AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ 9ರ ನಂತರ ಮೆಜೆಸ್ಟಿಕ್​ನಿಂದ ಕೆಎಸ್​ಆರ್​ಟಿಸಿ ಬಸ್ ಸಂಚಾರ ಬಂದ್

ಇತರ ಊರುಗಳಿಗೆ ತೆರಳುವವರು 9 ಗಂಟೆ ಒಳಗೆ ಬಸ್ ನಿಲ್ದಾಣಕ್ಕೆ ಬರಬೇಕು ಎಂಬ ಮಾಹಿತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ.

ರಾತ್ರಿ 9ರ ನಂತರ ಮೆಜೆಸ್ಟಿಕ್​ನಿಂದ ಕೆಎಸ್​ಆರ್​ಟಿಸಿ ಬಸ್ ಸಂಚಾರ ಬಂದ್
ಪ್ರಾತಿನಿಧಿಕ ಚಿತ್ರ
guruganesh bhat
| Edited By: |

Updated on:Apr 27, 2021 | 4:33 PM

Share

ಬೆಂಗಳೂರು: ಇಂದು ರಾತ್ರಿ 9 ಗಂಟೆ ನಂತರ ಬೆಂಗಳೂರಿನಿಂದ ಇತರ ಸ್ಥಳಗಳಿಗೆ ಯಾವುದೇ ಬಸ್ ಸಂಚಾರ ಇರುವುದಿಲ್ಲ. ಇತರ ಊರುಗಳಿಗೆ ತೆರಳುವವರು 9 ಗಂಟೆ ಒಳಗೆ ಬಸ್ ನಿಲ್ದಾಣಕ್ಕೆ ಬರಬೇಕು ಎಂಬ ಮಾಹಿತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ. ಈಗಾಗಲೇ ಬುಕಿಂಗ್ ಮಾಡಿರುವ ಬಸ್​ಗಳು ಕೂಡ ರಾತ್ರಿ 9 ಗಂಟೆಯ ಒಳಗೆ ಬೆಂಗಳೂರಿನಿಂದ ಹೊರಡಲಿವೆ ಎಂದು ತಿಳಿದುಬಂದಿದೆ. ಲಾಕ್‌ಡೌನ್ ಮುಗಿಯುವವರೆಗೆ ಯಾವುದೇ  ಬಸ್‌ ಸೇವೆ ಇರುವುದಿಲ್ಲ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ. ಇಂದು ರಾತ್ರಿಯಿಂದ ಸಾರಿಗೆ ವ್ಯವಸ್ಥೆ ಸ್ತಬ್ಧವಾಗುವ ಕಾರಣ ತಮ್ಮ ಸ್ವಂತ ಊರುಗಳತ್ತ ಸಾವಿರಾರು ಮಂದಿ ಗುಳೆಹೋಗುತ್ತಿದ್ದಾರೆ.  ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದತ್ತ ಸಾವಿರಾರು ಪ್ರಯಾಣಿಕರು ಆಗಮಿಸುತ್ತಿದ್ದು,  ಗಂಟೆ ಮೂಟೆಕೊಂಡು ತಮ್ಮತಮ್ಮ ಊರುಗಳತ್ತ ಪ್ರಯಾಣ ಬೆಳೆಸಲು ಧಾವಿಸುತ್ತಿದ್ದಾರೆ.

ಸಾರಿಗೆ ಸಂಚಾರಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರ ಬಾಕಿಯಿರುವ ಕಾರಣ ನವಯುಗ ಟೋಲ್ ಬಳಿ ನೂರಾರು ಜನರು ಜಮಾಯಿಸುತ್ತಿದ್ದಾರೆ. ಸಂಜೆಯಾಗುತ್ತಿದ್ದಂತೆ ಬೆಂಗಳೂರು ಬಿಟ್ಟು ಸ್ವಂತ ಊರುಗಳಿಗೆ ತೆರಳುತ್ತಿದ್ದಾರೆ. ಬೈಕ್, ಬಸ್, ಕಾರ್ ಸೇರಿದಂತೆ ಯಾವ ವಾಹನ ಸಿಗುವುದೋ ಅದರ ಮೂಲಕ ಮನೆ ಸೇರುವ ಹಂಬಲದಲ್ಲಿ ನೂರಾರು ಜನರಿದ್ದಾರೆ. ಜತೆಗೆ ಮಂಡ್ಯ- ಮೈಸೂರು ಭಾಗಗಳಿಗೆ ತೆರಳುವ ಜನರು ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಜಮಾಯಿಸುತ್ತಿದ್ದಾರೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: 18ರಿಂದ 45 ವಯೋಮಾನದವರಿಗೆ ಕೋವಿಡ್ ಲಸಿಕೆ; ನೋಂದಣಿ ಹೇಗೆ? ಪಡೆದುಕೊಳ್ಳುವುದು ಎಲ್ಲಿ? ಡೇಟ್ ಮಿಸ್ ಆದ್ರೆ ಏನು ಮಾಡಬೇಕು?

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:43 pm, Tue, 27 April 21

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?