇಂದು ಶಿಲಾನ್ಯಾಸ ನೆರವೇರಿಸಿದ್ದಾರೆ. ವೀಡಿಯೋ ಕಾನ್ಫರೆನ್ಸ್​ ಮೂಲಕ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಂದ್ರ ಸಚಿವರು, ಇದೇ ಸಂದರ್ಭದಲ್ಲಿ NH63 ಕಲಘಟಗಿ ರಾಷ್ಟ್ರೀಯ ಹೆದ್ದಾರಿಗೆ CRF ಯೋಜನೆಯಡಿ ₹ 25 ಕೋಟಿ ವೆಚ್ಚದಲ್ಲಿ 2.77 ಕಿ.ಮೀ ಉದ್ದದ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಮತ್ತು ದಾಸ್ತಿಕೊಪ್ಪದ ಬಳಿ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದಾರೆ.

ಈ ಯೋಜನೆಯನ್ನು ಹುಬ್ಬಳ್ಳಿಗೆ ನೀಡಿದ್ದಕ್ಕಾಗಿ ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸಚಿವ ಪ್ರಲ್ಹಾದ ಜೋಶಿ ಧನ್ಯವಾದ ತಿಳಿಸಿದ್ದಾರೆ. ಈ ಫ್ಲೈಓವರ್​ನಿಂದ ಟ್ರಾಫಿಕ್​ ಸಮಸ್ಯೆಗೆ ಮುಕ್ತಿ ಸಿಗಲಿದೆ. ಹುಬ್ಬಳ್ಳಿ ಜನತೆಯ ಬಹುದಿನಗಳ ಕನಸು ಸಾಕಾರಗೊಳ್ಳಲಿದೆ ಎಂದು ಹೇಳಿದ್ದಾರೆ.

ಈ ಯೋಜನೆಗೆ ಚಾಲನೆ ಸಿಕ್ಕಿರುವುದು ಅತ್ಯಂತ ಸಂತಸದ ಸಂಗತಿ. ಸದರಿ ಫ್ಲೈ ಓವರ್​ ರಾಜ್ಯ ಸರ್ಕಾರದ ಸುಪರ್ದಿಗೆ ಬರುತ್ತದೆ. ಆದರೂ, ಗಡ್ಕರಿಯವರು ವಿಶೇಷ ಕಾಳಿಜಿ ವಹಿಸಿ ಕಾಮಗಾರಿಗೆ ಒಪ್ಪಿಗೆ ನೀಡಿದ್ದಾರೆ. ಕೇಂದ್ರ ಅನುದಾನದ ನಂತರವೂ ಕಾಮಗಾರಿ ಪೂರ್ಣಗೊಳ್ಳಲು ಬೇಕಿರುವಷ್ಟು ಹಣವನ್ನ ರಾಜ್ಯ ಸರ್ಕಾರವೇ ಭರಿಸಿ ಕಾಮಗಾರಿ ಪೂರ್ಣ ಮಾಡಬೇಕು. ಇದನ್ನು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರೇ ಮುತುವರ್ಜಿ ವಹಿಸಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಕಳೆದ 60 ವರ್ಷಗಳಲ್ಲಿ ಆಗದ ರಸ್ತೆ ಕೆಲಸಗಳು ಗಡ್ಕರಿ ನೈತೃತ್ವದಲ್ಲಿ ನಡೆಯುತ್ತಿವೆ. ಇಡೀ ದೇಶದ ರಸ್ತೆ ವ್ಯವಸ್ಥೆ ಸುಧಾರಣೆ ಆಗುತ್ತಿದೆ. ಹೀಗಾಗಿ ಸದ್ಯ ಗಡ್ಕರಿಯವರನ್ನ ರೋಡ್ಕರಿ ಅಂತ ಕರೆಯುವಂತಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೇಂದ್ರ ಸಚಿವ ಸದಾನಂದ ಗೌಡ, ಜಗದೀಶ ಶೆಟ್ಟರ್, ಬಸವರಾಜ ಹೊರಟ್ಟಿ​ ಮತ್ತಿರರು ಉಪಸ್ಥಿತರಿದ್ದರು.

ಹುಬ್ಬಳ್ಳಿಯಿಂದ ಇನ್ನೆರಡು ಮಾರ್ಗಗಳಲ್ಲಿ ಇಂಡಿಗೋ ವಿಮಾನ ಸೇವೆ: ಪ್ರಲ್ಹಾದ್ ಜೋಶಿ

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ