AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ಬಸ್ ನಿಲ್ದಾಣ ಈಗ ಕಳ್ಳರ ಅಡ್ಡೆ, ಪ್ರಯಾಣಿಕರಿಗೆ ತಮ್ಮ ಪರ್ಸ್​​ನದ್ದೇ ಚಿಂತೆ

ರಾಮನಗರ: ಅದು ಪ್ರತಿನಿತ್ಯ ಸಾವಿರಾರು ಪ್ರಯಾಣಿಕರು ಬಂದು ಹೋಗುವ ಸರ್ಕಾರಿ ಬಸ್ ನಿಲ್ದಾಣ. ಆದ್ರೆ ಇತ್ತೀಚಿಗೆ ಆ ಬಸ್ ನಿಲ್ದಾಣಕ್ಕೆ ಪ್ರಯಾಣಿಕರು ಹೋಗಲು ಹಿಂದೇಟು ಹಾಕುತ್ತಿದ್ದಾರೆ‌. ಪ್ರತಿನಿತ್ಯ ಪ್ರಯಾಣಿಕರು ನನ್ನ ಪರ್ಸ್ ಕಳೆದುಹೋಯ್ತು, ನನ್ನ ಮೊಬೈಲ್ ಕಳೆದು ಹೋಯ್ತು ಅಂತಾ ಹೇಳುವವರೇ ಹೆಚ್ಚು. ಇದು ರೇಷ್ಮೆ ನಗರಿ ರಾಮನಗರದ ಸಾರಿಗೆ ಬಸ್​ ನಿಲ್ದಾಣ. ಇಲ್ಲಿಗೆ ಬರೋಕೆ ಪ್ರಯಾಣಿಕರು ಭಯ ಪಡ್ತಾರೆ. ಪದೇ ಪದೇ ತಾವು ತಂದ ವಸ್ತು ಇದೀಯಾ ಇಲ್ವಾ ಅಂತ ಮುಟ್ಟಿ ಮುಟ್ಟಿ ನೋಡಿ ಕೊಳ್ತಾರೆ. […]

ರಾಮನಗರ ಬಸ್ ನಿಲ್ದಾಣ ಈಗ ಕಳ್ಳರ ಅಡ್ಡೆ, ಪ್ರಯಾಣಿಕರಿಗೆ ತಮ್ಮ ಪರ್ಸ್​​ನದ್ದೇ ಚಿಂತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 23, 2019 | 10:06 AM

Share

ರಾಮನಗರ: ಅದು ಪ್ರತಿನಿತ್ಯ ಸಾವಿರಾರು ಪ್ರಯಾಣಿಕರು ಬಂದು ಹೋಗುವ ಸರ್ಕಾರಿ ಬಸ್ ನಿಲ್ದಾಣ. ಆದ್ರೆ ಇತ್ತೀಚಿಗೆ ಆ ಬಸ್ ನಿಲ್ದಾಣಕ್ಕೆ ಪ್ರಯಾಣಿಕರು ಹೋಗಲು ಹಿಂದೇಟು ಹಾಕುತ್ತಿದ್ದಾರೆ‌. ಪ್ರತಿನಿತ್ಯ ಪ್ರಯಾಣಿಕರು ನನ್ನ ಪರ್ಸ್ ಕಳೆದುಹೋಯ್ತು, ನನ್ನ ಮೊಬೈಲ್ ಕಳೆದು ಹೋಯ್ತು ಅಂತಾ ಹೇಳುವವರೇ ಹೆಚ್ಚು.

ಇದು ರೇಷ್ಮೆ ನಗರಿ ರಾಮನಗರದ ಸಾರಿಗೆ ಬಸ್​ ನಿಲ್ದಾಣ. ಇಲ್ಲಿಗೆ ಬರೋಕೆ ಪ್ರಯಾಣಿಕರು ಭಯ ಪಡ್ತಾರೆ. ಪದೇ ಪದೇ ತಾವು ತಂದ ವಸ್ತು ಇದೀಯಾ ಇಲ್ವಾ ಅಂತ ಮುಟ್ಟಿ ಮುಟ್ಟಿ ನೋಡಿ ಕೊಳ್ತಾರೆ. ಜೇಬಿನಲ್ಲಿರೋ ದುಡ್ಡು, ಮೊಬೈಲ್‌, ಮೈಮೇಲಿರುವ ಚಿನ್ನಾಭರಣ ಯಾವಾಗ ಮಂಗಮಾಯವಾಗುತ್ತೋ ಅಂತ ಹೆದುರುತ್ತಾ ಪ್ರಯಾಣಿಕರು ಬಸ್ ಹತ್ತುತ್ತಾರೆ.

ಕಳ್ಳರ ಅಡ್ಡೆಯಾಯ್ತು ಸರ್ಕಾರಿ ಬಸ್ ನಿಲ್ದಾಣ! ರಾಮನಗರ ಕೆಎಸ್‌ಆರ್‌ಟಿಸಿ ಬಸ್​ ನಿಲ್ದಾಣ ಈಗ ಪ್ರಯಾಣಿಕರ ಪಾಲಿಗೆ ಅಸುರಕ್ಷಿತ ತಾಣವಾಗಿ ಪರಿಣಮಿಸಿದೆ. ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಕಳೆದ ಒಂದು ವರ್ಷದಿಂದ 440 ಸಣ್ಣಪುಟ್ಟ ಕಳ್ಳತನ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಮೊಬೈಲ್ ಕಳವು ಸೇರಿದಂತೆ ಜೇಬಿಗೆ ಕತ್ತರಿ ಹಾಕಿರುವ ಪ್ರಕರಣಗಳು ಶೇ.90ರಷ್ಟು ರಾಮನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ನಡೆದಿವೆ. ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮರಾ ಇಲ್ಲದೇ ಇರುವುದು ಕಳ್ಳರ ಪಾಲಿಗೆ ವರವಾಗಿದೆ.

ಅಂದಹಾಗೆ, ಹಣ ಹಾಗೂ ಮೊಬೈಲ್ ಕಳುವಿಗೆ ಬಸ್ ನಿಲ್ದಾಣದಲ್ಲಿ ಸಿಸಿಟಿವಿ ಇಲ್ಲದಿರುವುದೇ ಪ್ರಮುಖ ಕಾರಣವಾಗಿದೆ. ಸುರಕ್ಷತೆಗಾಗಿ ಎಲ್ಲಾ ಕಡೆಯಲ್ಲೂ ಸಿಸಿಟಿವಿ ಅಳವಡಿಸಿ ಅಪರಾಧ ಚಟುವಟಿಕೆ ಪತ್ತೆ ಮಾಡಲು ಸಿಸಿಟಿವಿ ಸಾಕಷ್ಟು ಉಪಯೋಗವಾಗಲಿದೆ. ಆದ್ರೆ, ಸಿಸಿಟಿವಿ ಅಳವಡಿಕೆ ಮಾಡಲು ಪೊಲೀಸ್​ ಇಲಾಖೆ ನಗರಸಭೆ ಅಧಿಕಾರಿಗಳಿಗೆ ಹಾಗೂ ಕೆಎಸ್​ಆರ್​ಟಿಸಿ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದೆ. ಆದ್ರೆ ಈ ಎರಡು ಇಲಾಖೆಗಳು ಈ ಬಗ್ಗೆ ತಲೆಕೆಡಿಸಿಕೊಳ್ಳದೆ ಇರುವುದು ಪ್ರಯಾಣಿಕರಿಗೆ ತಲೆನೋವಾಗಿ ಪರಿಣಮಿಸಿದೆ.

ಒಟ್ಟಾರೆಯಾಗಿ ಸಿಸಿಟಿವಿ ಇಲ್ಲದಿರುವುದನ್ನೇ ಬಂಡವಾಳ ಮಾಡಿಕೊಂಡಿರುವ ಕಳ್ಳರು ರಾಮನಗರ ಬಸ್​ ನಿಲ್ದಾವನ್ನ ಅಡ್ಡೆಯಾಗಿ ಮಾಡಿಕೊಂಡಿದ್ದಾರೆ. ಆದಷ್ಟು ಬೇಗ ಪೊಲೀಸರು ಕಳ್ಳರನ್ನ ಬಂಧಿಸಿ, ಪ್ರಯಾಣಿಕರ ಭಯವನ್ನ ದೂರ ಮಾಡಬೇಕಿದೆ. ಅಲ್ಲದೇ ನಗರಸಭೆ ಹಾಗೂ ಸಾರಿಗೆ ಬಸ್ ಅಧಿಕಾರಿಗಳು ಬಸ್‌ ನಿಲ್ದಾಣದಲ್ಲಿ ಸಿಸಿಟಿವಿ ಅಳವಡಿಸಬೇಕಿದೆ.

Published On - 8:43 am, Mon, 23 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ