ಡಿಕೆಶಿಗೆ ಸಿಗಲಿಲ್ಲ ಜಾಮೀನು, ತಿಹಾರ್ ಜೈಲುವಾಸವೇ ಮುಂದುವರಿಕೆ

ಕಾಂಗ್ರೆಸ್​ನ ಟ್ರಬಲ್ ಶೂಟರ್​ ಡಿ.ಕೆ.ಶಿವಕುಮಾರ್​ಗೆ ಇಂದೂ ಜಾಮೀನು ಸಿಗಲಿಲ್ಲ. ಅ.25ರವರೆಗೂ  ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ನವದೆಹಲಿಯ ಇಡಿ ನ್ಯಾಯಾಲಯ ಆದೇಶಿಸಿದೆ. ಕಳೆದ 28 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಡಿ.ಕೆ.ಶಿವಕುಮಾರ್ ಅವರ ಕಸ್ಟಡಿ ಇಂದಿಗೆ ಅಂತ್ಯವಾಗಿತ್ತು. ಹೀಗಾಗಿ ಇಡಿ ಕೋರ್ಟ್​ಗೆ ಡಿಕೆಶಿಯನ್ನು ಕರೆತಂದಿದ್ದರು. ಆದ್ರೆ ಇಂದೂ ಸಹ ಡಿ.ಕೆ.ಶಿವಕುಮಾರ್​ಗೆ ಜಾಮೀನು ಸಿಗಲಿಲ್ಲ. ಸತತ ಮೂರನೇ ಬಾರಿಯೂ ಡಿಕೆಶಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿಯ ಇಡಿ ಕೋರ್ಟ್ ಆದೇಶಿಸಿದೆ.

ಡಿಕೆಶಿಗೆ ಸಿಗಲಿಲ್ಲ ಜಾಮೀನು, ತಿಹಾರ್ ಜೈಲುವಾಸವೇ ಮುಂದುವರಿಕೆ
ಸಾಧು ಶ್ರೀನಾಥ್​

Updated on: Oct 15, 2019 | 2:00 PM

ಕಾಂಗ್ರೆಸ್​ನ ಟ್ರಬಲ್ ಶೂಟರ್​ ಡಿ.ಕೆ.ಶಿವಕುಮಾರ್​ಗೆ ಇಂದೂ ಜಾಮೀನು ಸಿಗಲಿಲ್ಲ. ಅ.25ರವರೆಗೂ  ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ನವದೆಹಲಿಯ ಇಡಿ ನ್ಯಾಯಾಲಯ ಆದೇಶಿಸಿದೆ.

ಕಳೆದ 28 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಡಿ.ಕೆ.ಶಿವಕುಮಾರ್ ಅವರ ಕಸ್ಟಡಿ ಇಂದಿಗೆ ಅಂತ್ಯವಾಗಿತ್ತು. ಹೀಗಾಗಿ ಇಡಿ ಕೋರ್ಟ್​ಗೆ ಡಿಕೆಶಿಯನ್ನು ಕರೆತಂದಿದ್ದರು. ಆದ್ರೆ ಇಂದೂ ಸಹ ಡಿ.ಕೆ.ಶಿವಕುಮಾರ್​ಗೆ ಜಾಮೀನು ಸಿಗಲಿಲ್ಲ. ಸತತ ಮೂರನೇ ಬಾರಿಯೂ ಡಿಕೆಶಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿಯ ಇಡಿ ಕೋರ್ಟ್ ಆದೇಶಿಸಿದೆ.

Published On - 1:41 pm, Tue, 15 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us