AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಗುಡ್​ನ್ಯೂಸ್

HSRP Number Plate: ಕರ್ನಾಟಕದ ಸಾರಿಗೆ ಇಲಾಖೆ ಹೆಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇದೇ ಮೇ 31ಕ್ಕೆ ಗಡುವು ನೀಡಿದೆ. ಗಡುವು ಮೀರಿದರೆ ಸಹ ನಂಬರ್ ಪ್ಲೇಟ್‌ ಅಳವಡಿಕೆ ಮಾಡದ ವಾಹನ ಸವಾರರಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ಮುಂದಾಗಿತ್ತು. ಆದ್ರೆ, ಇದೀಗ ಮೇ 31ರ ಗಡುವು ಮುಗಿದರೂ ಸಹ ಅಲ್ಲಿಂದ 12 ದಿನಗಳವರೆಗೆ ಯಾವುದೇ ಕ್ರಮವಿಲ್ಲ.

ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಗುಡ್​ನ್ಯೂಸ್
ಪ್ರಾತಿನಿಧಿಕ ಚಿತ್ರ
Ramesha M
| Updated By: ರಮೇಶ್ ಬಿ. ಜವಳಗೇರಾ|

Updated on: May 21, 2024 | 10:27 PM

Share

ಬೆಂಗಳೂರು, (ಮೇ 21): ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ (Old Vehicles) ಅತಿ ಸುರಕ್ಷಿತ ನೋಂದಣಿ ಫಲಕ High Security Registration Number Plate- HSRP) ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ‌ ನೀಡಿದ ಗಡುವು ಈ ತಿಂಗಳು ಅಂದರೆ ಮೇ 31ಕ್ಕೆ ಅಂತ್ಯವಾಗಲಿದೆ. ಆದರೂ ಸಹ ಹೆಚ್​ಎಸ್​ಆರ್​ಪಿ ನಂಬರ್ ಪ್ಲೇಟ್ (HSRP Number Plate) ಅಳವಡಿಸದವರ ವಿರುದ್ಧ ಜೂನ್ 12ರವರೆಗೆ ಯಾವುದೇ ಕ್ರಮವಿಲ್ಲ. ಈ ಬಗ್ಗೆ ಸ್ವತಃ ರಾಜ್ಯ ಸರ್ಕಾರವೇ ಹೈಕೋರ್ಟ್​ಗೆ ತಿಳಿಸಿದೆ. ಹೀಗಾಗಿ ಹೆಚ್​​ಎಸ್​ಆರ್​ಪಿ ನಂಬರ್ ಪ್ಲೇಟ್ ಹಾಕಿಸಿಕೊಳ್ಳದ ವಾಹನ ಸವಾರರಿಗೆ ಜೂನ್​ 12 ಕಾಲಾವಕಾಶವಿದೆ.

ಹೆಚ್​​ಎಸ್​ಆರ್​ಪಿ ನಂಬರ್ ಪ್ಲೇಟ್​ ಅಳವಡಿಕೆಗೆ ಇರುವ ಮೇ 31ರ ಗಡುವು ವಿಸ್ತರಣೆ ಕೋರಿ BND ಎನರ್ಜಿ ಲಿಮಿಟೆಡ್ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಇಂದು (ಮೇ 21) ಹೈಕೋರ್ಟ್​ ಮುಂದೆ ಈ ರಿಟ್​ ಅರ್ಜಿ ವಿಚಾರಣೆಗೆ ಬಂದಿದೆ. ಆದ್ರೆ, ಹಲವು ರಿಟ್ ಅರ್ಜಿಗಳ ವಿಚಾರಣೆ ಜೂನ್ 11ಕ್ಕೆ ನಿಗದಿಯಾಗಿದೆ. ಹೀಗಾಗಿ ಹೀಗಾಗಿ ಜೂನ್ 12 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರದ ಪರವಾಗಿ ಎಎಜಿ ರೂಬೆನ್ ಜೇಕಬ್ ಅವರು ಹೈಕೋರ್ಟ್​​ಗೆ ಹೇಳಿದ್ದಾರೆ. ಎಎಜಿ ರೂಬೆನ್ ಜೇಕಬ್ ಅವರು ಈ ಹೇಳಿಯನ್ನು ದಾಖಲಿಸಿಕೊಂಡ ಹೈಕೋರ್ಟ್​ ವಿಚಾರಣೆಯನ್ನು ಜೂನ್ 12ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಇನ್ನೂ ಎಚ್​ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಸಿಲ್ಲವೇ? ಮತ್ತೆ ಗಡುವು ವಿಸ್ತರಣೆ ಅನುಮಾನ

ಸಾರಿಗೆ ಇಲಾಖೆ ಮೊದಲು High Security Registration Plates (HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡಲು 2023ರ ನವೆಂಬರ್ 17ರ ಗಡುವು ಕೊಟ್ಟಿತ್ತು. ಬಳಿಕ ಅದನ್ನು 2024ರ ಫೆಬ್ರವರಿ 17ರ ತನಕ ವಿಸ್ತರಣೆ ಮಾಡಲಾಗಿತ್ತು, ನಂತರ ಅದನ್ನು ಮೇ 31ರ ವರೆಗೆ ವಿಸ್ತರಿಸಲಾಗಿತ್ತು. ಆದ್ರೆ, ಮತ್ತಷ್ಟು ದಿನ ವಿಸ್ತರಣೆ ಮಾಡುವಂತೆ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರಿಂದ ಇದೀಗ ರಾಜ್ಯ ಸರ್ಕಾರ ಜೂನ್​ 12ರ ವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ತಿಳಿಸಿದೆ. ಹೀಗಾಗಿ ಇನ್ನೂ ಹೆಚ್​ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಜೂನ್ 12ರ ವರೆಗೆ ಕಾಲಾವಕಾಶ ಸಿಕ್ಕಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!