AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಸಿಎಂ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ: ಶಾಸಕ ಬಸವರಾಜು ಶಿವಗಂಗಾ

ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಡಿಮ್ಯಾಂಡ್ ಮೇಲೆ ಡಿಮ್ಯಾಂಡ್​ ಕೇಳಿಬರ್ತಿದೆ. ಒಂದೊಂದೇ ಸಮುದಾಯಗಳು ತಮ್ಮ ದಾಳವನ್ನ ಉರುಳಿಸ್ತಿವೆ. ನಮ್ಮ ಸಮಯದಾಯಕ್ಕೂ ಸಿಎಂ ಮಾಡಿ, ನಮ್ಮ ಸಮಯದಾಯಕ್ಕೂ ಸಿಎಂ ಮಾಡಿ ಅಂತಾ ಮುಗಿಬಿದ್ದಿದ್ದಾರೆ. ಇದರ ಮಧ್ಯೆ ಈ ಬಾರಿಯೇ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಅದರಲ್ಲಿ ಯಾವುದೇ ಸಂಶವಿಲ್ಲ ಎಂದು ಶಾಸಕ ಬಸವರಾಜು ವಿ ಶಿವಗಂಗಾ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಸಿಎಂ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ: ಶಾಸಕ ಬಸವರಾಜು ಶಿವಗಂಗಾ
ಡಿಕೆ ಶಿವಕುಮಾರ್ ಸಿಎಂ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ: ಶಾಸಕ ಬಸವರಾಜು ಶಿವಗಂಗಾ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Jun 28, 2024 | 6:58 PM

Share

ದಾವಣಗೆರೆ, ಜೂನ್ 28: ಈ ಬಾರಿಯೇ ಡಿಕೆ ಶಿವಕುಮಾರ್ (DK Shivakumar) ಸಿಎಂ ಆಗುತ್ತಾರೆ ಯಾವುದೇ ಸಂಶವಿಲ್ಲ ಎಂದು ಶಾಸಕ ಬಸವರಾಜು ವಿ ಶಿವಗಂಗಾ (Basavaraju V Shivaganga) ಮತ್ತೆ ಡಿಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸಿಎಂ ಹತ್ತು ಜನರನ್ನ ಮಾಡಲಿ ಆದರೆ ಡಿಕೆ ಶಿವಕುಮಾರ್ ಅವರನ್ನ ಮೊದಲು ಸಿಎಂ ಮಾಡಬೇಕು. ಡಿಕೆ ಶಿವಕುಮಾರ್ ಅವರ ಸಂಘಟನೆಯಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು. ಅವರೇ ಸಿಎಂ ಆಗಬೇಕಿತ್ತು, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಡಿಸಿಎಂ ಆಗಿದ್ದಾರೆ ಎಂದಿದ್ದಾರೆ.

ಜಾತಿಗೊಂದು ಡಿಸಿಎಂ ಮಾಡುವುದಾದರೆ ನಮ್ಮ ಅಭ್ಯಂತರವಿಲ್ಲ ಆದರೆ ಡಿಕೆ ಶಿವಕುಮಾರ್​ ಅನ್ನು ಸಿಎಂ ಮಾಡಿ ನಂತರ ಡಿಸಿಎಂಗಳನ್ನ ಒಂದು ಡಜನ್ ಮಾಡಲಿ. ಅನೇಕ ಶಾಸಕರ ಬೆಂಬಲ ಡಿಕೆ ಶಿವಕುಮಾರ್​ ಅವರಿಗೆ ಇದೇ ಶಾಸಕರ ಹೆಸರು ಪ್ರಸ್ತಾಪ ಮಾಡಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಮುಖ್ಯಮಂತ್ರಿ

ಎಲ್ಲಾ ಜಾತಿಯವರು ಕಾಂಗ್ರೆಸ್​ಗೆ ಮತ ಹಾಕಿದ್ದಾರೆ ಹಾಗಂತ ಜಾತಿಗೊಂದು ಡಿಸಿಎಂ ಹುದ್ದೆ ನೀಡಲು ಸಾಧ್ಯವೆ? ರಾಜ್ಯದ ಎಲ್ಲಾ ಸಮುದಾಯದ ಪರವಾಗಿ ಸಮರ್ಥ ನಾಯಕ ಎಂಬ ಕಾರಣಕ್ಕೆ ಡಿಕೆ ಶಿವಕುಮಾರ್​ ಅವರನ್ನ ಡಿಸಿಎಂ ಮಾಡಿರುವುದು. ಡಿಸಿಎಂ ಹುದ್ದೆ ಬಗ್ಗೆ ಯಾರು ಮಾತನಾಡಬಾದೆಂದು ಹೈಕಮಾಂಡ್ ಹೇಳಿದೆ. ಹಿರಿಯರೇ ಈ ರೀತಿ ಹೇಳಿಕೆ ನೀಡುವಾಗ ನಾವು ಅವರನ್ನೇ ಪಾಲಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಎಲ್ಲಾ ಸ್ವಾಮೀಜಿಗಳು ಮಾತನಾಡುತ್ತಿದ್ದಾರೆ, ಇದು ಸರಿ ಅಲ್ಲ: ಶಾಸಕ ಲಕ್ಷ್ಮಣ ಸವದಿ

ಹುಬ್ಬಳ್ಳಿ ಏರ್​ಪೋರ್ಟ್​ನಲ್ಲಿ ಕಾಂಗ್ರೆಸ್​ ಶಾಸಕ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದು, ಎಲ್ಲದಕ್ಕೂ ಹೈಕಮಾಂಡ್ ಇದೆ, ಇದು ಸ್ವಾಮೀಜಿಗಳ ಕೆಲಸವಲ್ಲ. ಎಲ್ಲಾ ಸ್ವಾಮೀಜಿಗಳು ಮಾತನಾಡುತ್ತಿದ್ದಾರೆ, ಇದು ಸರಿ ಅಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ವಾಮೀಜಿಗಳು ಹೇಳುತ್ತಿರುವುದರ ಹಿಂದೆ ಬಿಜೆಪಿ ನಾಯಕರ ಕೈವಾಡ ಇರಬಹುದು: ಎನ್ ಚಲುವರಾಯಸ್ವಾಮಿ

ಹೈಕಮಾಂಡ್​ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಕಾಂಗ್ರೆಸ್​ನಲ್ಲಿ ಸರಿ ಇಲ್ಲ ಎಂದು ಬಿಜೆಪಿಗರು ಹುಟ್ಟು ಹಾಕುತ್ತಿದ್ದಾರೆ. ಕಾಂಗ್ರೆಸ್ ಚೆನ್ನಾಗಿ ಕೆಲಸ ಮಾಡುತ್ತಿದೆ ಅಂತಾ ಅವರು ಕೇಳಲು ಆಗಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ