AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ-ಖಾತೆ ಪಡೆಯಲು ಯಾವುದೇ ಡೆಡ್​ಲೈನ್ ಇಲ್ಲ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಮಾಲೀಕರು ಇ-ಖಾತಾ ಪಡೆಯುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಗೊಂದಲಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಮನೆಯಿಂದಲೇ ಜನರು ಇ-ಖಾತೆ ಪಡೆಯಬಹುದು. ಇದಕ್ಕೆ ಯಾವುದೇ ಡೆಡ್​ಲೈನ್ ಇಲ್ಲ ಎಂದಿದ್ದಾರೆ.

ಇ-ಖಾತೆ ಪಡೆಯಲು ಯಾವುದೇ ಡೆಡ್​ಲೈನ್ ಇಲ್ಲ: ಸಚಿವ ಕೃಷ್ಣಭೈರೇಗೌಡ
ಇ-ಖಾತೆ ಪಡೆಯಲು ಯಾವುದೇ ಡೆಡ್​ಲೈನ್ ಇಲ್ಲ: ಸಚಿವ ಕೃಷ್ಣಭೈರೇಗೌಡ
Sunil MH
| Edited By: |

Updated on: Oct 07, 2024 | 9:55 PM

Share

ಬೆಂಗಳೂರು, ಅಕ್ಟೋಬರ್​ 07: ಖಾತೆ ಇಲ್ಲದೆಯೇ ನಿವೇಶನಗಳು ಮಾರಾಟ ಆಗುತ್ತಿವೆ. ಇದು ಮಧ್ಯವರ್ತಿಗಳಿಗೆ ಹೇಳಿ ಮಾಡಿಕೊಟ್ಟ ಬೆಳವಣಿಗೆ. ಖಾತೆ ಇಲ್ಲದ ಸೈಟ್​ಗಳಿಗೆ ಶಾಶ್ವತ ಪರಿಹಾರ ಕೊಡುತ್ತೇವೆ. ಇದಕ್ಕೆ ಯಾವುದೇ ಡೆಡ್​ಲೈನ್ ಇಲ್ಲ. ಯಾರು ಸಹ ಆತುರ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಸ್ಪಷ್ಟನೆ ನೀಡಿದ್ದಾರೆ. ತುರ್ತು ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಮಾಲೀಕರು ಇ-ಖಾತಾ ಪಡೆಯುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಗೊಂದಲಗಳಿವೆ. ಹೀಗಾಗಿ ಜನರ ಗೊಂದಲಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಕೆಲವು ಅನುಕೂಲತೆಗಳನ್ನ ನಮ್ಮ ಗಮನಕ್ಕೆ ತಂದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್​​ ಸೂಚನೆಯಂತೆ ಕೆಲ ಸರಳೀಕರಣ ಮಾಡಿದ್ದೇವೆ. ಎಆರ್​ಒ ಕಚೇರಿಯಲ್ಲಿ ಹೆಲ್ಪ್​ ಡೆಸ್ಕ್ ಮಾಡುತ್ತಿದ್ದೇವೆ. ಇ-ಖಾತೆಗೆ ಸಹಾಯ ಮಾಡುವುದು ಇವರ ಜವಾಬ್ದಾರಿ. ಇದು ಬಿಬಿಎಂಪಿ ವ್ಯಾಪ್ತಿಯವರಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದ್ದಾರೆ.

ಕೃಷ್ಣಭೈರೇಗೌಡ ಟ್ವೀಟ್ 

2-3 ದಿನಗಳೊಳಗೆ ಬೆಂಗಳೂರು ಒನ್​ಗೆ ಅಪ್ಲೋಡ್ ಮಾಡಲಿದ್ದೇವೆ. ಖಾತಾ ನಿರ್ವಹಣೆ ಬಹಳ ತೊಂದರೆ ಆಗಿದೆ. ಇದಕ್ಕೆ ಇ-ಖಾತೆ ಒಂದೇ ಶಾಶ್ವತ ಪರಿಹಾರ. ಮನೆಯಿಂದಲೇ ಜನರು ಇ-ಖಾತೆ ಪಡೆಯಬಹುದು. ಇದು ಪ್ರಾರಂಭಿಕವಾಗಿ ಸಮಸ್ಯೆ ಆಗಬಹುದು. ಬಳಿಕ‌ ಸಮಸ್ಯೆ ಬಗೆಹರಿಯುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಇ-ಖಾತಾ ಪಡೆಯುವುದು ಬಲು ಸುಲಭ: ಇಲ್ಲಿದೆ ಹಂತ ಹಂತದ ಮಾಹಿತಿ

ಹಿಂದುಳಿದ ವರ್ಗಗಳ ಆಯೋಗ ವರದಿ ಅಂಗೀಕಾರದ ಬಗ್ಗೆ ಚರ್ಚೆ ಆಗಿದೆ. ಸಮುದಾಯದ ಸ್ವಾಮೀಜಿಗಳು ಇದರ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ನಮ್ಮನ್ನ ಕರೆದು ಈ ಬಗ್ಗೆ ಚರ್ಚೆ ಮಾಡಿ ಎಂದಿದ್ದಾರೆ. ಈ ನಡುವೆ ಅಂಕಿ-ಅಂಶಗಳು ಸಹ ಸೋರಿಕೆ ಆಗಿವೆ ಅಂದಿದ್ದಾರೆ. ಕ್ಯಾಬಿನೆಟ್​ನಲ್ಲಿ ಮಂಡನೆ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ಕ್ಯಾಬಿನೆಟ್​ನಲ್ಲಿ ಚರ್ಚೆ ಮಾಡಿ ಮುಂದಿನ ನಿರ್ಧಾರ ಮಾಡುತ್ತೇವೆ. ವೈಜ್ಞಾನಿಕವಾಗಿ ಹೋಗೋಣ ಎಂದು ಸಿಎಂಗೆ ಹೇಳಿದ್ದೇನೆ. ಕೆಲ ಹಳ್ಳಿಗಳಲ್ಲಿ ಸರ್ವೇ ಸಮಸ್ಯೆ ಮಾಡಿದ್ದಾರೆ ಅಂತಿದ್ದಾರೆ. ರ್ಯಾಡಮ್ ಆಗಿ ತಗೊಂಡು ನೋಡಿದರೆ ಗೊತ್ತಾಗುತ್ತೆ. ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಚರ್ಚೆ ಆಗಲಿ. ಒಂದೇ ಬಾರಿ ವರದಿ ಜಾರಿ ಮಾಡಲ್ಲ. ಚರ್ಚೆಗೆ ಅವಕಾಶ ಇದ್ದೇ ಇದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್