AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ಚಾಲಕರ ಡಬಲ್ ಡ್ಯೂಟಿಗೆ ಬ್ರೇಕ್ ಹಾಕಿದ KSRTC; ವಿಶ್ರಾಂತಿ ಕಡ್ಡಾಯ

ಕೆಎಸ್​ಆರ್​ಟಿಸಿ ಬಸ್​ ಚಾಲಕರಿಗೆ ಈ ಹಿಂದೆ ಡಬಲ್​ ಡ್ಯೂಟಿ ಮಾಡುವ ಅನಿವಾರ್ಯವಿತ್ತು. ಇದರಿಂದಾಗಿ ಬಸ್ ಅಪಘಾತಕ್ಕೀಡಾಗುತ್ತಿದ್ದವು. ಇಂತಹ ಪ್ರಕರಣಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕೆಎಸ್​ಆರ್​ಟಿಸಿ ಬಸ್ ಚಾಲಕರಿಗೆ ಹೆಚ್ಚುವರಿ ಡ್ಯೂಟಿಯಿಂದ ಮುಕ್ತಿ ನೀಡಲಾಗಿದೆ. ಅಲ್ಲದೆ, ವಿಶ್ರಾಂತಿ ಕಡ್ಡಾಯ ಮಾಡಲಾಗಿದೆ. ರಾತ್ರಿ ಮತ್ತು ದೂರದ ಪ್ರಯಾಣದ ವೇಳೆ ಹೆಚ್ಚುವರಿ ಡ್ಯೂಟಿ ಮಾಡಿದರೆ ನಾಲ್ಕೈದು ಗಂಟೆ ವಿಶ್ರಾಂತಿಗೆ ಅವಕಾಶ ನೀಡುವಂತೆ ಆದೇಶಿಸಲಾಗಿದೆ.

ಬಸ್ ಚಾಲಕರ ಡಬಲ್ ಡ್ಯೂಟಿಗೆ ಬ್ರೇಕ್ ಹಾಕಿದ KSRTC; ವಿಶ್ರಾಂತಿ ಕಡ್ಡಾಯ
ಕೆಎಸ್​ಆರ್​ಟಿಸಿ ಬಸ್ ಚಾಲಕರಿಗೆ ಹೆಚ್ಚುವರಿ ಡ್ಯೂಟಿಯಿಂದ ಮುಕ್ತಿ ನೀಡಲಾಗಿದೆ. ಅಲ್ಲದೆ, ವಿಶ್ರಾಂತಿ ಕಡ್ಡಾಯ ಮಾಡಲಾಗಿದೆ.
ಕಿರಣ್​ ಸೂರ್ಯ
| Edited By: Rakesh Nayak Manchi|

Updated on: Mar 28, 2024 | 8:54 AM

Share

ಬೆಂಗಳೂರು, ಮಾ.28: ಕೆಎಸ್​ಆರ್​ಟಿಸಿ (KSRTC) ಬಸ್​ ಚಾಲಕರು ಹೆಚ್ಚುವರಿ ಡ್ಯೂಟಿ ಮಾಡುತ್ತಿದ್ದ ಹಿನ್ನೆಲೆ ಅಪಘಾತ ಪ್ರಕರಣಗಳು ನಡೆಯುತ್ತಿದ್ದವು. ಇದಕ್ಕೆ ಕಾರಣ ಹೆಚ್ಚುವರಿ ಡ್ಯೂಟಿ ಮತ್ತು ವಿಶ್ರಾಂತಿ ಇಲ್ಲದೇ ಇರುವುದು. ಇದೇ ಕಾರಣಕ್ಕೆ ಮಹತ್ವದ ನಿರ್ಧಾರ ಕೈಗೊಂಡ ಕೆಎಸ್​ಆರ್​ಟಿಸಿ, ಬಸ್​ ಚಾಲಕರಿಗೆ ಡಬಲ್ ಡ್ಯೂಟಿಯಿಂದ ಮುಕ್ತಿ ನೀಡಿದೆ. ಅಲ್ಲದೆ, ವಿಶ್ರಾಂತಿ ಪಡೆಯುವುದು ಕಡ್ಡಾಯ ಎಂದು ಆದೇಶಿಸಲಾಗಿದೆ.

ಇಂದಿನಿಂದ ರಾತ್ರಿ ಮತ್ತು ದೂರದ ಪ್ರಯಾಣದ ನಂತರ ಚಾಲಕರು ವಿಶ್ರಾಂತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಎಂಟು ಗಂಟೆಗಳಿಗಿಂತ ಹೆಚ್ಚು ಡ್ಯೂಟಿ ಮಾಡಿಸುವಂತಿಲ್ಲ. 8 ಗಂಟೆಗಿಂತ ಅಧಿಕ ಮತ್ತು ರಾತ್ರಿ ವೇಳೆ ಹೆಚ್ಚುವರಿ ಡ್ಯೂಟಿ ಮಾಡಿದರೆ ನಾಲ್ಕೈದು ಗಂಟೆಗಳ ಕಾಲ ವಿಶ್ರಾಂತಿಗೆ ಅವಕಾಶ ನೀಡಬೇಕು. ವಾರದಲ್ಲಿ ಕೆಲಸದ ಅವಧಿ 48 ಗಂಟೆ ದಾಟುವಂತಿಲ್ಲ ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; ಸೈಕಲ್ ಸವಾರ ಸ್ಥಳದಲ್ಲೇ ಸಾವು

ಕೆಎಸ್​ಆರ್​ಟಿಸಿ ಬಸ್​ಗಳಿಂದ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಏನೆಂಬುದನ್ನು ಪತ್ತೆಹಚ್ಚಲು ಸಮಿತಿ ರಚನೆ ಮಾಡಲಾಗಿತ್ತು. ಅದರಂತೆ ಡಬಲ್ ಡ್ಯೂಟಿ ಮತ್ತು ರಾತ್ರಿ ವಿಶ್ರಾಂತಿಯನ್ನು ನೀಡದಿರುವುದರಿಂದ ನಿದ್ದೆಗೆಟ್ಟು ಬಸ್ ಚಲಾಯಿಸಲು ಸಾಧ್ಯವಾಗದೆ ಅಪಘಾತಗಳು ಸಂಭವಿಸುತ್ತಿವೆ ಎಂದು ತಿಳಿದುಬಂದಿದೆ. ಈ ಸಂಬಂಧ ಸಮಿತಿಯು ಕೆಎಸ್​ಆರ್​ಟಿಸಿಗೆ ವರದಿ ಸಲ್ಲಿಸಿತ್ತು.

ಇದರ ಬೆನ್ನಲ್ಲೇ, ವರದಿ ಆಧರಿಸಿ ಕೆಎಸ್​ಆರ್​ಟಿಸಿ ಬಸ್ ಚಾಲಕರಿಗೆ ಡಬಲ್​ ಡ್ಯೂಟಿಗೆ ಬ್ರೇಕ್ ಹಾಕಿ ವಿಶ್ರಾಂತಿಗೆ ಅವಕಾಶ ನೀಡಲಾಗಿದೆ. ಇದರಿಂದ ಕೆಎಸ್ಆರ್​ಟಿಸಿ ಬಸ್​ಗಳ ಅಪಘಾತಗಳು ತಪ್ಪುತ್ತವೆ. ನೂರಾರು ಅಮಾಯಕರ ಪ್ರಾಣ ಉಳಿಸಲು ಸಹಾಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ