ಇ-ಖಾತೆ ಪಡೆಯಲು ಯಾವುದೇ ಡೆಡ್​ಲೈನ್ ಇಲ್ಲ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಮಾಲೀಕರು ಇ-ಖಾತಾ ಪಡೆಯುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಗೊಂದಲಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಮನೆಯಿಂದಲೇ ಜನರು ಇ-ಖಾತೆ ಪಡೆಯಬಹುದು. ಇದಕ್ಕೆ ಯಾವುದೇ ಡೆಡ್​ಲೈನ್ ಇಲ್ಲ ಎಂದಿದ್ದಾರೆ.

ಇ-ಖಾತೆ ಪಡೆಯಲು ಯಾವುದೇ ಡೆಡ್​ಲೈನ್ ಇಲ್ಲ: ಸಚಿವ ಕೃಷ್ಣಭೈರೇಗೌಡ
ಇ-ಖಾತೆ ಪಡೆಯಲು ಯಾವುದೇ ಡೆಡ್​ಲೈನ್ ಇಲ್ಲ: ಸಚಿವ ಕೃಷ್ಣಭೈರೇಗೌಡ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 07, 2024 | 9:55 PM

ಬೆಂಗಳೂರು, ಅಕ್ಟೋಬರ್​ 07: ಖಾತೆ ಇಲ್ಲದೆಯೇ ನಿವೇಶನಗಳು ಮಾರಾಟ ಆಗುತ್ತಿವೆ. ಇದು ಮಧ್ಯವರ್ತಿಗಳಿಗೆ ಹೇಳಿ ಮಾಡಿಕೊಟ್ಟ ಬೆಳವಣಿಗೆ. ಖಾತೆ ಇಲ್ಲದ ಸೈಟ್​ಗಳಿಗೆ ಶಾಶ್ವತ ಪರಿಹಾರ ಕೊಡುತ್ತೇವೆ. ಇದಕ್ಕೆ ಯಾವುದೇ ಡೆಡ್​ಲೈನ್ ಇಲ್ಲ. ಯಾರು ಸಹ ಆತುರ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಸ್ಪಷ್ಟನೆ ನೀಡಿದ್ದಾರೆ. ತುರ್ತು ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಮಾಲೀಕರು ಇ-ಖಾತಾ ಪಡೆಯುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಗೊಂದಲಗಳಿವೆ. ಹೀಗಾಗಿ ಜನರ ಗೊಂದಲಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಕೆಲವು ಅನುಕೂಲತೆಗಳನ್ನ ನಮ್ಮ ಗಮನಕ್ಕೆ ತಂದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್​​ ಸೂಚನೆಯಂತೆ ಕೆಲ ಸರಳೀಕರಣ ಮಾಡಿದ್ದೇವೆ. ಎಆರ್​ಒ ಕಚೇರಿಯಲ್ಲಿ ಹೆಲ್ಪ್​ ಡೆಸ್ಕ್ ಮಾಡುತ್ತಿದ್ದೇವೆ. ಇ-ಖಾತೆಗೆ ಸಹಾಯ ಮಾಡುವುದು ಇವರ ಜವಾಬ್ದಾರಿ. ಇದು ಬಿಬಿಎಂಪಿ ವ್ಯಾಪ್ತಿಯವರಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದ್ದಾರೆ.

ಕೃಷ್ಣಭೈರೇಗೌಡ ಟ್ವೀಟ್ 

2-3 ದಿನಗಳೊಳಗೆ ಬೆಂಗಳೂರು ಒನ್​ಗೆ ಅಪ್ಲೋಡ್ ಮಾಡಲಿದ್ದೇವೆ. ಖಾತಾ ನಿರ್ವಹಣೆ ಬಹಳ ತೊಂದರೆ ಆಗಿದೆ. ಇದಕ್ಕೆ ಇ-ಖಾತೆ ಒಂದೇ ಶಾಶ್ವತ ಪರಿಹಾರ. ಮನೆಯಿಂದಲೇ ಜನರು ಇ-ಖಾತೆ ಪಡೆಯಬಹುದು. ಇದು ಪ್ರಾರಂಭಿಕವಾಗಿ ಸಮಸ್ಯೆ ಆಗಬಹುದು. ಬಳಿಕ‌ ಸಮಸ್ಯೆ ಬಗೆಹರಿಯುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಇ-ಖಾತಾ ಪಡೆಯುವುದು ಬಲು ಸುಲಭ: ಇಲ್ಲಿದೆ ಹಂತ ಹಂತದ ಮಾಹಿತಿ

ಹಿಂದುಳಿದ ವರ್ಗಗಳ ಆಯೋಗ ವರದಿ ಅಂಗೀಕಾರದ ಬಗ್ಗೆ ಚರ್ಚೆ ಆಗಿದೆ. ಸಮುದಾಯದ ಸ್ವಾಮೀಜಿಗಳು ಇದರ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ನಮ್ಮನ್ನ ಕರೆದು ಈ ಬಗ್ಗೆ ಚರ್ಚೆ ಮಾಡಿ ಎಂದಿದ್ದಾರೆ. ಈ ನಡುವೆ ಅಂಕಿ-ಅಂಶಗಳು ಸಹ ಸೋರಿಕೆ ಆಗಿವೆ ಅಂದಿದ್ದಾರೆ. ಕ್ಯಾಬಿನೆಟ್​ನಲ್ಲಿ ಮಂಡನೆ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ಕ್ಯಾಬಿನೆಟ್​ನಲ್ಲಿ ಚರ್ಚೆ ಮಾಡಿ ಮುಂದಿನ ನಿರ್ಧಾರ ಮಾಡುತ್ತೇವೆ. ವೈಜ್ಞಾನಿಕವಾಗಿ ಹೋಗೋಣ ಎಂದು ಸಿಎಂಗೆ ಹೇಳಿದ್ದೇನೆ. ಕೆಲ ಹಳ್ಳಿಗಳಲ್ಲಿ ಸರ್ವೇ ಸಮಸ್ಯೆ ಮಾಡಿದ್ದಾರೆ ಅಂತಿದ್ದಾರೆ. ರ್ಯಾಡಮ್ ಆಗಿ ತಗೊಂಡು ನೋಡಿದರೆ ಗೊತ್ತಾಗುತ್ತೆ. ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಚರ್ಚೆ ಆಗಲಿ. ಒಂದೇ ಬಾರಿ ವರದಿ ಜಾರಿ ಮಾಡಲ್ಲ. ಚರ್ಚೆಗೆ ಅವಕಾಶ ಇದ್ದೇ ಇದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು