AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ; ಯಾವುದೇ ಇಲಾಖೆ ಅಧಿಕಾರಿಗಳು ತೊಂದರೆ ಮಾಡಬಾರದು: ಬಿ.ಸಿ. ಪಾಟೀಲ್

ಬಿತ್ತನೆ ಕಾರ್ಯಕ್ಕಾಗಿ ಪೊಲೀಸ್ ಆಗಲೀ ಯಾವುದೇ ಇಲಾಖೆಯಾಗಲಿ ತೊಂದರೆ ಮಾಡಬಾರದು. ರಸಗೊಬ್ಬರ ಅಂಗಡಿಗಳಿಗಾಗಲೀ, ರೈತ ಸಂಪರ್ಕ ಕೇಂದ್ರಗಳಿಗಾಗಲೀ, ಬಿತ್ತನೆ ಕಾರ್ಯಕ್ಕಾಗಲೀ ಯಾರೂ ಸಹ ತೊಂದರೆಯನ್ನುಂಟು ಮಾಡಬಾರದು - ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚನೆ

ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ; ಯಾವುದೇ ಇಲಾಖೆ ಅಧಿಕಾರಿಗಳು ತೊಂದರೆ ಮಾಡಬಾರದು: ಬಿ.ಸಿ. ಪಾಟೀಲ್
ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ; ಯಾವುದೇ ಇಲಾಖೆ ಅಧಿಕಾರಿಗಳು ತೊಂದರೆ ಮಾಡಬಾರದು: ಬಿ.ಸಿ. ಪಾಟೀಲ್
ಸಾಧು ಶ್ರೀನಾಥ್​
|

Updated on:Apr 23, 2021 | 2:36 PM

Share

ಬೆಂಗಳೂರು: ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ. ದೈನಂದಿನ ಕೃಷಿ ಚಟುವಟಿಕೆಗಳಿಗೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ, ಜನತಾ ಕರ್ಫ್ಯೂ ಅನ್ವಯಿಸುವುದಿಲ್ಲ. ಯಾವುದೇ ಇಲಾಖೆ ಅಧಿಕಾರಿಗಳು ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಎಲ್ಲಾ ಇಲಾಖಾಧಿಕಾರಿಗಳು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಕರಿಸಬೇಕು. ಹೂವು, ಹಣ್ಣು,‌ ದವಸ ಧಾನ್ಯ ಮಾರುಕಟ್ಟೆಗೆ ಸಾಗಿಸಲು ಆರ್‌ಟಿಒ ಸೇರಿದಂತೆ ಯಾರೂ ತೊಂದರೆ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಬಿತ್ತನೆ ಕಾರ್ಯಕ್ಕಾಗಿ ಪೊಲೀಸ್ ಆಗಲೀ ಯಾವುದೇ ಇಲಾಖೆಯಾಗಲಿ ತೊಂದರೆ ಮಾಡಬಾರದು. ರಸಗೊಬ್ಬರ ಅಂಗಡಿಗಳಿಗಾಗಲೀ, ರೈತ ಸಂಪರ್ಕ ಕೇಂದ್ರಗಳಿಗಾಗಲೀ, ಬಿತ್ತನೆ ಕಾರ್ಯಕ್ಕಾಗಲೀ ಯಾರೂ ಸಹ ತೊಂದರೆಯನ್ನುಂಟು ಮಾಡಬಾರದು. ಕೆಲವು ಕಡೆ ಕೃಷಿ ಪರಿಕರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿರುವುದು ತಪ್ಪು. ಎಲ್ಲಾ ಇಲಾಖೆಗಳು, ಎಲ್ಲಾ ಇಲಾಖಾಧಿಕಾರಿಗಳು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಕಾರ ನೀಡಬೇಕು. ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಹೇರಬಾರದು. ಸುರಕ್ಷತೆ ಮತ್ತು‌ ಸಾಮಾಜಿಕ ಅಂತರದ ಜೊತೆಗೆ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಸಚಿವ ಪಾಟೀಲ್ ಸೂಚಿಸಿದ್ದಾರೆ. (no covid 19 restrictions on agriculturists and related activities in karnataka says agriculture minister bc patil)

ಇದನ್ನೂ ಓದಿ: ಆಯಾಸವಿಲ್ಲದೆ ಆದಾಯ ತರುವ ಹುಣಸೆ ಬೆಳೆಗೆ ರಾಜ್ಯದಾದ್ಯಂತ ಉತ್ತಮ ಬೇಡಿಕೆ

Published On - 2:13 pm, Fri, 23 April 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ