AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಪುನರಾರಂಭ ಜನವರಿ 1ಕ್ಕೆ ಫಿಕ್ಸ್; ಯಾವುದೇ ಬದಲಾವಣೆ ಇಲ್ಲ.. ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಶಾಲಾ-ಕಾಲೇಜು ಆರಂಭಕ್ಕೆ ಯಾವುದೇ ಸಮಸ್ಯೆ ಇಲ್ಲ. ಮುಂಜಾಗ್ರತಾ ಕ್ರಮಗಳೊಂದಿಗೆ ಆರಂಭಿಸಲು ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಜನವರಿ1ರಿಂದಲೇ ಶಾಲಾ-ಕಾಲೇಜು ಪ್ರಾರಂಭ ಮಾಡೋಣ ಎಂದು ಸಂಪುಟ ಸಭೆಯಲ್ಲಿ ಸಿಎಂ BSY ಸಚಿವ ಸುರೇಶ್ ಕುಮಾರ್ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದ್ದಾರೆ.

ಶಾಲೆ ಪುನರಾರಂಭ ಜನವರಿ 1ಕ್ಕೆ ಫಿಕ್ಸ್; ಯಾವುದೇ ಬದಲಾವಣೆ ಇಲ್ಲ.. ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಆಯೇಷಾ ಬಾನು
| Edited By: |

Updated on:Dec 30, 2020 | 12:30 PM

Share

ಬೆಂಗಳೂರು: ಶಾಲಾ-ಕಾಲೇಜು ಪ್ರಾರಂಭದ ಬಗ್ಗೆ ಇಂದು ನಡೆದ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಶಾಲೆ ಆರಂಭದ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಸದ್ಯ ಶಾಲಾ-ಕಾಲೇಜು ಆರಂಭಕ್ಕೆ ಯಾವುದೇ ಸಮಸ್ಯೆ ಇಲ್ಲ. ಮುಂಜಾಗ್ರತಾ ಕ್ರಮಗಳೊಂದಿಗೆ ಆರಂಭಿಸಲು ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಜನವರಿ1ರಿಂದಲೇ ಶಾಲಾ-ಕಾಲೇಜು ಪ್ರಾರಂಭ ಮಾಡೋಣ ಎಂದು ಸಂಪುಟ ಸಭೆಯಲ್ಲಿ ಸಿಎಂ BSY ಸಚಿವ ಸುರೇಶ್ ಕುಮಾರ್ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದ್ದಾರೆ.

ಇನ್ನು ಸಭೆಯಲ್ಲಿ ಹಾಜರಿದ್ದ ಆರೋಗ್ಯ ಸಚಿವರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಬ್ರಿಟನ್ ವೈರಸ್ ವಿಚಾರದಲ್ಲಿ ಸಮಸ್ಯೆ ಆದ್ರೆ ತಜ್ಞರ ಸಲಹೆ ಪಡೆಯೋಣ ಸದ್ಯಕ್ಕೆ ದಿನಾಂಕ ಬದಲಾಯಿಸೋದು ಬೇಡ ಎಂದು ಸಭೆಯಲ್ಲಿ ಸಂಪುಟದ ಸದಸ್ಯರು ಸಚಿವರ ಸಲಹೆ ಒಪ್ಪಿಕೊಂಡಿದ್ದಾರೆ.

ಶಿಕ್ಷಣ, ಆರೋಗ್ಯ ಇಲಾಖೆಗೆ ಸಿಎಂ ಖಡಕ್ ಸೂಚನೆ ಜನವರಿ 1ರಿಂದ ಶಾಲಾ-ಕಾಲೇಜು ಪುನಾರಂಭಗೊಳ್ಳುತ್ತಿದೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಗೆ ಸಿಎಂ ಖಡಕ್ ಸೂಚನೆ ಕೊಟ್ಟಿದ್ದಾರೆ. ಕೊರೊನಾ ಮಾರ್ಗಸೂಚಿ ಸರಿಯಾಗಿ ಪಾಲನೆ ಆಗಬೇಕು. ನಿಯಮ ಪಾಲನೆಗೆ ಅಗತ್ಯ ಕ್ರಮವಹಿಸುವಂತೆ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಜತೆ ಸೇರಿ ಕೆಲಸ ಮಾಡಿ. ಶಾಲಾ-ಕಾಲೇಜು ಪ್ರಾರಂಭದಲ್ಲಿ ಸಮಸ್ಯೆಯಾಗಬಾರದು. ಜಿಲ್ಲಾ ಉಸ್ತುವಾರಿ ಮಂತ್ರಿಗಳು ಈ ಬಗ್ಗೆ ನಿಗಾವಹಿಸಿ ಎಂದು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಿಎಸ್‌ವೈ ಅಧಿಕಾರಿಗಳು, ಸಚಿವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

RTE ದುರ್ಬಳಕೆ: ಖಾಸಗಿ ಶಾಲೆಗಳಿಂದ ಸರ್ಕಾರಕ್ಕೆ ಮೋಸ.. YouTube ನಲ್ಲಿ ವಂಚನೆ ಬಹಿರಂಗ!

Published On - 12:36 pm, Mon, 28 December 20

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್