AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BPL Card Guidelines | ಬಿಪಿಎಲ್​ ಕಾರ್ಡ್​ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ: ಆಹಾರ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ

BPL Card Guidelines: ನಾನು ಸಚಿವನಾದ ಬಳಿಕ ಯಾವುದೇ ತಿದ್ದುಪಡಿ ಮಾಡಿಲ್ಲ. ಮುಂದೂ ಸಹ ಯಾವುದೇ ತಿದ್ದುಪಡಿ ಮಾಡುವುದಿಲ್ಲ. ಈಗ ಜಾರಿಯಲ್ಲಿರುವ ಮಾನದಂಡಗಳನ್ನೇ ಮುಂದುವರೆಸುತ್ತೇವೆ ಎಂದು ಅವರು ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

BPL Card Guidelines | ಬಿಪಿಎಲ್​ ಕಾರ್ಡ್​ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ: ಆಹಾರ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ
ಉಮೇಶ್​ ಕತ್ತಿ
guruganesh bhat
| Edited By: |

Updated on:Feb 15, 2021 | 3:07 PM

Share

ಬೆಂಗಳೂರು: ಬಿ.ಪಿ.ಎಲ್ ಕಾರ್ಡ್​ನ ಮಾನದಂಡಗಳಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಈ ಹಿಂದೆ ಇದ್ದ ಮಾನದಂಡಗಳನ್ನೇ ಮುಂದುವರಿಸುತ್ತೇವೆ ಎಂದು ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ ನೀಡಿದ್ದಾರೆ.

ನಾನು ಸಚಿವನಾದ ಬಳಿಕ ಯಾವುದೇ ತಿದ್ದುಪಡಿ ಮಾಡಿಲ್ಲ. ಮುಂದೂ ಸಹ ಯಾವುದೇ ತಿದ್ದುಪಡಿ ಮಾಡುವುದಿಲ್ಲ. ಈಗ ಜಾರಿಯಲ್ಲಿರುವ ಮಾನದಂಡಗಳನ್ನೇ ಮುಂದುವರೆಸುತ್ತೇವೆ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಿವಿ, ಫ್ರಿಡ್ಜ್​, ವಾಹನಗಳನ್ನು ಹೊಂದಿರುವವರಿಗೆ ಬಿ.ಪಿ.ಎಲ್ ಕಾರ್ಡ್​ ಸ್ಥಗಿತಗೊಳಿಸಿವುದಾಗಿ ಆಹಾರ ಸಚಿವ ಉಮೇಶ್ ಕತ್ತಿ ಕಳೆದ ವಾರ ಹೇಳಿದ್ದರು. ಆದರೆ ಇದಕ್ಕೆ ಸ್ವಪಕ್ಷೀಯ ನಾಯಕರೂ, ಹಿಂದಿನ ಆಹಾರ ಸಚಿವ ಯುಟಿ ಖಾದದ್ ಸೇರಿದಂತೆ ಎಲ್ಲೆಡೆಯಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಆಹಾರ ಸಚಿವ ಉಮೇಶ್ ಕತ್ತಿ ಈ ಸ್ಪಷ್ಟನೆ ನೀಡಿದ್ದಾರೆ.

Food Minister Umesh katti

ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ

ಈ ಮೊದಲು ಆಹಾರ ಸಚಿವರು ಹೇಳಿದ್ದೇನು? 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು, ಮನೆಯಲ್ಲಿ ಟಿವಿ, ಬೈಕ್ ಹಾಗೂ ಫ್ರಿಡ್ಜ್ ಹೊಂದಿರುವವರು BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಪ್ರತಿಕ್ರಿಯಿಸಿದ್ದರು. ಈ ಎಲ್ಲಾ ವಸ್ತುಗಳನ್ನು ನಿಮ್ಮ ಮನೆಯಲ್ಲಿ ಹೊಂದಿದ್ದು ಜೊತೆಗೆ BPL ಕಾರ್ಡ್​ ಹೊಂದಿದ್ದರೆ ಕೂಡಲೇ ಕಾರ್ಡ್​ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಹೇಳಿದ್ದರು.

ಅಲ್ಲದೇ, ಫ್ರಿಡ್ಜ್ ಹೊಂದಿರುವವರು BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ ಎಂದು ಹೇಳಿದ್ದ ಅವರು, ಈ ಎಲ್ಲಾ ವಸ್ತುಗಳನ್ನು ನಿಮ್ಮ ಮನೆಯಲ್ಲಿ ಹೊಂದಿದ್ದು ಜೊತೆಗೆ BPL ಕಾರ್ಡ್​ ಹೊಂದಿದ್ದರೆ ಕೂಡಲೇ ಕಾರ್ಡ್​ ಹಿಂದಿರುಗಿಸಿ ಎಂದು ಕಳೆದ ವಾರ ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ:  ಮನೆಯಲ್ಲಿ TV, ಬೈಕ್, ಫ್ರಿಡ್ಜ್ ಹೊಂದಿರುವವರು.. BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ -ಸಚಿವ ಉಮೇಶ್​ ಕತ್ತಿ

ಕೇಳಿಬಂದಿತ್ತು ಸ್ವಪಕ್ಷೀಯರಿಂದಲೇ ಅಪಸ್ವರ ಸಾಮಾನ್ಯವಾಗಿ ಟಿವಿ, ಫ್ರಿಡ್ಜ್ ಎಲ್ಲರ ಮನೆಯಲ್ಲೂ ಇರುತ್ತದೆ. ಸಾಲ ಮಾಡಿಯಾದರೂ ಜನ ಬೈಕ್ ತೆಗೆದುಕೊಳ್ಳುತ್ತಾರೆ. ಹೀಗಾಗಿ ಇಂತಹ ನಿಯಮಗಳನ್ನು ಮಾಡಿದರೆ ತಪ್ಪಾಗುತ್ತದೆ. ಸರ್ಕಾರದ ಯೋಜನೆ ಜನರಿಗೆ ತಲುಪುದಕ್ಕೆ ಟಿವಿ ಬೇಕು. ಟಿವಿಯೇ ಇರಬಾರದು ಎನ್ನುವುದನ್ನು ನಾವು ವಿರೋಧಿಸುತ್ತೇವೆ. ನಿಜವಾದ ಬಡವರನ್ನು ಆರ್ಥಿಕ ಮಟ್ಟದಿಂದ ಗುರುತಿಸಬೇಕು ಎಂದು ಬಿಜೆಪಿ ನಾಯಕ ಸೋಮಶೇಖರ ರೆಡ್ಡಿ ಗರಂ ಆಗಿದ್ದರು.

ಮನೆ ಮನೆ ಸಮೀಕ್ಷೆ ನಡೆಸಿದರೆ ನಕಲಿ ಬಿಪಿಎಲ್ ಕಾರ್ಡ್​ದಾರರನ್ನು ಪತ್ತೆ ಮಾಡಬಹುದು. ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆಯಾಗಿರುವುದು ಗೊತ್ತಿಲ್ಲ. ಇಂತಹ ನಿಯಮಗಳ ವಿರುದ್ಧ ಹೋರಾಟ ಮಾಡುತ್ತೇವೆ. ನಾವು ಬಿಜೆಪಿಯವರಾದರೂ ಸಹ ಹೋರಾಟ ಮಾಡುತ್ತೇವೆ. ಯಾರೇ ಆಗಲಿ ಸ್ವಂತ ನಿರ್ಧಾರ ಜನರ ಮೇಲೆ ಹೇರಬಾರದು. ಸ್ವಂತ ನಿರ್ಧಾರಗಳು ತೆಗೆದುಕೊಂಡರೆ ಈ ರೀತಿಯಾಗುತ್ತದೆ. ಸಿಎಂ ಗಮನಕ್ಕೆ ತರದೆ ನಿರ್ಧಾರ ಕೈಗೊಂಡರೆ ತಪ್ಪಾಗುತ್ತದೆ. ಸಚಿವರ ನಿರ್ಧಾರ ಬಡವರ ಮೇಲೆ ಪರಿಣಾಮ ಬೀರುತ್ತದೆ ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸೋಮಶೇಖರ್ ರೆಡ್ಡಿ ಖಾರವಾಗಿದ್ದರು.

ಇದನ್ನೂ ಓದಿ BPL card holders | ಸರ್ಕಾರದ ಯೋಜನೆ ಜನರಿಗೆ ತಲುಪುದಕ್ಕೆ TV ಬೇಕು.. TVಯೇ ಇರಬಾರದು ಅಂದ್ರೆ ಹೇಗೆ? ಉಮೇಶ್ ಕತ್ತಿಗೆ ಸೋಮಶೇಖರ್ ರೆಡ್ಡಿ ಪ್ರಶ್ನೆ

Published On - 2:34 pm, Mon, 15 February 21

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ