Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಪುನರಾರಂಭ ಜನವರಿ 1ಕ್ಕೆ ಫಿಕ್ಸ್; ಯಾವುದೇ ಬದಲಾವಣೆ ಇಲ್ಲ.. ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಶಾಲಾ-ಕಾಲೇಜು ಆರಂಭಕ್ಕೆ ಯಾವುದೇ ಸಮಸ್ಯೆ ಇಲ್ಲ. ಮುಂಜಾಗ್ರತಾ ಕ್ರಮಗಳೊಂದಿಗೆ ಆರಂಭಿಸಲು ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಜನವರಿ1ರಿಂದಲೇ ಶಾಲಾ-ಕಾಲೇಜು ಪ್ರಾರಂಭ ಮಾಡೋಣ ಎಂದು ಸಂಪುಟ ಸಭೆಯಲ್ಲಿ ಸಿಎಂ BSY ಸಚಿವ ಸುರೇಶ್ ಕುಮಾರ್ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದ್ದಾರೆ.

ಶಾಲೆ ಪುನರಾರಂಭ ಜನವರಿ 1ಕ್ಕೆ ಫಿಕ್ಸ್; ಯಾವುದೇ ಬದಲಾವಣೆ ಇಲ್ಲ.. ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Dec 30, 2020 | 12:30 PM

ಬೆಂಗಳೂರು: ಶಾಲಾ-ಕಾಲೇಜು ಪ್ರಾರಂಭದ ಬಗ್ಗೆ ಇಂದು ನಡೆದ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಶಾಲೆ ಆರಂಭದ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಸದ್ಯ ಶಾಲಾ-ಕಾಲೇಜು ಆರಂಭಕ್ಕೆ ಯಾವುದೇ ಸಮಸ್ಯೆ ಇಲ್ಲ. ಮುಂಜಾಗ್ರತಾ ಕ್ರಮಗಳೊಂದಿಗೆ ಆರಂಭಿಸಲು ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಜನವರಿ1ರಿಂದಲೇ ಶಾಲಾ-ಕಾಲೇಜು ಪ್ರಾರಂಭ ಮಾಡೋಣ ಎಂದು ಸಂಪುಟ ಸಭೆಯಲ್ಲಿ ಸಿಎಂ BSY ಸಚಿವ ಸುರೇಶ್ ಕುಮಾರ್ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದ್ದಾರೆ.

ಇನ್ನು ಸಭೆಯಲ್ಲಿ ಹಾಜರಿದ್ದ ಆರೋಗ್ಯ ಸಚಿವರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ. ಬ್ರಿಟನ್ ವೈರಸ್ ವಿಚಾರದಲ್ಲಿ ಸಮಸ್ಯೆ ಆದ್ರೆ ತಜ್ಞರ ಸಲಹೆ ಪಡೆಯೋಣ ಸದ್ಯಕ್ಕೆ ದಿನಾಂಕ ಬದಲಾಯಿಸೋದು ಬೇಡ ಎಂದು ಸಭೆಯಲ್ಲಿ ಸಂಪುಟದ ಸದಸ್ಯರು ಸಚಿವರ ಸಲಹೆ ಒಪ್ಪಿಕೊಂಡಿದ್ದಾರೆ.

ಶಿಕ್ಷಣ, ಆರೋಗ್ಯ ಇಲಾಖೆಗೆ ಸಿಎಂ ಖಡಕ್ ಸೂಚನೆ ಜನವರಿ 1ರಿಂದ ಶಾಲಾ-ಕಾಲೇಜು ಪುನಾರಂಭಗೊಳ್ಳುತ್ತಿದೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಗೆ ಸಿಎಂ ಖಡಕ್ ಸೂಚನೆ ಕೊಟ್ಟಿದ್ದಾರೆ. ಕೊರೊನಾ ಮಾರ್ಗಸೂಚಿ ಸರಿಯಾಗಿ ಪಾಲನೆ ಆಗಬೇಕು. ನಿಯಮ ಪಾಲನೆಗೆ ಅಗತ್ಯ ಕ್ರಮವಹಿಸುವಂತೆ ತಿಳಿಸಿದ್ದಾರೆ.

ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಜತೆ ಸೇರಿ ಕೆಲಸ ಮಾಡಿ. ಶಾಲಾ-ಕಾಲೇಜು ಪ್ರಾರಂಭದಲ್ಲಿ ಸಮಸ್ಯೆಯಾಗಬಾರದು. ಜಿಲ್ಲಾ ಉಸ್ತುವಾರಿ ಮಂತ್ರಿಗಳು ಈ ಬಗ್ಗೆ ನಿಗಾವಹಿಸಿ ಎಂದು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬಿಎಸ್‌ವೈ ಅಧಿಕಾರಿಗಳು, ಸಚಿವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

RTE ದುರ್ಬಳಕೆ: ಖಾಸಗಿ ಶಾಲೆಗಳಿಂದ ಸರ್ಕಾರಕ್ಕೆ ಮೋಸ.. YouTube ನಲ್ಲಿ ವಂಚನೆ ಬಹಿರಂಗ!

Published On - 12:36 pm, Mon, 28 December 20

ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?