AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಗನ ಮದುವೆ ನೋಡಲು ಗೋವಾಗೆ ಬಂದವರಿಗೆ ಭಾರೀ ನಿರಾಸೆ.. ಗೋವಾ ಬೀಚುಗಳೇ ಗತಿ!

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಗನ ಮದುವೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭಾಗಿಯಾಗಲಿದ್ದಾರೆ. ಹೀಗಾಗಿ ಬೆಳಗಾವಿಯಿಂದ ಬಂದ ಜನ ಸಾಮಾನ್ಯರಿಗೆ, ಅಭಿಮಾನಿಗಳಿಗೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುಖಂಡರಿಗೆ ಗೋವಾದ ದಿ ಲೀಲಾ ಪ್ಯಾಲೇಸ್ ಹೋಟೆಲ್‌ ಒಳಗೆ ಹೋಗಲು ಅವಕಾಶ ನೀಡಲಾಗುತ್ತಿಲ್ಲ. ಹೀಗಾಗಿ ಮದುವೆಗೆ ಬಂದ ಮಂದಿ ಬೀಜ್​ನಲ್ಲಿ ಕಾಲ ಕಳೆಯುತ್ತಿದ್ದಾರೆ.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಗನ ಮದುವೆ ನೋಡಲು ಗೋವಾಗೆ ಬಂದವರಿಗೆ ಭಾರೀ ನಿರಾಸೆ.. ಗೋವಾ ಬೀಚುಗಳೇ ಗತಿ!
ಗೋವಾದ ದಿ ಲೀಲಾ ಪ್ಯಾಲೇಸ್ ಹೋಟೆಲ್‌ನಲ್ಲಿ ಬಿಗಿ ಭದ್ರತೆ
ಆಯೇಷಾ ಬಾನು
| Edited By: |

Updated on:Nov 27, 2020 | 11:23 AM

Share

ಗೋವಾ: ರಾಜಧಾನಿ ದೆಹಲಿ ವಾಯುಮಾಲಿನ್ಯದಿಂದ ತುಂಬಿದ್ದು ಗ್ಯಾಸ್ ಚೇಂಬರ್​ನಂತಾಗಿದೆ. ಹೀಗಾಗಿ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ  ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಗ್ಯಾಸ್ ಚೇಂಬರ್​ನಂತಿರುವ ರಾಜಧಾನಿಯನ್ನು ತೊರೆದು ಗೋವಾದಲ್ಲಿ ಠಿಕಾಣಿ ಹೂಡಿದ್ದಾರೆ.

ಇದೇ ವೇಳೆ.. ಬೆಳಗಾವಿಯ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಪುತ್ರ ಮೃಣಾಲ್ ವಿವಾಹವನ್ನು ಭದ್ರಾವತಿಯ ಶಾಸಕ ಬಿ‌.ಕೆ.ಸಂಗಮೇಶ್ವರ ಅವರ ಸಹೋದರ ಬಿ.ಕೆ.ಶಿವಕುಮಾರ್ ಅವರ ಪುತ್ರಿ ಡಾ. ಹಿತಾ ಜೊತೆ ಇಂದು ಗೋವಾದಲ್ಲಿ ನಡೆದಿದೆ. ಈ ಮದುವೆಯಲ್ಲಿ VVIPಯಾಗಿ ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ. ಆದ್ರೆ ಇದರಿಂದ ಬೆಳಗಾವಿಯಿಂದ ಬಂದ ಲಕ್ಷ್ಮೀ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ.

ಗೋವಾದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ವಿವಾಹ ಹಿನ್ನೆಲೆಯಲ್ಲಿ ದಿ ಲೀಲಾ ಪ್ಯಾಲೇಸ್ ಹೋಟೆಲ್‌ನಲ್ಲಿ ನಡೆಯಲಿರುವ ವಿವಾಹದಲ್ಲಿ ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ. ಸದ್ಯ ಈಗ ಸೋನಿಯಾ ಗಾಂಧಿ ಅದೇ ಹೋಟೆಲ್‌ನಲ್ಲಿ ತಂಗಿದ್ದಾರೆ. ಹೀಗಾಗಿ ದಿ ಲೀಲಾ ಪ್ಯಾಲೇಸ್‌ಗೆ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪಾಸ್ ಇದ್ದ ವಾಹನಗಳಿಗಷ್ಟೇ ಹೋಟೆಲ್​ಗೆ ಎಂಟ್ರಿ ನೀಡಲು ಅವಕಾಶ ನೀಡಲಾಗುತ್ತಿದೆ. ಆದರೆ ಬೆಳಗಾವಿಯಿಂದ ಮದುವೆ ನೋಡಲು ಬಂದವರು ಭಾರಿ ಸಮಸ್ಯೆ ಎದುರಿಸುತ್ತಿದ್ದಾರೆ.

ಮದುವೆ ನೋಡಲು ಬಂದವರು ಬೀಜ್​ನಲ್ಲಿ ಕಾಲಹರಣ: ಹೆಬ್ಬಾಳ್ಕರ್ ಮಗನ ಮದುವೆಗೆ ಬಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುಖಂಡರು, ಜನತೆ ಪೇಚಿಗೆ ಸಿಲುಕಿದ್ದಾರೆ. ಹೋಟೆಲ್ ಒಳಗೆ ಎಂಟ್ರಿ ಇಲ್ಲದ ಕಾರಣ ಬೆಳಗಾವಿ ಜನರಿಗೆ ಮದುವೆ ನೋಡುವ ಭಾಗ್ಯ ಕೈ ತಪ್ಪಿದೆ. ಮದುವೆಗೆಂದು ಬಂದವರು ಅನಿವಾರ್ಯವಾಗಿ ಗೋವಾದ ಬೀಚ್​ನಲ್ಲಿ ಸುತ್ತಾಡ್ತಿದ್ದಾರೆ.

ಮದುವೆ ನೋಡಲೆಂದು ಬೆಳಗಾವಿಯಿಂದ ಬಂದಿದ್ದೇವೆ. ಇಲ್ಲಿ ಹೋಟೆಲ್ ಸಿಬ್ಬಂದಿ ನಮ್ಮನ್ನ ಒಳಗೆ ಪ್ರವೇಶಕ್ಕೆ ಅವಕಾಶ ಕೊಡುತ್ತಿಲ್ಲ. ನಮಗೆ ಇದು ಭಾರೀ ನಿರಾಸೆ ಉಂಟಾಗುವಂತೆ ಮಾಡಿದೆ. ಲಕ್ಷ್ಮೀ ಮೇಡಂ ಅವರಿಗೇ ಫೋನ್ ಮಾಡಿದ್ದೇವೆ. ಅವರು ಬಂದು ನಮ್ಮನ್ನ ಒಳಗೆ ಕರೆಸಿಕೊಳ್ಳುವ ನಿರೀಕ್ಷೆ ಇದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುಖಂಡರು ಹೇಳಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ನಿಶ್ಚಿತಾರ್ಥ ಸಮಾರಂಭ

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಮದುವೆಗೆ ಕ್ಷಣಗಣನೆ! ಸೋನಿಯಾ ಗಾಂಧಿ ಮದುವೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ

Published On - 11:23 am, Fri, 27 November 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?