AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ 9ರ ನಂತರ ಮೆಜೆಸ್ಟಿಕ್​ನಿಂದ ಕೆಎಸ್​ಆರ್​ಟಿಸಿ ಬಸ್ ಸಂಚಾರ ಬಂದ್

ಇತರ ಊರುಗಳಿಗೆ ತೆರಳುವವರು 9 ಗಂಟೆ ಒಳಗೆ ಬಸ್ ನಿಲ್ದಾಣಕ್ಕೆ ಬರಬೇಕು ಎಂಬ ಮಾಹಿತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ.

ರಾತ್ರಿ 9ರ ನಂತರ ಮೆಜೆಸ್ಟಿಕ್​ನಿಂದ ಕೆಎಸ್​ಆರ್​ಟಿಸಿ ಬಸ್ ಸಂಚಾರ ಬಂದ್
ಪ್ರಾತಿನಿಧಿಕ ಚಿತ್ರ
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Apr 27, 2021 | 4:33 PM

Share

ಬೆಂಗಳೂರು: ಇಂದು ರಾತ್ರಿ 9 ಗಂಟೆ ನಂತರ ಬೆಂಗಳೂರಿನಿಂದ ಇತರ ಸ್ಥಳಗಳಿಗೆ ಯಾವುದೇ ಬಸ್ ಸಂಚಾರ ಇರುವುದಿಲ್ಲ. ಇತರ ಊರುಗಳಿಗೆ ತೆರಳುವವರು 9 ಗಂಟೆ ಒಳಗೆ ಬಸ್ ನಿಲ್ದಾಣಕ್ಕೆ ಬರಬೇಕು ಎಂಬ ಮಾಹಿತಿ ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ. ಈಗಾಗಲೇ ಬುಕಿಂಗ್ ಮಾಡಿರುವ ಬಸ್​ಗಳು ಕೂಡ ರಾತ್ರಿ 9 ಗಂಟೆಯ ಒಳಗೆ ಬೆಂಗಳೂರಿನಿಂದ ಹೊರಡಲಿವೆ ಎಂದು ತಿಳಿದುಬಂದಿದೆ. ಲಾಕ್‌ಡೌನ್ ಮುಗಿಯುವವರೆಗೆ ಯಾವುದೇ  ಬಸ್‌ ಸೇವೆ ಇರುವುದಿಲ್ಲ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ. ಇಂದು ರಾತ್ರಿಯಿಂದ ಸಾರಿಗೆ ವ್ಯವಸ್ಥೆ ಸ್ತಬ್ಧವಾಗುವ ಕಾರಣ ತಮ್ಮ ಸ್ವಂತ ಊರುಗಳತ್ತ ಸಾವಿರಾರು ಮಂದಿ ಗುಳೆಹೋಗುತ್ತಿದ್ದಾರೆ.  ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದತ್ತ ಸಾವಿರಾರು ಪ್ರಯಾಣಿಕರು ಆಗಮಿಸುತ್ತಿದ್ದು,  ಗಂಟೆ ಮೂಟೆಕೊಂಡು ತಮ್ಮತಮ್ಮ ಊರುಗಳತ್ತ ಪ್ರಯಾಣ ಬೆಳೆಸಲು ಧಾವಿಸುತ್ತಿದ್ದಾರೆ.

ಸಾರಿಗೆ ಸಂಚಾರಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರ ಬಾಕಿಯಿರುವ ಕಾರಣ ನವಯುಗ ಟೋಲ್ ಬಳಿ ನೂರಾರು ಜನರು ಜಮಾಯಿಸುತ್ತಿದ್ದಾರೆ. ಸಂಜೆಯಾಗುತ್ತಿದ್ದಂತೆ ಬೆಂಗಳೂರು ಬಿಟ್ಟು ಸ್ವಂತ ಊರುಗಳಿಗೆ ತೆರಳುತ್ತಿದ್ದಾರೆ. ಬೈಕ್, ಬಸ್, ಕಾರ್ ಸೇರಿದಂತೆ ಯಾವ ವಾಹನ ಸಿಗುವುದೋ ಅದರ ಮೂಲಕ ಮನೆ ಸೇರುವ ಹಂಬಲದಲ್ಲಿ ನೂರಾರು ಜನರಿದ್ದಾರೆ. ಜತೆಗೆ ಮಂಡ್ಯ- ಮೈಸೂರು ಭಾಗಗಳಿಗೆ ತೆರಳುವ ಜನರು ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಜಮಾಯಿಸುತ್ತಿದ್ದಾರೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: 18ರಿಂದ 45 ವಯೋಮಾನದವರಿಗೆ ಕೋವಿಡ್ ಲಸಿಕೆ; ನೋಂದಣಿ ಹೇಗೆ? ಪಡೆದುಕೊಳ್ಳುವುದು ಎಲ್ಲಿ? ಡೇಟ್ ಮಿಸ್ ಆದ್ರೆ ಏನು ಮಾಡಬೇಕು?

ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:43 pm, Tue, 27 April 21